ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ನ ಡಿ ಎಂ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ!

Twitter
Facebook
LinkedIn
WhatsApp
Bigg Boss Kannada 5 Contestants Chandan Shetty And Niveditha Gowda 1

ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮರ್ಥ ಎದುರಾಳಿ ಎಂದೇ ಪರಿಗಣಿತವಾಗಿದ್ದ ಜೆಡಿಎಸ್‌ನ ಡಿ ಎಂ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ವೈ.ಎಸ್​.ವಿ ದತ್ತಾ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಜೆಡಿಎಸ್​ನ ಮತ್ತೊಂದು ಪ್ರಮುಖ ವಿಕೆಟ್ ಪತನವಾಗಿದೆ.  ರಾಮನಗರ ಜಿಲ್ಲೆಯ ಜೆಡಿಎಸ್​ನ ಪ್ರಭಾವಿ ನಾಯಕ, 2008ರಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ದೂಂತೂರು ವಿಶ್ವನಾಥ್​, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್  ಸೇರಿದ್ದಾರೆ.

2008ರ ಚುನಾವಣೆಯಲ್ಲಿ ಡಿ ಕೆ ಶಿವಕುಮಾರ್ ಅವರೆದುರು ಜೆಡಿಎಸ್ ಅಭ್ಯರ್ಥಿಯಾಗಿದ್ದ ವಿಶ್ವನಾಥ್, ಕೇವಲ ಎಂಟು ಸಾವಿರ ಮತಗಳ ಅಂತರದಿಂದ ಪರಾಜಯಗೊಂಡಿದ್ದರು. ಅತಿ ಕಡಿಮೆ ಮತಗಳ ಅಂತರದಲ್ಲಿ ಸೋಲನ್ನಪ್ಪಿದ ಕಾರಣ ಹಾಗೂ ವಿಶ್ವನಾಥ್ ಅವರ ಪರವಿದ್ದ ಜನರ ಒಲವಿನ ಹಿನ್ನೆಲೆ ಪರಿಗಣಿಸಿ ಮುಂದಿನ ಚುನಾವಣೆಗಳಲ್ಲಿ ಡಿ ಕೆ ಶಿವಕುಮಾರ್ ಅವರಿಗೆ ಸಮರ್ಥ ಎದುರಾಳಿಯಾಗುವ ಭರವಸೆಯನ್ನು ವಿಶ್ವನಾಥ್ ಮೂಡಿಸಿದ್ದರು. ಆದರೆ ಬದಲಾದ ಪರಿಸ್ಥಿತಿಗಳಿಂದ ಡಿ ಎಂ ವಿಶ್ವನಾಥ್ ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ಕನಕಪುರ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧೆ ಮಾಡಿ ಕೇವಲ 7 ಸಾವಿರ ಅಂತರದಿಂದ ಸೋಲು ಅನುಭಸಿದ್ದರು. ವಿಶ್ವನಾಥ್ ತಂದೆ, ಅವರ ತಾತ ನನ್ನ ಪರ ಚುನಾವಣೆ ಪ್ರಚಾರ ಮಾಡಿದ್ದಾರೆ. ಆದರೆ ಜೆಡಿಎಸ್​ನಲ್ಲಿ ನಾಯಕತ್ವ ಬೆಳೆಸಿಕೊಳ್ಳಲು ಹೋಗಿದ್ದರು. ಆದರೆ ಈ ರಾಜ್ಯ, ನಮ್ಮ ಜಿಲ್ಲೆ ಹಾಗೂ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರಿದ್ದಾರೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ