ಶನಿವಾರ, ಮೇ 18, 2024
ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಾಯದ ನಡುವೆ ರೋಹಿತ್ ಹೋರಾಟ; ಟೀಮ್ ಇಂಡಿಯಾಗೆ ಸೋಲುಣಿಸಿ ಸರಣಿ ಗೆದ್ದ ಬಾಂಗ್ಲಾದೇಶ

Twitter
Facebook
LinkedIn
WhatsApp
ಗಾಯದ ನಡುವೆ ರೋಹಿತ್ ಹೋರಾಟ; ಟೀಮ್ ಇಂಡಿಯಾಗೆ ಸೋಲುಣಿಸಿ ಸರಣಿ ಗೆದ್ದ ಬಾಂಗ್ಲಾದೇಶ

ಢಾಕ(ಡಿ.07):  ಟಿ20 ವಿಶ್ವಕಪ್ ಸೋಲಿನ ಬಳಿಕ ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಇಲ್ಲ ಅನ್ನೋದು ಬಹಿರಂಗವಾಗಿದೆ. ಇದೀಗ ಮತ್ತೆ ಮತ್ತೆ ಇದು ಸಾಬೀತಾಗುತ್ತಿದೆ. ಇದೀಗ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನೂ ಭಾರತ ಕೈಚೆಲ್ಲಿದೆ. ಎರಡನೇ ಏಕದಿನ ಪಂದ್ಯದಲ್ಲಿ 272 ರನ್ ಟಾರ್ಗೆಟ್ ಬೆನ್ನಟ್ಟಿದ ಟೀಂ ಇಂಡಿಯಾಗೆ ಶ್ರೇಯಸ್ ಅಯ್ಯರ್ ಹಾಗೂ ಅಕ್ಸರ್ ಪಟೇಲ್ ಹೋರಾಟ ತೋರಿದರು.   ಅಂತಿಮ ಹಂತದಲ್ಲಿ ನಾಯಕ ರೋಹಿತ್ ಶರ್ಮಾ ಬೌಂಡರಿ ಸಿಕ್ಸರ್ ಸಿಡಿಸಿ ಅಬ್ಬರಿಸಿದರೂ ಗೆಲುವು ಸಿಗಲಿಲ್ಲ. ಅಂತಿಮ ಓವರ್‌ನಲ್ಲಿ 20 ರನ್ ಅವಶ್ಯಕತೆ ಇತ್ತು. ಆದರೆ ಭಾರತ 5 ರನ್ ಸೋಲು ಕಂಡಿತು. ಈ ಹಿನ್ನಡೆಯೊಂದಿಗೆ ಭಾರತ 3 ಪಂದ್ಯಗಳ ಸರಣಿಯನ್ನು 0-2 ಅಂತರದಲ್ಲಿ ಕೈಚೆಲ್ಲಿದೆ.

ಭಾರತಕ್ಕೆ 272 ರನ್ ಟಾರ್ಗೆಟ್ ಸಿಕ್ಕಿತ್ತು. ಫೀಲ್ಡಿಂಗ್ ವೇಳೆ ಕೈಬೆರಳಿಗೆ ಗಾಯಗೊಂಡಿದ್ದ ನಾಯಕ ರೋಹಿತ್ ಶರ್ಮಾ ಆಸ್ಪತ್ರೆ ದಾಖಲಾಗಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿಯಬೇಕಾಯತು. ಈ ಜೋಡಿ ನಿರೀಕ್ಷಿತ ಆರಂಭ ನೀಡಲು ವಿಫಲವಾಯಿತು. ಕೇವಲ 7 ರನ್ ಜೊತೆಯಾಟಕ್ಕೆ ಆರಂಭಿಕರ ಹೋರಾಟ ಅಂತ್ಯಗೊಂಡಿತು. ವಿರಾಟ್ ಕೊಹ್ಲಿ 5 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ಶಿಖರ್ ಧವನ್ 8 ರನ್ ಸಿಡಿಸಿ ಔಟಾದರು.

ಶ್ರೇಯಸ್ ಅಯ್ಯರ್ ಏಕಾಂಗಿ ಹೋರಾಟ ಆರಂಭಿಸಿದರು. ಇತ್ತ ವಾಶಿಂಗ್ಟನ್ ಸುಂದರ್ 11 ರನ್ ಸಿಡಿಸಿ ಔಟಾದರು. ಇತ್ತ ಕೆಎಲ್ ರಾಹುಲ್ 14 ರನ್ ಸಿಡಿಸಿ ಔಟಾದರು.  65 ರನ್‌ಗೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡಿತು. ಇಷ್ಟೇ ಅಲ್ಲ ಟೀಂ ಇಂಡಿಯಾ ಸೋಲಿನತ್ತ ವಾಲತೊಡಗಿತು. ಇತ್ತ ಅಕ್ಸರ್ ಪಟೇಲ್ ಹಾಗೂ ಶ್ರೇಯಸ್ ಅಯ್ಯರ್ ಜೊತೆಯಾಟ ಟೀಂ ಇಂಡಿಯಾದಲ್ಲಿ ಮತ್ತೆ ಗೆಲುವಿನ ಆಸೆ ಚಿಗುರಿಸಿತು. 

ಶ್ರೇಯಸ್ ಅಯ್ಯರ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಇತ್ತ ಅಕ್ಸರ್ ಪಟೇಲ್ ಉತ್ತಮ ಸಾಥ್ ನೀಡಿದರು. ಈ ಪಾರ್ಟ್ನಶಿಪ್ ಬಾಂಗ್ಲಾದೇಶದ ತಲೆನೋವು ಹೆಚ್ಚಿಸಿತು. ಜೊತೆಯಾಟ ಬ್ರೇಕ್ ಮಾಡಲು ಹಲವು ಪ್ರಯತ್ನಗಳನ್ನು ಮಾಡಿದರೂ ಪ್ರಯೋಜನವಾಗಲಿಲ್ಲ. ಶತಕದತ್ತ ಮುನ್ನುಗ್ಗಿದ ಶ್ರೇಯಸ್ ಅಯ್ಯರ್‌ಗೆ ಮೆಹದಿ ಹಸನ್ ವಿಕೆಟ್ ಒಪ್ಪಿಸಿದರು. ಅಯ್ಯರ್ 102 ಎಸೆತದಲ್ಲಿ 82 ರನ್ ಸಿಡಿಸಿ ಔಟಾದರು.

ಹಾಫ್ ಸೆಂಚುರಿ ಸಿಡಿಸಿದ ಅಕ್ಸರ್ ಪಟೇಲ್ 56 ರನ್ ಸಿಡಿಸಿ ಔಟಾದರು. ನಂತರ ಬಂದ ಶಾರ್ದೂಲ್ ಠಾಕೂರ್ ಹಾಗೂ ದೀಪಕ್ ಚಹಾರ್ ಅಬ್ಬರಿಸಲಿಲ್ಲ. ಆದರೆ ಗಾಯದಿಂದ ಚೇರಿಸಿಕೊಂಡ ನಾಯಕ ರೋಹಿತ್ ಶರ್ಮಾ ಅಂತಿಮ ಹಂತದಲ್ಲಿ ಕಣಕ್ಕಿಳಿದರು. ಈ ವೇಳೆ ಬಾಂಗ್ಲಾದೇಶದ ಆತ್ಮವಿಶ್ವಾಸ ಕುಗ್ಗಿತು. ಮೊಹಮ್ಮದ್ ಸಿರಾಜ್ ಜೊತೆ ಸೇರಿದ ರೋಹಿತ್ ಶರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು.

49ನೇ ಓವರ್‌ನಲ್ಲಿ ರೋಹಿತ್ ಶರ್ಮಾ ಎರಡು ಕ್ಯಾಚ್ ಡ್ರಾಪ್ ಮಾಡಲಾಯಿತು. ಇದು ಭಾರತಕ್ಕೆ ವರದಾನವಾಯಿತು. ಇತ್ತ ಮೊಹಮ್ಮದ್ ಸಿರಾಜ್ 2 ರನ್ ಸಿಡಿಸಿ ಔಟಾದರು. ಅಂತಿಮ 6 ಎಸೆತದಲ್ಲಿ ಭಾರತ ಗೆಲುವಿಗೆ 20 ರನ್ ಅವಶ್ಯಕತೆ ಇತ್ತು. ಮೊದಲ ಎಸತದಲ್ಲಿ ಯಾವುದೇ ರನ್ ಬರಲಿಲ್ಲ. ಎರಡನೇ ಎಸೆತ ಬೌಂಡರಿ ಗಟ್ಟಿದರೆ, ಮೂರನೇ ಎಸೆತದಲ್ಲಿ ಮತ್ತೊಂದ ಫೋರ್. ಆದರೆ ನಾಲ್ಕನೇ ಎಸೆತದಲ್ಲಿ ನೋ ರನ್. ಅಂತಿಮ 2 ಎಸೆತದಲ್ಲಿ 12 ರನ್ ಅವಶ್ಯಕತೆ ಇತ್ತು. 5ನೇ ಸಿಕ್ಸರ್ ಸಿಡಿಸಿದರೆ, ಅಂತಿಮ ಎಸೆತದಲ್ಲಿ ಯಾವುದೇ ರನ್ ಸಿಡಿಸಲು ಸಾಧ್ಯವಾಗಲಿಲ್ಲ. ಪರಿಣಾಮ ಭಾರತ 5 ರನ್ ಸೋಲು ಕಂಡಿತು. ರೋಹಿತ್ 21 ಎಸೆದಲ್ಲಿ 58 ರನ್ ಸಿಡಿಸಿದರು. ಈ ಸೋಲಿನೊಂದಿಗೆ ಬಾಂಗ್ಲಾದೇಶ 2-0 ಅಂತರದಲ್ಲಿ ಸರಣಿ ಗೆದ್ದಿತು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ