ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ನಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೋಮವಾರ ರಾತ್ರಿ ಟ್ರಕ್ ಚಾಲಕರನ್ನು (truck drivers) ಭೇಟಿ ಮಾಡಿ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುವುದಕ್ಕಾಗಿ ಅವರ ಮನ್ ಕಿ ಬಾತ್ (Mann ki Baat) ಆಲಿಸಿದರು. ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿಯವರು ಟ್ರಕ್ನೊಳಗೆ ಕುಳಿತುಕೊಂಡು ಒಬ್ಬ ಡ್ರೈವರ್ನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಟ್ರಕ್ ಡ್ರೈವರ್ಗಳೊಂದಿಗೆ ಮಾತನಾಡುತ್ತಿರುವುದನ್ನು ಫೋಟೊಗಳಲ್ಲಿ ಕಾಣಬಹುದು. ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ರಾಹುಲ್ ಗಾಂಧಿ ಚಾಲಕರೊಂದಿಗೆ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸಿದರು ಎಂದು ಪಕ್ಷ ತಿಳಿಸಿದೆ.
ಈ ವಿಡಿಯೊವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಜನನಾಯಕ ರಾಹುಲ್ ಗಾಂಧಿ ಜಿ ಟ್ರಕ್ ಡ್ರೈವರ್ಗಳ ಸಮಸ್ಯೆಗಳನ್ನು ತಿಳಿದುಕೊಳ್ಳಲು ಚಾಲಕರೊಂದಿಗೆ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸಿದರು. ಮಾಧ್ಯಮ ವರದಿಗಳ ಪ್ರಕಾರ, ಭಾರತೀಯ ರಸ್ತೆಗಳಲ್ಲಿ ಸುಮಾರು 90 ಲಕ್ಷ ಟ್ರಕ್ ಚಾಲಕರಿದ್ದಾರೆ. ಅವರಿಗೆ ಅವರದ್ದೇ ಆದ ಸಮಸ್ಯೆಗಳಿವೆ. ರಾಹುಲ್ ಜೀ ಅವರ ಮನ್ ಕಿ ಬಾತ್ ಕೇಳುವ ಕೆಲಸವನ್ನು ಮಾಡಿದ್ದಾರೆ ಎಂದಿದ್ದಾರೆ.
जननायक @RahulGandhi जी ट्रक ड्राइवर्स की समस्या जानने उनके बीच पहुंचे।
— Congress (@INCIndia) May 23, 2023
राहुल जी ने उनके साथ दिल्ली से चंडीगढ़ तक का सफर किया।
मीडिया रिपोर्ट्स के मुताबिक, भारत की सड़कों पर करीब 90 लाख ट्रक ड्राइवर्स हैं। इनकी अपनी समस्याएं हैं। इनके 'मन की बात' सुनने का काम राहुल जी ने किया। pic.twitter.com/Bma2BCjGpY
ಟ್ರಕ್ ಚಾಲಕರ ನಡುವೆ ಗಾಂಧಿ ಕುಳಿತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ ಕಾಂಗ್ರೆಸ್, “ನಿಮ್ಮ ಮಧ್ಯೆ ನಿಮ್ಮ ರಾಹುಲ್ ಗಾಂಧಿ” ಎಂದು ಬರೆದಿದೆ.
ಈ ತಿಂಗಳ ಆರಂಭದಲ್ಲಿ, ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ರಾಹುಲ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಮಹಿಳೆಯರೊಂದಿಗೆ ಸಂವಾದ ನಡೆಸಿದರು. ಬಿಎಂಟಿಸಿ ಬಸ್ ನೊಳಗೆ ಕುಳಿತು ಅವರು ಮಹಿಳಾ ಪ್ರಯಾಣಿಕರಲ್ಲಿಯೂ ಮಾತನಾಡಿದ್ದರು.
ಕರ್ನಾಟಕದಲ್ಲಿದ್ದಾಗ ರಾಹುಲ್, ಬೆಂಗಳೂರಿನಲ್ಲಿ ಬಾಡಿಗೆ ಟ್ಯಾಕ್ಸಿ ಚಾಲಕರು ಮತ್ತು ಆಹಾರ ವಿತರಣೆ ಮಾಡುವ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ರಾಹುಲ್, ಊಬರ್, ಓಲಾದಂತ ಬಾಡಿಗೆ ವಾಹನ ಚಾಲಕರ ಕಷ್ಟಗಳನ್ನು ಕೇಳಿದರು. ರಾಹುಲ್ ಆಹಾರ ವಿತರಣೆ ಮಾಡುವ ವ್ಯಕ್ತಿಗಳೊಂದಿಗೆ ರೆಸ್ಟೋರೆಂಟ್ನಲ್ಲಿ ಮಸಾಲೆ ದೋಸೆ ಮತ್ತು ಕಾಫಿ ಸೇವಿಸಿದರು. ತಮ್ಮ ಹೋಟೆಲ್ಗೆ ತಲುಪಲು ದ್ವಿಚಕ್ರ ವಾಹನದ ಹಿಂಬದಿ ಸವಾರರಾಗಿ ಹೋಗಿದ್ದರು ರಾಹುಲ್.
ಏಪ್ರಿಲ್ ಅಂತ್ಯದಲ್ಲಿ, ದೆಹಲಿಯ ಮುಖರ್ಜಿ ನಗರದಲ್ಲಿ ನಾಗರಿಕ ಸೇವಾ ಆಕಾಂಕ್ಷಿಗಳೊಂದಿಗೆ ಗಾಂಧಿ ಸಂವಾದ ನಡೆಸಿದರು. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ ವಿಡಿಯೊದಲ್ಲಿ ಮಾಜಿ ಲೋಕಸಭಾ ಸದಸ್ಯರು ಉನ್ನತ ಸರ್ಕಾರಿ ಉದ್ಯೋಗಗಳಿಗಾಗಿ ಆಕಾಂಕ್ಷಿಗಳ ಗುಂಪಿನೊಂದಿಗೆ ಚರ್ಚೆ ನಡೆಸುತ್ತಿರುವುದನ್ನು ತೋರಿಸಿದೆ.