ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಭಾನುವಾರ ಮುಂಜಾನೆ ಜಮ್ಮುವಿನ ವಿಮಾನ ನಿಲ್ಧಾಣದಲ್ಲಿ ಬಾಂಬ್ ಸ್ಪೋಟಿಸುವ ಮೂಲಕ ಕುಕೃತ್ಯ ಮೆರೆದಿದ್ದ ಉಗ್ರರು ಆದೇ ದಿನ ರಾತ್ರಿ ವೇಳೆಗೆ ಜಮ್ಮು-ಕಾಶ್ಮೀರದ ಮಾಜಿ ಪೊಲೀಸ್ ಅಧಿಕಾರಿ, ಅವರ ಪತ್ನಿ ಮತ್ತು ಪುತ್ರಿಯನ್ನು ಹತ್ಯೆ ಮಾಡುವ ಮೂಲಕ ಅಟ್ಟಹಾಸ ಮರೆಸಿದ್ದಾರೆ. ಈ ಘಟನೆ ಜಮ್ಮುಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹರಿಪರಿಗಂ ಗ್ರಾಮದಲ್ಲಿ ನಡೆದಿದೆ.
ಮಾಜಿ ಪೊಲೀಸ್ ಅಧಿಕಾರಿ ಮಾಜಿ ಎಸ್ಪಿಒ ಫಯಾಜ್ ಅಹ್ಮದ್ ಮನೆಗೆ ನುಗ್ಗಿದ ಉಗ್ರರು ನಿರಂತರ ಗುಂಡಿನ ಸುರಿಮಳೆಗೈದು ಅವರನ್ನು ಹಾಗೂ ಅವರ ಪತ್ನಿ, ಪುತ್ರಿ ಸೇರಿ ಮೂವನ್ನು ಕೊಂದು ಹಾಕಿ ಎಸ್ಕೇಪ್ ಆಗಿದ್ದಾರೆ. ಇನ್ನು ಗುಂಡಿನ ದಾಳಿಗೆ ಮಾಜಿ ಪೊಲೀಸ್ ಅಧಿಕಾರಿ ಫಯಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿ ರಾಜಾ ಬೇಗಂ ಮತ್ತು ಪುತ್ರಿ ರಫಿಯಾ ಗಂಭೀರವಾಗಿ ಗಾಯಗೊಂಡಿದ್ದರು. ಇವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸೇರಿಸಿದ ಕೆಲವೇ ಹೊತ್ತಲ್ಲಿ ಪತ್ನಿ ರಾಜಾ ಬೇಗಂ ಕೂಡ ಸಾವನ್ನಪ್ಪಿದ್ದಾರೆ.
ಪುತ್ರಿ ರಫಿಯಾಗೆ ಚಿಕಿತ್ಸೆ ಮುಂದುವರಿಸಲಾಗಿತ್ತಾದರೂ ಅವರೂ ಬದುಕಲಿಲ್ಲ ಎಂದು ಜಮ್ಮು-ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ. ಇನ್ನು ನಾಪತ್ತೆಯಾಗಿರುವ ಉಗ್ರರಿಗೆ ಪೊಲೀಸರು ಹಾಗೂ ಯೋಧರು ಹುಡುಕಾಟ ಆರಂಭಿಸಿದ್ದಾರೆ. ಘಟನೆಯನ್ನು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತೀವ್ರವಾಗಿ ಖಂಡಿಸಿದ್ದಾರೆ.
ಭಾನುವಾರ ಬೆಳಗ್ಗೆ ಜಮ್ಮುವಿನ ಏರ್ಪೋರ್ಟ್ ಬಳಿ ಅವಳಿ ಬಾಂಬ್ ಸ್ಪೋಟ ಸಂಭವಿಸಿತ್ತು. ಡ್ರೋನ್ ಮೂಲಕ ಸ್ಪೋಟ ನಡೆಸಲಾಗಿತ್ತು.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?