ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೈಲ ಬೆಲೆ ಏರಿಕೆಯ ತತ್ತರ, KSRTC ಯಿಂದ 50 ಎಲೆಕ್ಟ್ರಿಕ್‌ ಬಸ್‌ಗಳ ಖರೀದಿ

Twitter
Facebook
LinkedIn
WhatsApp
ತೈಲ ಬೆಲೆ ಏರಿಕೆಯ ತತ್ತರ, KSRTC ಯಿಂದ 50 ಎಲೆಕ್ಟ್ರಿಕ್‌ ಬಸ್‌ಗಳ ಖರೀದಿ

ಬೆಂಗಳೂರು (ಜು.19): ಡೀಸೆಲ್‌ ಬೆಲೆ ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ ವಿದ್ಯುತ್‌ ಬಸ್‌ಗಳತ್ತ ಮುಖ ಮಾಡುತ್ತಿದ್ದು, ಖಾಸಗಿ ಕಂಪನಿಯಿಂದ ಒಪ್ಪಂದ ಮೇರೆಗೆ 50 ಬಸ್‌ಗಳನ್ನು ಪಡೆದುಕೊಳ್ಳಲು ಮುಂದಾಗಿದೆ. 2022ರ ಡಿಸೆಂಬರ್‌ ತಿಂಗಳಲ್ಲಿ 25 ಬಸ್‌ಗಳು ಮತ್ತು 2023ರ ಮಾರ್ಚ್‌ನಲ್ಲಿ  25 ಬಸ್‌ಗಳು ವಿದ್ಯುತ್‌ ಬಸ್‌ಗಳು ಲಭ್ಯವಾಗಲಿದೆ. 2023ರ ಜನವರಿಯಿಂದ ಬೆಂಗಳೂರು ನಗರದಿಂದ ವಿವಿಧ ಭಾಗಗಳಿಗೆ ಕೆಲ ಬಸ್‌ಗಳು ಕಾರ್ಯಾಚರಣೆ ಮಾಡುವ ನಿರೀಕ್ಷೆಯಿದೆ. ಹೈದ್ರಾಬಾದ್‌ ಮೂಲದ ಒಲೆಕ್ಟ್ರಾ ಕಂಪನಿಯಿಂದ ಹವಾನಿಯಂತ್ರಿತ (ಎಸಿ) 50 ಎಲೆಕ್ಟ್ರಿಕ್‌ ಬಸ್‌ಗಳನ್ನು ಒಪ್ಪಂದದ ಮೇರೆಗೆ ಪಡೆದುಕೊಳ್ಳಲು ನಿರ್ಧರಿಸಲಾಗಿದೆ. ಈ ಬಸ್‌ಗಳು ಪ್ರತಿ ದಿನ 450 ಕಿ.ಮೀ. ಕಾರ್ಯಾಚರಣೆ ಮಾಡಲಿವೆ. ಒಮ್ಮೆ ಚಾರ್ಜಿಂಗ್‌ ಮಾಡಿದಲ್ಲಿ 250 ಕಿ.ಮೀ. ಸಂಚರಿಸುವ ಸಾಮರ್ಥ್ಯ ಹೊಂದಿವೆ. ಬಸ್‌ ಚಾಲಕರನ್ನು ಮತ್ತು ನಿರ್ವಹಣೆಯನ್ನು ಕಂಪನಿಯೇ ಮಾಡಲಿದೆ. ಜತೆಗೆ, ಎಲೆಕ್ಟ್ರಿಕ್‌ ಚಾರ್ಜಿಂಗ್‌ ವೆಚ್ಚವನ್ನು ಕಂಪನಿ ಭರಿಸಲಿದೆ. ಆದರೆ, ನಿರ್ವಾಹಕರನ್ನು ಮಾತ್ರ ಕೆಎಸ್‌ಆರ್‌ಟಿಸಿ ಒದಗಿಸಲಿದ್ದು, ಪ್ರತಿ ಕಿ.ಮೀ. 55 ರು.ಗಳನ್ನು ಪಾವತಿ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಚಾರ್ಜಿಂಗ್‌ ಘಟಕಗಳು: ಎಲೆಕ್ಟ್ರಿಕ್‌ ಬಸ್‌ಗಳನ್ನು ಒದಗಿಸುತ್ತಿರುವ ಒಲೆಕ್ಟ್ರಾ ಕಂಪೆನಿಯವರೇ ಬಸ್‌ನ ಚಾರ್ಜಿಂಗ್‌ ಘಟಕಗಳನ್ನು ಪ್ರಾರಂಭಿಸಲಿದೆ. ಆದರೆ, ಘಟಕಗಳ ನಿರ್ಮಾಣಕ್ಕೆ ಕೆಎಸ್‌ಆರ್‌ಟಿಸಿ ಸ್ಥಳ ನೀಡಬೇಕಾಗಿದೆ. ಇದಕ್ಕಾಗಿ ಹಲವು ಭಾಗಗಳ ಡಿಪೋಗಳನ್ನು ಸ್ಥಳಾವಕಾಶ ಪರಿಶೀಲನೆ ಮಾಡಿದ್ದು, ಶೀಘ್ರದಲ್ಲಿ ಘಟಕ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಮಾಹಿತಿ ನೀಡಿದರು.

ಇತರೆ ನಗರಕ್ಕೂ ಸೇವೆ: ಎಲೆಕ್ಟ್ರಿಕ್‌ ಬಸ್‌ಗಳು ಸಂಚಾರ ಮಾಡುವ ಸಾಮರ್ಥ್ಯವನ್ನು ಪರಿಗಣಿಸಿ ಕಾರ್ಯಾಚರಣೆ ಮಾಡುವ ಸಂಬಂಧ ತೀರ್ಮಾನಿಸಲಾಗಿದೆ. ಬೆಂಗಳೂರು ನಗರದಿಂದ ಮೈಸೂರು, ಚಿಕ್ಕಮಗಳೂರು, ವಿರಾಜಪೇಟೆ, ಮಡಿಕೇರಿ, ಶಿವಮೊಗ್ಗ, ದಾವಣಗೆರೆ ನಡುವೆ ಸಂಚರಿಸಲಿವೆ. ಈ ಎಲ್ಲ ಭಾಗಗಳಲ್ಲಿ ಒಂದೊಂದು ಸ್ಥಳದಲ್ಲಿ ಚಾರ್ಜಿಂಗ್‌ ಘಟಕ ಪ್ರಾರಂಭಕ್ಕೆ ಕೆಎಸ್‌ಆರ್‌ಟಿಸಿ ಸ್ಥಳಾವಕಾಶ ಮಾಡಿಕೊಡಲಿದೆ ಎಂದು ಅವರು ಹೇಳಿದರು.

ಒಲೆಕ್ಟ್ರಾ ಕಂಪನಿಯಿಂದ 50 ಎಲೆಕ್ಟ್ರಿಕ್‌ ಬಸ್‌ಗಳನ್ನು ಒಪ್ಪಂದ ಮೇರೆಗೆ ಪಡೆದುಕೊಳ್ಳುತ್ತಿದ್ದೇವೆ. ಸೆಪ್ಟಂಬರ್‌ ತಿಂಗಳಲ್ಲಿ ಒಂದು ಬಸ್‌ ಬರಲಿದ್ದು, ಅದನ್ನು ಕಾರ್ಯಾಚರಣೆ ನಡೆಸಿ ಅಗತ್ಯವಿರುವ ಬದಲಾವಣೆಗಳನ್ನು ಕಂಪನಿಗೆ ತಿಳಿಸಲಾಗುವುದು. ಅದಕ್ಕೆ ತಕ್ಕಂತೆ ಸಿದ್ಧಪಡಿಸಿ ಒದಗಿಸಲಿದೆ. ಈ ಬಸ್‌ಗಳಿಗೆ ಬೇಕಾಗಿರುವ ಚಾರ್ಜಿಂಗ್‌ ಘಟಕಗಳ ನಿರ್ಮಾಣ ಶೀಘ್ರದಲ್ಲಿ ಪ್ರಾರಂಭವಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ