ಮಂಗಳೂರು: ಕಳೆದ 13 ದಿನಗಳಿಂದ ದಿನದ 24 ಗಂಟೆಯೂ ಯಾವುದೇ ವಿರಾಮವಿಲ್ಲದೆ ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಬಾಂಧವ ಅವರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಆಪತ್ಬಾಂಧವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಸಾರ್ವಜನಿಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಆಸಿಪ್ ಅವರೊಂದಿಗೆ ಕೆಲ ಸಮಯಗಳನ್ನು ಕಳೆದು ತಮ್ಮ ಬೆಂಬಲ ಸೂಚಿಸುತ್ತಿದ್ದಾರೆ.
ಇನ್ನು ಎರಡು ಟೋಲ್ ಗೇಟ್ಗಳ ಅಂತರವು 60 ಕಿಲೋಮೀಟರ್ಗಳಾಗಿರಬೇಕು ಎಂದು ಎನ್ಎಚ್ಎಐ ಮಾರ್ಗಸೂಚಿಯಲ್ಲಿ ತಿಳಿಸಿದೆ, ಆದರೆ ಸುರತ್ಕಲ್ ಮತ್ತು ಹೆಜಮಾಡಿ ಟೋಲ್ ಗೇಟ್ಗಳ ನಡುವಿನ ಅಂತರವು 15 ಕಿಲೋಮೀಟರ್ಗಿಂತ ಕಡಿಮೆಯಿದೆ, ಅದ್ದರಿಂದ ಅಧಿಕಾರಿಗಳು ಸಾರ್ವಜನಿಕರ ಹಣವನ್ನು ಲೂಟಿ ಮಾಡುವುದನ್ನು ನಿಲ್ಲಿಸಬೇಕು ಎಂದರು.
ಅಲ್ಲದೆ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯಾವುದೇ ಟೋಲ್ ಗೇಟ್ ಇರಬಾರದು ಎಂದು ಅವರು ಹೇಳಿದರು.
ಇನ್ನು ತಮ್ಮ ವಿಶಿಷ್ಟ ರೀತಿಯ ಪ್ರತಿಭಟನೆಯ ಬಗ್ಗೆ ಮಾತನಾಡಿದ ಅವರು, ಸಾರ್ವಜನಿಕರ ಗಮನ ಸೆಳೆಯಲು ಹಾಗೂ ಸಮಾಜಕ್ಕೆ ಸಂದೇಶ ತಲುಪಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾನೆ, ರಾಜಕೀಯವೆಂದರೆ ಕೊಳಕು, ಜನರ ಏಳಿಗೆ ಬೇಕಾಗಿಲ್ಲ ಇದರ ದ್ಯೋತಕವಾಗಿ ಕೆಸರು ನೀರಿನಲ್ಲಿ ಕುಳಿತು ಪ್ರತಿಭಟನೆ ಹಾಗೂ ಅಧಿಕಾರಿಗಳು ಜನರಿಗೆ ಆಗುತ್ತಿರುವ ಅನ್ಯಾಯವನ್ನು ಕಂಡು ಕೂಡ ಸುಮ್ಮನಿದ್ದಾರೆಂದು ತೋರಿಸಲು ಶವದ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದೇನೆ ಎಂದರು.
ಅಲ್ಲದೆ ನ್ಯಾಯಕ್ಕೆ ಸಂಕೋಲೆ ಹಾಕಿದ್ದಾರೆ ಎಂದು ಸಾರ್ವಜನಿಕರಿಗೆ ತೋರಿಸಲು ತಾನನ್ನು ತಾನೇ ಕಟ್ಟಿಕೊಂಡಿದ್ದೇನೆ ಹಾಗೂ ಸಾಮಾನ್ಯ ಮನುಷ್ಯನ ಲೂಟಿ ಮಾಡುವ ಬದಲು ಶೂ ಪಾಲಿಶ್ ಮಾಡಿ ಶಾಂತಿಯುತ ಜೀವನ ನಡೆಸಬಹುದು ಎಂದು ತೋರಿಸಲು ಶೂ ಪಾಲಿಶ್ ಕೂಡ ಮಾಡಿದ್ದೇನೆ ಎಂದು ಆಸೀಪ್ ಹೇಳಿದರು.
ಇನ್ನು ಇತ್ತೀಚೆಗೆ ಅವರ ಮೇಲೆ ಮಂಗಳಮುಖಿಯರು ಹಲ್ಲೆ ಯತ್ನದ ಕುರಿತು ಮಾತನಾಡಿದ ಅವರು, ಕೆಲ ಮಂಗಳಮುಖಿಯರು ಸಾರ್ವಜನಿಕರನ್ನು ಲೂಟಿ ಮಾಡುತ್ತಿದ್ದಾರೆ, ಅಲ್ಲದೆ ಅವರು ಹನಿ ಟ್ರ್ಯಾಪಿಂಗ್ನಲ್ಲಿ ತೊಡಗಿದ್ದಾರೆ. ಆದರೆ ನನ್ನ ಹೋರಾಟವು ಇಂತಹ ಸಮಸ್ಯೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist