ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಮ್ಮಂತಹ ಹೋರಾಟಗಾರರು, ಹಿಂದುತ್ವವಾದಿಗಳಿಗೆ BJPಯಲ್ಲಿ ಪ್ರವೇಶವಿಲ್ಲ; ಭ್ರಷ್ಟರಿಗಷ್ಟೇ ಮಣೆ – ಮುತಾಲಿಕ್‌

Twitter
Facebook
LinkedIn
WhatsApp
ನಮ್ಮಂತಹ ಹೋರಾಟಗಾರರು, ಹಿಂದುತ್ವವಾದಿಗಳಿಗೆ BJPಯಲ್ಲಿ ಪ್ರವೇಶವಿಲ್ಲ; ಭ್ರಷ್ಟರಿಗಷ್ಟೇ ಮಣೆ – ಮುತಾಲಿಕ್‌

ವಿಜಯಪುರ: ನಮ್ಮಂತಹ ಹೋರಾಟಗಾರರು, ಪ್ರಾಮಾಣಿಕರು, ಹಿಂದುತ್ವ ವಾದಿಗಳಿಗೆ ಇಂದಿನ ರಾಜಕೀಯ ಬಿಜೆಪಿಯಲ್ಲಿ ಪ್ರವೇಶ ಇಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಬಾಗಿಲನ್ನು ಬಂದ್ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಚುನಾವಣೆ ಇಲ್ಲ. ನಮ್ಮಂತಹ ಹೋರಾಟಗಾರರಿಗೆ, ಪ್ರಾಮಾಣಿಕರಿಗೆ, ಹಿಂದುತ್ವ ವಾದಿಗಳಿಗೆ ಇಂದಿನ ರಾಜಕೀಯ ಬಿಜೆಪಿಯಲ್ಲಿ ಪ್ರವೇಶ ಇಲ್ಲ. ಎಲ್ಲ ಕಳ್ಳರು, ದರೋಡೆಕೋರರು, ಭ್ರಷ್ಟರಿಗೆ ಬಿಜೆಪಿ ಬಾಗಿಲು ತೆಗೆಯುತ್ತದೆ. ಹೀಗಾಗಿ ಚುನಾವಣೆಗೆ ಬಾಗಿಲನ್ನು ಮುಚ್ಚಿದ್ದೇನೆ ಎಂದು ತಿಳಿಸಿದರು.

ನಮ್ಮಂತಹ ಹೋರಾಟಗಾರರು, ಹಿಂದುತ್ವವಾದಿಗಳಿಗೆ BJPಯಲ್ಲಿ ಪ್ರವೇಶವಿಲ್ಲ; ಭ್ರಷ್ಟರಿಗಷ್ಟೇ ಮಣೆ – ಮುತಾಲಿಕ್‌

ರಮೇಶ್‌ಕುಮಾರ್‌ ಹೇಳಿಕೆ ಕುರಿತು ಮಾತನಾಡಿ, ಅವರು ಏನು ಮಾಡಿದ್ದಾರೋ ಅದು ಸತ್ಯವಾಗಿ ಹೊರ ಬಂದಿದೆ. ಈ ವಿಚಾರ ಬೇರೆಯವರ ಬಾಯಲ್ಲಿ ಬರುತ್ತಿತ್ತು. ಆದರೆ ಈಗ ಯಾರು ಆಸ್ತಿ ಮಾಡಿದ್ದಾರೆ, ಅವರ ಬಾಯಿಂದಲೇ ಬಂತು. ಮೊಘಲರು, ಬ್ರಿಟಿಷರು, ನೆಹರೂ ಮನೆತನದಲ್ಲಿ ರಾಹುಲ್‌ ಗಾಂಧಿವರೆಗೆ ಲೂಟಿ ಮಾಡಿದರು. ಲೂಟಿ ಮಾಡೋದ್ರಲ್ಲೇ ನಮ್ಮ ದೇಶ ನಡೆಯುತ್ತಿದೆ. ಇದನ್ನು ತಡೆಯುವ ಶಕ್ತಿ ಪ್ರಧಾನಿ ಮೋದಿ ಹಾಗೂ ಯೋಗಿ ಆದಿತ್ಯನಾಥ್‌ ಅವರಿಗೆ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಕೆರೂರು ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಭಟ್ಕಳದ ಮಹಿಳೆ ಬುರ್ಕಾದಲ್ಲಿ ಚಾಕು ತಂದು ಇರಿದಿದ್ದಾಳೆ. ಈ ಘಟನೆ ನೋಡಿದರೆ ಭಟ್ಕಳದಲ್ಲಿ ಇನ್ನೂ ಭಯೋತ್ಪಾದನೆಯ ಕುಕೃತ್ಯ ಜೀವಂತವಾಗಿದೆ. ಹಿಂದೂ ಹುಡುಗಿರನ್ನು ಚುಡಾಯಿಸುವುದನ್ನು ತಡೆಯಲು ಹೋದಾಗ ಈ ಘಟನೆ ನಡೆದಿದೆ. ಹಿಂದೂ ಹುಡುಗಿಯರನ್ನು ಚುಡಾಯಿಸುವುದನ್ನು ತಡೆಯಬಾರದಾ? ಹಿಂದೂ ಹುಡುಗಿಯರು, ಮಹಿಳೆಯರ ರಕ್ಷಣೆ ನಮ್ಮ ಹೊಣೆ ಎಂದು ಮಾತನಾಡಿದರು. 

ಹಿಂದೂ ಮಹಿಳೆಯರ ರಕ್ಷಣೆ ನಾವೇ ಮಾಡಬೇಕು. ಅದು ನಮ್ಮ ಕರ್ತವ್ಯ. ಮುಸ್ಲಿಂ ಕಿಡಿಗೇಡಿಗಳ ಪುಂಡಾಟಿಕೆ ಇನ್ನು ನಡೆಯೋದಿಲ್ಲ. ಮುಸ್ಲಿಮರ ಗೂಂಡಾಗಿರಿ ನಡೆಯಲ್ಲ. ಹಿಂದೂ ಸಮಾಜ ಜಾಗೃತಿಯಾಗಿದೆ. ಮುಸ್ಲಿಮರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಹುಷಾರಾಗಿರಿ, ನಿಮ್ಮ ಪಾಡಿಗೆ ನೀವಿರಿ ಎಂದು ಎಚ್ಚರಿಸಿದರು.

ಗಲಭೆ, ಕೊಲೆ, ಹಿಂದೂಗಳನ್ನು ಕೆಣಕೋದು ಇನ್ನು ನಡೆಯುವುದಿಲ್ಲ. ಇದಕ್ಕೆ ಹಿಂದೂ ಸಮಾಜ ಉತ್ತರ ಕೊಡುತ್ತೆ ಸಂವಿಧಾನದ ಆಧಾರದ ಮೇಲೆ ದೇಶ ನಡೆಯುತ್ತಿದೆ. ಡಾ.ಬಿ.ಆರ್.ಅಂಬೇಡ್ಕರರ ಸಂವಿಧಾನ ಇದೆ. ಏನೇ ಇದ್ದರೂ ಪ್ರಜಾಪ್ರಭುತ್ವ ಆಧಾರದ ಮೇಲೆ ಧರಣಿ ಮಾಡಿ, ದೂರು ಕೊಡಿ. ಅದನ್ನು ಬಿಟ್ಟು ಚಾಕು, ತಲವಾರ್‌ ಹಿಡಿದು ಬರೋದಕ್ಕೆ ಇದು ತಾಲಿಬಾನ್‌ ಅಲ್ಲ ಎಂದು ಸೂಚಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist