ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಲಿಸ್ತಾನಿ ಉಗ್ರ ಅಮೃತ್‌ಪಾಲ್‌ ಸಿಂಗ್ ನೇಪಾಳಕ್ಕೆ ಎಸ್ಕೇಪ್‌: ಹೈ ಅಲರ್ಟ್‌ ಘೋಷಣೆ

Twitter
Facebook
LinkedIn
WhatsApp
WhatsApp Image 2023 03 28 at 8.54.08 AM

ಕಾಠ್ಮಂಡು (ಮಾರ್ಚ್‌ 28, 2023): ಪಂಜಾಬ್‌ ಪೊಲೀಸರ ನಿಗಾದಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿರುವ ಖಲಿಸ್ತಾನಿ ಪ್ರತ್ಯೇಕ ದೇಶದ ಪರ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಈಗಾಗಲೇ ಭಾರತದಿಂದ ಪರಾರಿಯಾಗಿ ನೇಪಾಳದಲ್ಲಿ ಅಡಗಿದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಯಾವುದೇ ಕಾರಣಕ್ಕೂ ದೇಶ ಬಿಡಲು ಅವಕಾಶ ನೀಡದಂತೆ ನೇಪಾಳ ಸರ್ಕಾರಕ್ಕೆ ಭಾರತ ಮನವಿ ಮಾಡಿದೆ.

‘ಮಾರ್ಚ್‌ 18ರಂದು ಪೊಲೀಸ್‌ ದಾಳಿ ವೇಳೆ ತಪ್ಪಿಸಿಕೊಂಡ ಅಮೃತ್‌ಪಾಲ್‌ ಸಿಂಗ್ (Amritpal Singh) ಸದ್ಯ ನೇಪಾಳದಲ್ಲಿ (Nepal) ತಲೆಮರೆಸಿಕೊಂಡಿರುವ ಶಂಕೆ ಇದೆ. ಈತನ ಬಳಿ ಭಾರತ (India) ಮತ್ತು ಇತರೆ ನಕಲಿ ಪಾಸ್‌ಪೋರ್ಟ್‌ ಇದೆ. ಇದನ್ನು ಬಳಸಿಕೊಂಡು ಆತ ಯಾವುದೇ ದೇಶಕ್ಕೆ ಪರಾರಿಯಾಗಲು ಯತ್ನಿಸುವ ಸಾಧ್ಯತೆ ಇದೆ. ಹೀಗಾಗಿ ಆತ ಎಲ್ಲೇ ಪತ್ತೆಯಾದರೂ ಆತನನ್ನು ಬಂಧಿಸಬೇಕು. ಮತ್ತೊಂದು ವಿದೇಶಕ್ಕೆ ತೆರಳಲು ಅವಕಾಶ ನೀಡಬಾರದು’ ಎಂದು ನೇಪಾಳದಲ್ಲಿನ ಭಾರತೀಯ ರಾಯಭಾರ ಕಚೇರಿ (Indian Embassy Office) ನೇಪಾಳ ಸರ್ಕಾರಕ್ಕೆ (Nepal Government) ಮನವಿ ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಕಾಠ್ಮಂಡು ಪೋಸ್ಟ್‌ ಪತ್ರಿಕೆ ವರದಿ ಮಾಡಿದೆ.

ಈ ಮಾಹಿತಿ ಮತ್ತು ಅಮೃತ್‌ಪಾಲ್‌ ಸಿಂಗ್‌ನ ವೈಯಕ್ತಿಕ ದಾಖಲೆಗಳನ್ನು ಸಂಬಂಧಿತ ಸಂಸ್ಥೆಗಳು, ಹೋಟೆಲ್‌ಗಳು, ವಿಮಾನಯಾನ ಸಂಸ್ಥೆಗಳಿಗೆ ರವಾನಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ