ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೌರಿಬಿದನೂರು: ಅಧಿಕೃತ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಬೆಕ್ಕಿನ ನೆರವು!

Twitter
Facebook
LinkedIn
WhatsApp
ಗೌರಿಬಿದನೂರು: ಅಧಿಕೃತ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಬೆಕ್ಕಿನ ನೆರವು!

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಇಲಿಗಳ ಹಾವಳಿಯಿಂದಾಗಿ ಅನೇಕ ದಾಖಲೆಗಳು ಅಸುರಕ್ಷಿತವಾಗಿರುವ ಅನೇಕ ಉದಾಹರಣೆಗಳಿವೆ. ಆದರೆ ಬೆಂಗಳೂರಿನಿಂದ 74 ಕಿ.ಮೀ ದೂರದಲ್ಲಿರುವ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಚಿಂತೆ ಇಲ್ಲ. ಕಾರಣ ಬೀರಾ.

ಸರ್ಕಾರಿ ದಾಖಲೆಗಳನ್ನೊಳಗೊಂಡ ಕಾಗದ ಪತ್ರಗಳನ್ನು ಕಚ್ಚಿ ತುಂಡರಿಸುವುದಕ್ಕೆ ಇಲಿಗಳಿಗೆ  ಬೀರಾ ಎಂಬ ಬೆಕ್ಕು ಅಡ್ಡಿಯಾಗಿದೆ. ಕಳೆದ ಒಂದು ವಾರದಲ್ಲಿ ಈ ಬೆಕ್ಕಿಗೆ ಮತ್ತೊಂದು ಬೆಕ್ಕು ಜೊತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ಎಲ್ಲರ ಗಮನದ ಕೇಂದ್ರಬಿಂದುವಾಗಿದೆ.

ಸರ್ಕಲ್ ಇನ್ಸ್ ಪೆಕ್ಟರ್ ಎಸ್ ಡಿ ಶಶಿಧರ ಅವರು ರೆಕಾರ್ಡ್ ರೂಮ್ ನಲ್ಲಿ ಇಲಿಗಳ ಹಾವಳಿಯ ಬಗ್ಗೆ ಆತಂಕಗೊಂಡಿದ್ದರು. ಆಗ ರೈಟರ್ ಗುರುರಾಜು ಅವರು ತಮ್ಮ ನೆರೆಮನೆಯಿಂದ 6 ತಿಂಗಳ ಹಿಂದೆ ಬೆಕ್ಕು ಒಂದನ್ನು ತಂದಿದ್ದರು. ಅದಕ್ಕೆ ಬೀರ ಎಂದು ನಾಮಕರಣ ಮಾಡಲಾಗಿತ್ತು. ಅದಕ್ಕೆ ಹಾಲು, ಅನ್ನ, ಹಾಗೂ ಆಗಾಗ ಚಿಕನ್ ತುಂಡುಗಳನ್ನು ನೀಡಲಾಗುತ್ತಿತ್ತು. ಇದರ ಜೊತೆಗೆ ಬೀರಾ ಇಲಿಗಳನ್ನು ಹಿಡಿಯುತ್ತದೆ. ಗ್ರಾಮೀಣ ಭಾಗದ ಪೊಲೀಸ್ ಠಾಣೆಯಲ್ಲಿ ಇಲಿಗಳ ಹಾವಳಿ ಸಾಮಾನ್ಯವಾದುದ್ದಾಗಿದ್ದು ಇಲ್ಲಿಯೂ ದಾಖಲೆಗಳನ್ನು ಹಾನಿಗೊಳಿಸಿತ್ತಾ? ಎಂಬ ಪ್ರಶ್ನೆಗೆ ಇನ್ಸ್ ಪೆಕ್ಟರ್ ಅವರ ಉತ್ತರ ಇಲ್ಲ ಎಂಬುದಾಗಿದೆ.

ನಾವು ತುಂಬಾ ಹಳೆಯ ಪ್ರಕರಣಗಳ ಕಡತಗಳನ್ನು ರೆಕಾರ್ಡ್ ರೂಮ್ ಗೆ ಹಾಕುತ್ತೇವೆ. ತುಂಬಾ ಮಹತ್ವದ ಕಡತಗಳನ್ನು ಜೋಪಾನವಾಗಿಡುತ್ತೇವೆ. ಹಾಗಾಗಿ ಇಲಿಗಳ ಕೈಗೆ ಸಿಗುವುದಿಲ್ಲ ಎಂದು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.

ಇಲ್ಲಿನ ಪೊಲೀಸ್ ಠಾಣೆಯ ಬೆಕ್ಕು ಬೀರಾ, ಅತ್ಯಂತ ಸ್ನೇಹಯುತವಾಗಿದ್ದು, ಒತ್ತಡ ನಿವಾರಣೆಗೂ ಸಹಕಾರಿಯಾಗಿದೆ. ಇಲ್ಲಿನ ಮಹಿಳಾ ಸಿಬ್ಬಂದಿಗಳಿಗೆ ಈ ಬೆಕ್ಕು ಮೆಚ್ಚಿನದ್ದಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ