ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ವಿಮರ್ಶಕ ಜಿ.ಎಚ್ ನಾಯಕ್ ವಿಧಿವಶ

Twitter
Facebook
LinkedIn
WhatsApp
1 sadas 2 620x431 1

ಮೈಸೂರು: ಖ್ಯಾತ ವಿಮರ್ಶಕ ಜಿ.ಹೆಚ್​.ನಾಯಕ್​(88) (GH Nayak) ಅವರು ವಿಧಿವಶರಾಗಿದ್ದಾರೆ. ಅವರಿಗೆ ಪತ್ನಿ ಮೀರಾ ನಾಯಕ್​​, ಪುತ್ರಿ ಕೀರ್ತಿ ಹಾಗೂ ಮೊಮ್ಮಕ್ಕಳು ಇದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು (ಮೇ.26) ಮೈಸೂರಿನ (Mysore) ಕುವೆಂಪು ನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಜಿ.ಹೆಚ್​. ನಾಯಕ್ ಅವರು ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದವರಾದ ಜಿ.ಹೆಚ್​. ನಾಯಕ್ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ, ಮುಂದೆ ಪ್ರಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಇವರು ನಿವೃತ್ತಿ ಬಳಿಕ ಮೈಸೂರಿನ ಕುವೆಂಪು ನಗರದಲ್ಲಿ ನೆಲೆಸಿದ್ದರು

ನಾಯಕ್ ಅವರ ಕೃತಿಗಳು
ಸಮಕಾಲೀನ (೧೯೭೩)
ಅನಿವಾರ್ಯ (೧೯೮೦)
ನಿರಪೇಕ್ಷೆ (೧೯೮೪)
ನಿಜದನಿ (೧೯೮೮)
ವಿನಯ ವಿಮರ್ಶೆ (೧೯೯೧)
ಸಕಾಲಿಕ (೧೯೯೫)
ಗುಣ ಗೌರವ (೨೦೦೨)
ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (೨೦೦೨)
ಕೃತಿ ಸಾಕ್ಷಿ (೨೦೦೬)
ಸ್ಥಿತಿ ಪ್ರಜ್ಞೆ (೨೦೦೭)
ಮತ್ತೆ ಮತ್ತೆ ಪಂಪ (೨೦೦೮)
ಸಾಹಿತ್ಯ ಸಮೀಕ್ಷೆ (೨೦೦೯)
ಉತ್ತರಾರ್ಧ (೨೦೧೧)

ಸಂಪಾದನೆ

ಕನ್ನಡ ಸಣ್ಣಕಥೆಗಳು
ಹೊಸಗನ್ನಡ ಕವಿತೆಗಳು
ಸಂವೇದನೆ (ಅಡಿಗರ ಗೌರವ ಗ್ರಂಥ)
ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ
ಶತಮಾನದ ಕನ್ನಡ ಸಾಹಿತ್ಯ (ಸಂಪುಟ – ೧.೨)
ಆತ್ಮಕಥನ- ಬಾಳು

ಪ್ರಶಸ್ತಿಗಳು
ಉತ್ತರಾರ್ಧ ಕೃತಿಗೆ 2014 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ.
ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ ಬಹುಮಾನ’ ಲಭಿಸಿವೆ.
ಪಂಪ ಪ್ರಶಸ್ತಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ