ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯವಾರ್ಷಿಕ ಪರೀಕ್ಷೆಯ ಅಂಕವೇ ನಿರ್ಣಾಯಕ.

Twitter
Facebook
LinkedIn
WhatsApp
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯವಾರ್ಷಿಕ ಪರೀಕ್ಷೆಯ ಅಂಕವೇ ನಿರ್ಣಾಯಕ.

ಬೆಂಗಳೂರು : ಕಳೆದ ಎರಡು ವರ್ಷಗಳಿಂದಲೂ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯೇ ಅತಂತ್ರವಾಗಿದೆ. ಕೊರೊನಾ ವೈರಸ್‌ ಸೋಂಕಿನ ಭಯದಲ್ಲಿ ಕಳೆದ ವರ್ಷ ಪರೀಕ್ಷೆಯೇ ನಡೆದಿರಲಿಲ್ಲ. ಆದರೆ ಕೊರೊನಾ ಇಳಿಕೆಯಾಗಿ ಶೈಕ್ಷಣಿಕ ಚುಟವಟಿಕೆ ಸುಸೂತ್ರವಾಗಿ ನಡೆಯೋ ಹೊತ್ತಲ್ಲೇ ಕೊರೊನಾ (corona virus) ಜೊತೆಗೆ ಓಮಿಕ್ರಾನ್‌ (omicron )ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯೂ (PUC EXAMS 2022) ರದ್ದಾಗುತ್ತಾ ಅನ್ನೋ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮಧ್ಯವಾರ್ಷಿಕ ಪರೀಕ್ಷೆಯ ಅಂಕವೇ ವಿದ್ಯಾರ್ಥಿಗಳಿಗೆ ನಿರ್ಣಾಯಕವಾಗುವ ಸಾಧ್ಯತೆಯಿದೆ.

ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ಶೈಕ್ಷಣಿಕ ಚುಟುವಟಿಕೆ ಸಂಪೂರ್ಣವಾಗಿ ಬಂದ್‌ ಆಗಿತ್ತು. ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನೇ ನಡೆಸಲು ಶಿಕ್ಷಣ ಇಲಾಖೆಯಿಂದ ಸಾಧ್ಯವಾಗಿರಲ್ಲ. ಹೀಗಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನೇ ಪರಿಗಣಿಸಿ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಆದರೆ ಕಳೆದ ಬಾರಿ ಪ್ರಥಮ ಪಿಯುಸಿ ಪರೀಕ್ಷೆಗಳು ನಡೆದಿಲ್ಲ. ಈಗಾಗಲೇ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಧಾರವಾಡ, ಬೆಂಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ವಸತಿ ಶಾಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ದೃಢಪಟ್ಟಿದೆ.

ಬಹುತೇಕ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಯಾವುದೇ ಲಕ್ಷಣಗಳನ್ನೂ ತೋರಿಸುತ್ತಿಲ್ಲ. ಇನ್ನು ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ್ರೆ ಮಾತ್ರವೇ ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಂದೊಮ್ಮೆ ಎಲ್ಲಾ ವಿದ್ಯಾರ್ಥಿಗಳನ್ನು, ಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಿದ್ರೆ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಸಾಧ್ಯತೆಯಿದೆ. ರಾಜ್ಯಕ್ಕೆ ಓಮಿಕ್ರಾನ್‌ ಪ್ರಬೇಧ ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರಕಾರ ನಿತ್ಯವೂ ೧ ಲಕ್ಷ ಕೊರೊನಾ ಟೆಸ್ಟಿಂಗ್‌ ನಡೆಸುವಂತೆ ಆರೋಗ್ಯ ಇಲಾಖೆಗೆ ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿದೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನೆರೆಯ ರಾಜ್ಯಗಳ ವಿದ್ಯಾರ್ಥಿಗಳ ಮೇಲೆ ಎಷ್ಟೇ ನಿಗಾ ಇರಿಸಿದ್ರೂ ಕೂಡ ಕೇರಳ ವಿದ್ಯಾರ್ಥಿಗಳಿಂದಲೇ ರಾಜ್ಯದಲ್ಲಿ ಸೋಂಕು ವ್ಯಾಪಿಸುತ್ತಿದೆ. ಸೋಂಕಿನ ಪ್ರಮಾಣ ಏರಿಕೆಯಾದ್ರೆ ಕರ್ನಾಟಕದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾಗೋದು ಪಕ್ಕಾ. ಈಗಾಗಲೇ ಕೇಂದ್ರ ಆರೋಗ್ಯ ಇಲಾಖೆ ಕರ್ನಾಟಕ, ಗುಜರಾತ್‌, ಮಹಾರಾಷ್ಟ್ರ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆಯನ್ನು ನೀಡಿದೆ. ಇನ್ನು ರಾಜ್ಯದಲ್ಲಿ ಕೇವಲ ಇಬ್ಬರಿಗೆ ಓಮಿಕ್ರಾನ್‌ ದೃಢಪಟ್ಟಿದ್ದರೂ ಕೂಡ ಓಮಿಕ್ರಾನ್‌ ಸೋಂಕಿತರ ಜೊತೆಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ವರದಿ ಇನ್ನಷ್ಟೆ ಹೊರಬರಬೇಕಾಗಿದೆ. ಹೀಗಾಗಿ ರಾಜ್ಯದಲ್ಲಿ ಓಮಿಕ್ರಾನ್‌ ಭೀತಿ ಆವರಿಸಿದೆ.

ಒಂದೊಮ್ಮೆ ರಾಜ್ಯದಲ್ಲಿ ಓಮಿಕ್ರಾನ್‌ ಹಾಗೂ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾದ್ರೆ ಈ ಬಾರಿಯೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ನಡೆಯೋದು ಅನುಮಾನ. ಇದೇ ಕಾರಣಕ್ಕೇ ರಾಜ್ಯ ಸರಕಾರ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕಳೆದ ಬಾರಿ ಉಂಟಾದ ಗೊಂದಲ ಪರಿಹಾರಕ್ಕಾಗಿ ಈ ಬಾರಿ ಮಧ್ಯ ವಾರ್ಷಿಕ ಪರೀಕ್ಷೆಯನ್ನು ರಾಜ್ಯದಾದ್ಯಂತ ಏಕ ಕಾಲದಲ್ಲಿ ನಡೆಸಲು ಮುಂದಾಗಿದೆ. ಇದಕ್ಕೆ ಬೇಕಾದ ಸಿದ್ದತೆಗಳನ್ನು ನಡೆಸುವ ಸಲುವಾಗಿಯೇ ಈ ಹಿಂದೆ ನವೆಂಬರ್‌ ೨೯ ರಿಂದ ಡಿಸೆಂಬರ್‌ ೧೦ರ ವರೆಗೆ ನಿಗದಿಯಾಗಿದ್ದ ಪರೀಕ್ಷೆಯನ್ನು ಇದೀಗ ಡಿಸೆಂಬರ್‌ ೯ ರಿಂದ ಡಿಸೆಂಬರ್‌೨೩ಕ್ಕೆ ಮುಂದೂಡಿಕೆಯನ್ನು ಮಾಡಲಾಗಿದೆ. ಅಲ್ಲದೇ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಅಂತಿಮ ಪರೀಕ್ಷೆಯ ರೀತಿಯಲ್ಲಿಯೇ ನಡೆಸಲಾಗುತ್ತದೆ. ಒಂದೊಮ್ಮೆ ಅಂತಿಮ ಪರೀಕ್ಷೆ ನಡೆಸಲು ಅಸಾಧ್ಯವಾದ್ರೆ ಮಧ್ಯವಾರ್ಷಿಕ ಪರೀಕ್ಷೆಯ ಅಂಕವೇ ಅಂತಿಮವಾಗುವ ಸಾಧ್ಯತೆಯಿದೆ.
ರಾಜ್ಯ ಸರಕಾರ ಶೈಕ್ಷಣಿಕ ಚಟುವಟಿಕೆ ಆರಂಭದ ಹೊತ್ತಲೇ ವಿದ್ಯಾರ್ಥಿಗಳಿಗೆ ಸೂಕ್ಷ್ಮವಾಗಿ ಸೂಚನೆಯನ್ನು ನೀಡಿತ್ತು. ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎಲ್ಲಾ ಪರೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಜನವರಿ ತಿಂಗಳಿನಲ್ಲಿ ಕೊರೊನಾ ಹಾಗೂ ಓಮಿಕ್ರಾನ್‌ ಸ್ಪೋಟವಾಗಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇನ್ನೊಂದೆಡೆಯಲ್ಲಿ ಓಮಿಕ್ರಾನ್‌ ತಡೆಗೆ ಕಟ್ಟುನಿಟ್ಟಿನ ಕ್ರಮದ ಜಾರಿಯ ಅಗತ್ಯವಿದೆ ಅನ್ನೋ ಅಭಿಪ್ರಾಯವೂ ವ್ಯಕ್ಯವಾಗುತ್ತಿದೆ. ರಾಜ್ಯ ಸರಕಾರ ಈಗಾಗಲೇ ತುರ್ತು ಕ್ರಮಗಳನ್ನು ಕೈಗೊಂಡು ಕೆಲವೊಂದು ನಿಯಮಗಳನ್ನು ಜಾರಿಗೆ ತಂದಿದೆ. ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ಸಭೆಯ ನಂತರ ಇನ್ನಷ್ಟು ಬಿಗಿ ಕ್ರಮ ಜಾರಿಯಾಗುವ ಸಾಧ್ಯತೆಯೂ ಇದೆ. ಈ ಎಲ್ಲಾ ಕಾರಣಗಳಿಂದಾಗಿ ವಿದ್ಯಾರ್ಥಿಗಳು ಮಧ್ಯ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚು ಗಮನ ಹರಿಸಬೇಕಾಗಿದೆ.
ಈ ಬಾರಿ ಮಧ್ಯ ವಾರ್ಷಿಕ ಪರೀಕ್ಷೆಯ ಅಂಕವನ್ನೇ ಅಂತಿಮ ಗೊಳಿಸುವ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆಯಾಗಲಿ, ಸಚಿವರಾಗಲಿ ಯಾವುದೇ ಅಧಿಕೃತ ಹೇಳಿಕೆಯನ್ನೂ ನೀಡಿಲ್ಲ. ಆದರೆ ಕೋವಿಡ್‌ ವೈರಸ್‌ ಸೋಂಕಿನ ಮುನ್ನೆಚ್ಚರಿಕಾ ಕ್ರಮವಾಗಿಯೇ ಇಲಾಖೆ ಪರೀಕ್ಷೆಯನ್ನು ರಾಜ್ಯದಾದ್ಯಂತ ಏಕ ಕಾಲದಲ್ಲಿ ನಡೆಸಲು ಮುಂದಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು