ಚೆನ್ನೈ : ನಡುರಸ್ತೆಯಲ್ಲೇ ದುಷ್ಕರ್ಮಿಗಳಿಂದ ಬಿಜೆಪಿ ಮುಖಂಡನ ಹತ್ಯೆ!
ತಮಿಳುನಾಡಿನಲ್ಲಿ ನಡುರಸ್ತೆಯಲ್ಲೇ ಬಿಜೆಪಿ (BJP) ಮುಖಂಡನನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿನಡೆಸಿದ್ದರು. ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದೆ. ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಎಸ್ಸಿ-ಎಸ್ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು.
ಪೂನಮಲ್ಲೆ ಹೆದ್ದಾರಿಯ ನಸರತ್ಪೇಟೆ ಸಿಗ್ನಲ್ ಬಳಿ ಕಾರು ಬಂದಾಗ ಏಕಾಏಕಿ ಶಂಕರ್ ಅವರ ಕಾರನ್ನು ಅಡ್ಡಗಟ್ಟಿದ ಆಗಂತುಕರು ಕಾರಿನ ಮೇಲೆ ಕಂಟ್ರಿ ಬಾಂಬ್ ಎಸೆದಿದ್ದಾರೆ. ಇದರಿಂದ ಗಾಬರಿಗೊಂಡ ಶಂಕರ್ ಕಾರು ನಿಲ್ಲಿಸಿ ಅಲ್ಲಿಂದ ಓಡಿ ಹೋಗಿದ್ದಾರೆ. ಆದರೆ, ಗ್ಯಾಂಗ್ ಆತನನ್ನು ಹಿಂಬಾಲಿಸಿ ಕೊಂದು ಹಾಕಿ ನಂತರ ಪರಾರಿಯಾಗಿದ್ದಾರೆ. ಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
வளர்புரம் ஊராட்சி மன்ற தலைவரும், @BJP4Tamilnadu பட்டியல் அணி மாநிலப் பொருளாளருமான பிபிஜி சங்கர் அவர்கள், சமூக விரோதிகளால் நாட்டு வெடிகுண்டு வீசி, வெட்டிப் படுகொலை செய்யப்பட்டுள்ள செய்தியறிந்து மிகுந்த அதிர்ச்சியடைந்தேன். (1/4) pic.twitter.com/NjzFCIj734
— K.Annamalai (@annamalai_k) April 28, 2023
ಮಾಹಿತಿ ಪಡೆದ ನಸರತ್ಪೇಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಶಂಕರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪವನ್ನು ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಶಂಕರ್ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ 15ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.