ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನ ಜೀವನದ 3ನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ – ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ರಮ್ಯಾ ಮಾತು

Twitter
Facebook
LinkedIn
WhatsApp
Scholarship Application on a t 1
ನ್ನ ಜೀವನದ ಮೂರನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ (Rahul Gandhi) ಎಂದು ವೀಕೆಂಡ್‌ ವಿತ್‌ ರಮೇಶ್‌ (Weekend With Ramesh) ಕಾರ್ಯಕ್ರಮದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Ramya) ಅವರು ಹೇಳಿಕೊಂಡರು.
 
ವೀಕೆಂಡ್ ವಿತ್ ರಮೇಶ್‌'ಗೆ ಬಂದ ರಮ್ಯಾ ಹೆವೀ ಟ್ರೋಲ್: ರಶ್ಮಿಕಾ 'ತತ್ಸಮ' ರಮ್ಯಾ 'ತದ್ಬವ'  ಅಂತೆ! | Ramya was heavily trolled after Weekend with Ramesh episode, also  compare with Rashmika Mandanna - Kannada ...

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅನ್ ಸೀನ್ ಎಪಿಸೋಡ್‌ನಲ್ಲಿ ರಮ್ಯಾ ಈ ಹೇಳಿಕೆ ನೀಡಿದರು. “ನನ್ನ ಜೀವನದ ಮೊದಲ ಪ್ರಭಾವಶಾಲಿ ವ್ಯಕ್ತಿ ನನ್ನ ತಾಯಿ, ಎರಡನೇಯವರು ನನ್ನ ತಂದೆ, ಮೂರನೇ ಅವರು ರಾಹುಲ್ ಗಾಂಧಿ” ಎಂದು ಹೇಳಿಕೊಂಡು ರಮ್ಯಾ ಗದ್ಗದಿತರಾದರು. “ನಾನು ಸುಳ್ಳು ಹೇಳಲ್ಲ. ನನ್ನ ತಂದೆ ನಿಧನ ಹೊಂದಿದಾಗ ನನ್ನ ಜೀವನವನ್ನ ಕೊನೆ ಮಾಡಿಕೊಳ್ಳಬೇಕು ಅಂದ್ಕೊಂಡಿದ್ದೆ. ಆಗ ನನಗೆ ತುಂಬಾ (ರಾಹುಲ್‌ ಗಾಂಧಿ) ಸಹಾಯ ಮಾಡಿದ್ರು. ಸಾವು ಅಂದ್ರೇನು? ಬದುಕು ಅಂದ್ರೇನು? ನಾವು ಏನಕ್ಕೆ ಬಂದಿದ್ದೇವೆ ಅಂತಾ ಧೈರ್ಯ ತುಂಬಿದ ಮೂರನೇ ಪ್ರಭಾವಶಾಲಿ ಎಂದು ನೆನಪಿಸಿಕೊಂಡು ರಮ್ಯಾ ಹನಿಗಣ್ಣಾದರು.

Ramya In Weekend With Ramesh: Ramya Talks About Her Politics, Life and Her  Future Plans | I have a meaningful life, but…: Ramya talks about politics,  cinema and the future Pipa News |

ನಮ್ಮ ಬದುಕಿನ ಉದ್ದೇಶದ ಬಗ್ಗೆ ರಾಹುಲ್ ಹೇಳಿದ್ರು. ನನಗೆ ರಾಹುಲ್ ಗಾಂಧಿ ಎಮೋಶನಲ್ ಆಗಿ ಸಪೋರ್ಟ್ ಮಾಡಿದ್ರು. ನಾನು ಮೊದಲು ಪಾರ್ಲಿಮೆಂಟ್‌ಗೆ ಹೋದಾಗ ನನಗೆ ಏನೂ ಗೊತ್ತಿರಲಿಲ್ಲ. ನಾನು ಕಲಿತೆ, ಇದಕ್ಕೆ ಮಂಡ್ಯ ಜನತೆಗೆ ಥ್ಯಾಂಕ್ಸ್ ಹೇಳಬೇಕು. ಮಂಡ್ಯ ಜನರು ಇಲ್ಲ ಅಂದಿದ್ರೆ ನನಗೆ ಆ ಧೈರ್ಯ ಬರ್ತಿರಲಿಲ್ಲ ಎಂದು ನೆನೆದರು.

ಪೊಲಿಟಿಕಲ್ ಕಮ್ಯುನಿಕೇಶನ್ ತುಂಬಾ ಕಷ್ಟ. ಮನನರಂಜನೆ ತುಂಬಾ ಸುಲಭ‌. ನ್ಯೂಸ್ ಹಿಂದೆ ಬೀಳುವುದು ಕಷ್ಟ. ನಾವು 24*7 ನ್ಯೂಸ್ ಚಾನೆಲ್ ಥರಾ ಕೆಲಸ ಮಾಡುತ್ತಿದ್ದೆವು ಎಂದು ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯ ದಿನಗಳನ್ನ ನೆನಪಿಸಿಕೊಂಡು ಪಕ್ಷ ಹಾಗೂ ತಂಡಕ್ಕೆ ಧನ್ಯವಾದ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ