ಬುಧವಾರ, ಮೇ 1, 2024
ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾದಲ್ಲಿ ಮತ್ತೆ ಕೋವಿಡ್‌ ಮಹಾಸ್ಪೋಟ, ಸದ್ಯದ ಮಟ್ಟಿಗೆ ಕರ್ನಾಟಕ ಸೇಫ್‌

Twitter
Facebook
LinkedIn
WhatsApp
ಚೀನಾದಲ್ಲಿ ಮತ್ತೆ ಕೋವಿಡ್‌ ಮಹಾಸ್ಪೋಟ, ಸದ್ಯದ ಮಟ್ಟಿಗೆ ಕರ್ನಾಟಕ ಸೇಫ್‌

ಕೊರೋನಾ ಸೋಂಕಿನ ತವರೂರು ಚೀನಾದಲ್ಲಿ ಮತ್ತೆ ಕೋವಿಡ್‌ ಮಹಾಸ್ಪೋಟವಾಗಿದ್ದರೂ ಸದ್ಯದ ಮಟ್ಟಿಗೆ ರಾಜ್ಯ ಸುರಕ್ಷಿತ (Safe)ವಾಗಿದೆ. ನವೆಂಬರ್‌ ತಿಂಗಳಿನಲ್ಲಿ ರಾಜ್ಯದಲ್ಲಿ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು, ಇದು ಕೋವಿಡ್‌ ರಾಜ್ಯ ವ್ಯಾಪಿ ಹಬ್ಬಿದ ಬಳಿಕ ತಿಂಗಳೊಂದರಲ್ಲಿ ವರದಿಯಾದ ಕನಿಷ್ಠ ಸಾವಿನ ಪ್ರಮಾಣವಾಗಿದೆ. ಹಾಗೆಯೇ ರಾಜ್ಯದ ಕೋವಿಡ್‌ ರಾಜಧಾನಿಯಾಗಿ ಬದಲಾಗಿದ್ದ ಬೆಂಗಳೂರು ನಗರದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಯಾವುದೇ ಸೋಂಕಿತರು ಸಾವನ್ನಪ್ಪಿಲ್ಲ.

2020ರ ಮಾರ್ಚ್‌ 8ಕ್ಕೆ ರಾಜ್ಯದಲ್ಲಿ ಮೊದಲ ಕೋವಿಡ್‌ ಪ್ರಕರಣ (Covid case) ದೃಢಪಟ್ಟಿತ್ತು. ಮಾರ್ಚ್‌ 12ಕ್ಕೆ ಕಲಬುರಗಿಯ ವೃದ್ಧರೊಬ್ಬರು ಸೋಂಕು ಉಲ್ಬಣಿಸಿ ಮೃತಪಟ್ಟಿದ್ದು ದೇಶದಲ್ಲೇ ಮೊದಲ ಕೋವಿಡ್‌ ಸಾವಾಗಿತ್ತು. ಆ ತಿಂಗಳಲ್ಲಿ ಮೂವರು ಸಾವನ್ನಪ್ಪಿದ್ದರು. ಸೋಂಕು ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಪ್ರತಿ ತಿಂಗಳು ಸಾವಿರಗಟ್ಟಲೆ ಜನ ಮೃತರಾಗಿದ್ದರು. ಆದರೆ ಇತ್ತಿಚಿನ ದಿನಗಳಲ್ಲಿ ಕೊರೋನಾ ವೈರಾಣು ವಿವಿಧ ರೂಪಾಂತರ (Variant) ಹೊಂದುತ್ತಿದ್ದರೂ ಸೋಂಕಿತರಿಗೆ ಅಪಾಯಕಾರಿಯಾಗಿ (Dangerous) ಪರಿಣಮಿಸಿಲ್ಲ ಎಂಬುದನ್ನು ಅಂಕಿ-ಅಂಶಗಳು ಪುಷ್ಟೀಕರಿಸಿವೆ.

ಎಪ್ರಿಲ್‌ ತಿಂಗಳಿನಲ್ಲಿ ಪ್ರಕರಣದ ಸಂಖ್ಯೆ ಹೆಚ್ಚಳ
ಕಳೆದ ಏಪ್ರಿಲ್‌ ತಿಂಗಳಿನಲ್ಲಿ 2,108 ಪ್ರಕರಣಗಳು ಪತ್ತೆಯಾಗಿ ಐವರು ಮೃತಪಟ್ಟಿದ್ದರು. ಆದರೆ ಆ ಬಳಿಕದ ತಿಂಗಳಲ್ಲಿ ಮೃತರು ಮತ್ತು ಸೋಂಕಿತರ ಸಂಖ್ಯೆ ಏರುತ್ತಾ ಸಾಗಿತ್ತು. ಮೇ ತಿಂಗಳಿನಲ್ಲಿ ಆರು ಮಂದಿ ಅಸುನೀಗಿದ್ದು 4,480 ಪ್ರಕರಣ ಪತ್ತೆಯಾಗಿತ್ತು. ಜೂನ್‌ನಲ್ಲಿ ಹತ್ತು ಸಾವು, 17,309 ಪ್ರಕರಣ, ಜುಲೈಯಲ್ಲಿ 29 ಸಾವು, 37,952 ಪ್ರಕರಣ, ಆಗಸ್ಟ್‌ನಲ್ಲಿ ಬರೋಬ್ಬರಿ 97 ಸಾವು, 44,191 ಪ್ರಕರಣ ದಾಖಲಾಗಿತ್ತು.

ಆಗಸ್ಟ್‌ ನಂತರ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆ:
ಇದಾದ ಬಳಿಕ ಕಳೆದ ಮೂರು ತಿಂಗಳಿನಿಂದ ಕೋವಿಡ್‌ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆಯಲ್ಲಿ ನಿರಂತರ ಇಳಿಕೆ ಕಂಡುಬಂದಿದೆ. ಸೆಪ್ಟೆಂಬರ್‌ನಲ್ಲಿ 41 ಸಾವು, 13,271 ಪ್ರಕರಣ, ಅಕ್ಟೋಬರ್‌ನಲ್ಲಿ 14 ಸಾವು ಮತ್ತು 4,085 ಪ್ರಕರಣ ವರದಿಯಾಗಿತ್ತು. ಇದೀಗ ನವೆಂಬರ್‌ನಲ್ಲಿ ಅತ್ಯಂತ ಕಡಿಮೆ ಸಾವು ವರದಿಯಾಗಿದ್ದು 2,542 ಪ್ರಕರಣ ಪತ್ತೆಯಾಗಿದೆ. ಒಟ್ಟಾರೆ ರಾಜ್ಯದ ಮರಣ ದರ ಶೇ. 0.15ಕ್ಕೆ ಕುಸಿದಿದೆ.

ಬೆಂಗಳೂರಿನಲ್ಲಿ ಶೂನ್ಯ ಸಾವು
ಈ ಮಧ್ಯೆ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಕೋವಿಡ್‌ ಸಾವು ನೋವು ಮತ್ತು ಪ್ರಕರಣ ಕಂಡಿದ್ದ ಬೆಂಗಳೂರಿನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಸೋಂಕಿತರ ಸಾವು ವರದಿಯಾಗಿಲ್ಲ. ಅಕ್ಟೋಬರ್‌ 13ರ ಕೋವಿಡ್‌ ದೈನಂದಿನ ವರದಿಯಲ್ಲಿ ಅಕ್ಟೋಬರ್‌ 9ಕ್ಕೆ ಸೋಂಕಿನಿಂದ ಮೃತಪಟ್ಟಿದ್ದ 65 ವರ್ಷದ ಹಿರಿಯ ನಾಗರಿಕರ ಪ್ರಕರಣವನ್ನು ಉಲ್ಲೇಖಿಸಲಾಗಿತ್ತು. ಇದೇ ವರದಿಯಲ್ಲಿ ಸೆಪ್ಟೆಂಬರ್‌ 28ಕ್ಕೆ ಮೃತರಾದ ಸಹ ಅಸ್ವಸ್ಥತೆ ಹೊಂದಿದ್ದ 66 ವರ್ಷದ ಮಹಿಳೆಯ (Woman) ಪ್ರಕರಣವನ್ನು ಪ್ರಸ್ತಾಪಿಸಲಾಗಿತ್ತು. ಅಂದರೆ ಕಳೆದ ಎರಡು ತಿಂಗಳಿನಲ್ಲಿ ನಗರದಲ್ಲಿ ಏಕಮಾತ್ರ ಕೋವಿಡ್‌ ಸೋಂಕಿತನ ಸಾವು ಸಂಭವಿಸಿದೆ.

ಚೀನಾ ಕೋವಿಡ್‌ ಮೇಲೆ ಕಣ್ಣಿಡಬೇಕು
ಪ್ರಸಕ್ತ ಕೋವಿಡ್‌ ಸ್ಥಿತಿಗತಿಯ ಬಗ್ಗೆ ರಾಜ್ಯದ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಎಂ. ಕೆ. ಸುದರ್ಶನ್‌ ಮಾತನಾಡಿ, ಚೀನಾದಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆ ಆಗಿದೆ. ಆದ್ದರಿಂದ ವಿಮಾನ ಪ್ರಯಾಣಿಕರ ಮೇಲೆ ನಿಗಾ ಇಟ್ಟರೆ ಒಳ್ಳೆಯದು. ಆದರೆ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯವೇ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಅವರು ಮಾರ್ಗದರ್ಶಿ (Guidelines) ಬಿಡುಗಡೆ ಮಾಡಿ ರಾಜ್ಯಗಳಿಗೆ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳುವ ಅವಕಾಶ ನೀಡಿದ್ದರು. ಆ ಹಿನ್ನೆಲೆಯಲ್ಲಿ ನಾವು ಅನೇಕ ಕ್ರಮ ಕೈಗೊಂಡಿದ್ದೆವು. ಆದರೆ ಈಗ ಇದಕ್ಕೆ ಅವಕಾಶವಿಲ್ಲ. ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಈ ಬಗ್ಗೆ ಯಾವುದೇ ಶಿಫಾರಸು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ