ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಸಿದ ಬಿಸಿಗಾಳಿ, ದೇಶದಲ್ಲೇ ಮೊದಲು!

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಸಿದ ಬಿಸಿಗಾಳಿ, ದೇಶದಲ್ಲೇ ಮೊದಲು!

ಬೆಂಗಳೂರು: ಅರಬ್ಬೀ ಸಮುದ್ರದ  ಮೇಲೆ ಆಂಟಿಸೈಕ್ಲೋನ್ ಗಾಳಿ ಬೀಸಿದ ಪರಿಣಾಮ ಕರಾವಳಿ ಪ್ರದೇಶದ ಎರಡು ಜಿಲ್ಲೆಗಳಾದ ದಕ್ಷಿಣ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಸೋಮವಾರದವರೆಗು ಬಿಸಿ ಗಾಳಿ ಬೀಸಿದೆ. ಈ ಬೇಸಿಗೆಗಾಲದಲ್ಲಿ ದೇಶದಲ್ಲೇ ಇದೇ ಮೊದಲ ಬಿಸಿಗಾಳಿಯಾಗಿದೆ. ಶನಿವಾರ (ಮಾ.4) ರಂದು ದೇಶದ ವಿವಿಧ ಭಾಗಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ​ ದಾಖಲಾಗಿತ್ತು. ಇನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಹೊನ್ನಾವರದಲ್ಲಿ 39 ರಿಂದ 40.4 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿತ್ತು. ಇದು ಸಾಮನ್ಯ ತಾಪಮಾನಕ್ಕಿಂತ 6 ಡಿಗ್ರಿ ಸೆಲ್ಸಿಯಸ್​​ಗಿಂತ​ ಹೆಚ್ಚಿತ್ತು.

ರವಿವಾರ (ಮಾ.5) ರಂದು ಗೋವಾದಲ್ಲಿ ಅತಿ ಹೆಚ್ಚಿನ 37.1 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದ್ದು, ಸಾಮಾನ್ಯ ತಾಪಮಾನಕ್ಕಿಂತ 5 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗಿದೆ. ಇನ್ನು ಮುಂಬೈನಲ್ಲಿ 38.1 ಡಿಗ್ರಿ ಸೆಲ್ಸಿಯಸ್​, ಹೊನ್ನಾವರದಲ್ಲಿ 37.3 ಡಿಗ್ರಿ ಸೆಲ್ಸಿಯಸ್​, ಕನ್ನುರ್​​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಆಂಟಿಸೈಕ್ಲೋನಿಕ್​​ನಿಂದ ಪಶ್ಚಿಮ ಕರಾವಳಿಯಲ್ಲಿ ಬೆಚ್ಚಗಿನ ವಾತಾವರಣವಿರುತ್ತದೆ. ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಬಿಸಿ ಗಾಳಿ ಅಪರೂಪವಾಗಿದ್ದು, ಈ ಬಾರಿ ಕರಾವಳಿ ಕರ್ನಾಟಕದಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ ಆದರೆ ಅದೃಷ್ಟವಶಾತ್ ಬೆಚ್ಚಗಿನ ಅನುಭವ ಕಡಿಮೆಯಾಗಿತ್ತು. ತಾಪಮಾನವು ಮತ್ತೆ ಕುಸಿಯಲು ಪ್ರಾರಂಭಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಯ ಮಹಾನಿರ್ದೇಶಕ ಎಂ ಮೊಹಾಪಾತ್ರ ಹೇಳಿದ್ದಾರೆ.

ಪಶ್ಚಿಮ ಕರಾವಳಿಯ ಪ್ರದೇಶಗಳಲ್ಲಿ ಮಾರ್ಚ್‌ನಲ್ಲಿ ಬಿಸಿ ಗಾಳಿ ಬೀಸುತ್ತದೆ. ಮತ್ತು ಏಪ್ರಿಲ್ ಅಂತ್ಯ ಮತ್ತು ಮೇ ಆರಂಭದಲ್ಲಿ ಪೂರ್ವ ಕರಾವಳಿ ಪ್ರದೇಶಗಳಾದ ಒಡಿಶಾ ಮತ್ತು ಆಂಧ್ರಪ್ರದೇಶಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಫೆಬ್ರವರಿಯಲ್ಲಿ ಆಂಟಿಸೈಕ್ಲೋನ್‌ನಿಂದ ಪಶ್ಚಿಮ ಕರಾವಳಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಇಂದಿನಿಂದ (ಮಾ.7) ರಾಜ್ಯದ ಕರಾವಳಿ ಪ್ರದೇಶದಲ್ಲಿ ಬಿಸಿ ಗಾಳಿ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನಶಾಸ್ತ್ರಜ್ಞ ಮಹೇಶ್ ಪಲಾವತ್ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ