ಮೈಸೂರು: ಚಿರತೆ ( Leopard ) ದಾಳಿಗೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಇಂದು(ಡಿಸೆಂಬರ್ 01) ಮೃತಪಟ್ಟಿದ್ದಾಳೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮನೆ ಮುಂದೆ ಕುಳಿತಿದ್ದಾಗ ಗುರುವಾರ ಸಂಜೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನ (20) ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.
ಟಿ.ನರಸೀಪುರ ತಾಲೂಕಿನಲ್ಲೇ ಚಿರತೆ ದಾಳಿಗೆ ಎರಡನೇ ಬಲಿಯಾಗಿದೆ. ಕಳೆದ ತಿಂಗಳಷ್ಟೇ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದೀಗ ಮೇಘನಾಳನ್ನ ಬಲಿಪಡೆದುಕೊಂಡಿದೆ. ಒಂದು ತಿಂಗಳಲ್ಲೇ ಚಿರತೆ ದಾಳಿಗೆ 2ನೇ ಬಲಿಯಾಗಿರುವುದರಿಂದ ಇದೀಗ ಟಿ. ನರಸೀಪುರ ತಾಲೂಕಿನ ಜನರಲ್ಲಿ ಚಿರತೆ ಭಯ ಶುರುವಾಗಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ.
ಇದರಿಂದ ರೊಚ್ಚಿಗೆದ್ದ ಎಸ್.ಕೆಬ್ಬೆಹುಂಡಿ ಗ್ರಾಮಸ್ಥರು, ಕೂಡಲೇ ಚಿರತೆ ಸೆರೆಹಿಡಿದು ಸ್ಥಳಾಂತರ ಮಾಡುವಂತೆ ಮೈಸೂರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಮೈಸೂರು ಭಾಗದಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಲೇ ಇವೆ. ಇದರಿಂದ ಜನರು ಭಯದಿಂದಲೇ ಹೊರಗಡೆ ಓಡಾಡುವಂತಾಗಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?