ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನನಗೂ ಮೊಟ್ಟೆ ದಾಳಿ ಮಾಡಿಸಲು ಗೊತ್ತು. ಆದರೆ ಅಂಥ ಕೆಲಸ ಮಾಡಲ್ಲ: ಸಿದ್ದು

Twitter
Facebook
LinkedIn
WhatsApp
ನನಗೂ ಮೊಟ್ಟೆ ದಾಳಿ ಮಾಡಿಸಲು ಗೊತ್ತು. ಆದರೆ ಅಂಥ ಕೆಲಸ ಮಾಡಲ್ಲ: ಸಿದ್ದು

ವಿಧಾನಸಭೆ(ಸೆ.14):  ರಾಜ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸಂಭವಿಸಿದ ಅನಾಹುತ ಕುರಿತು ಪರಿಶೀಲನೆ ನಡೆಸಲು ಕೊಡಗಿಗೆ ಭೇಟಿ ನೀಡಿದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಹೊಡೆದ ಪ್ರಕರಣವು ಸದನದಲ್ಲಿ ಪ್ರತಿಧ್ವನಿಸಿ ಮಾತಿನ ಚಕಮಕಿ ನಡೆದ ಪ್ರಸಂಗ ನಡೆಯಿತು.

ಅತಿವೃಷ್ಟಿ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಕೊಡಗಿಗೆ ಹೋಗಿದ್ದ ವೇಳೆ ನನಗೆ ಕಪ್ಪು ಬಾವುಟ ತೋರಿಸಿ, ಕಾರ್‌ಗೆ ಮೊಟ್ಟೆಹೊಡೆದ ವಿಚಾರವನ್ನು ಪ್ರಸ್ತಾಪಿಸಿದರು. ಆಗ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಧ್ಯಪ್ರವೇಶಿಸಿ, ಅದು ಬೇರೆ ಯಾವುದೋ ಕಾರಣಕ್ಕೆ ಎಂದು ಮಾಧ್ಯಮದಲ್ಲಿ ಬರುತ್ತಿತ್ತು ಎಂದರು. ಆಗ ಸಿದ್ದರಾಮಯ್ಯ, ನಿಮಗೆ ಗೊತ್ತಾ ಎಂದು ಮರು ಪ್ರಶ್ನಿಸಿದರು. ಮಾಧ್ಯಮದಲ್ಲಿ ಬರುತ್ತಿತ್ತು ಎಂದು ಸಭಾಧ್ಯಕ್ಷರು ಸಮಜಾಯಿಷಿ ನೀಡಿದರು.

ಬಿಜೆಪಿ ಸದಸ್ಯ ಕೆ.ಜಿ.ಬೋಪಯ್ಯ ಮಾತನಾಡಿ, ಸಾರ್ವಕರ್‌ ಮತ್ತು ಟಿಪ್ಪು ಸುಲ್ತಾನ್‌ ಕುರಿತು ನೀವು ನಡೆದುಕೊಂಡ ಪರಿಗೆ ಕೊಡಗಿನ ಜನರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು ಎಂದರು. ಇದಕ್ಕೆ ಶಾಸಕ ಅಪ್ಪಚ್ಚು ರಂಜನ್‌ ಸಹ ಸಾಥ್‌ ನೀಡಿದರು. ಈ ವೇಳೆ ಕಾಂಗ್ರೆಸ್‌ನ ಸದಸ್ಯರು ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು. ಒಂದು ಹಂತಕ್ಕೆ ಆಕ್ರೋಶಗೊಂಡ ಸಿದ್ದರಾಮಯ್ಯ, ಕಪ್ಪು ಬಾವುಟ, ಮೊಟ್ಟೆಹೊಡೆಯುವುದು ನಮಗೂ ಗೊತ್ತಿದೆ.  ಇದಕ್ಕೆಲ್ಲಾ ಹೆದರುವುದಿಲ್ಲ. ಮೊಟ್ಟೆಎಸೆದರೆ ನೀವೇನು ವೀರರಾ, ಶೂರರಾ? ಈ ರೀತಿ ರಾಜ್ಯಾದ್ಯಂತ ನಾನು ಮಾಡಿಸಬಲ್ಲೆ. ಆದರೆ ಅಂತಹ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.

ಈ ವೇಳೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್‌ ಕಾರ್ಯಕರ್ತ ಎಂದು ಮತ್ತೊಬ್ಬ ಬಿಜೆಪಿ ಸದಸ್ಯ ಅಪ್ಪಚ್ಚು ರಂಜನ್‌ ಹೇಳಿದರು. ಇದಕ್ಕೆ ಕಿಡಿಕಾರಿದ ಸಿದ್ದರಾಮಯ್ಯ, ಹಾಗಾದರೆ ಬಿಡಿಸಿಕೊಂಡು ಬರಲು ಏಕೆ ಹೋಗಿದ್ದೀರಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೇ, ಕೊಡಗಿನಲ್ಲಿ ನಡೆದ ಘಟನೆಗೆ ಆ ಭಾಗದ ಬಿಜೆಪಿ ಶಾಸಕರೇ ಕಾರಣ. ಕೊಡಗಿನ ಜನತೆ ಒಳ್ಳೆಯವರು. ಆದರೆ, ಈ ಇಬ್ಬರ ಕುಮ್ಮಕ್ಕಿನಿಂದ ಕೊಡಗು ಹಾಳಾಗಿದೆ. ಇವರಿಂದಲೇ ಕೊಡಗು ಅಭಿವೃದ್ಧಿ ನಾಶವಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist