ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನವೆಂಬರ್ 12 ರಂದು ಪ್ರೇಮಂ ಪೂಜ್ಯಂ ಚಿತ್ರ ರಾಜ್ಯಾದ್ಯಂತ ಬಿಡುಗಡೆ.

Twitter
Facebook
LinkedIn
WhatsApp
ನವೆಂಬರ್ 12 ರಂದು ಪ್ರೇಮಂ ಪೂಜ್ಯಂ ಚಿತ್ರ ರಾಜ್ಯಾದ್ಯಂತ ಬಿಡುಗಡೆ .

ಚಿಕ್ಕಮಗಳೂರು: ನಟ ಲವ್ಲಿ ಸ್ಟಾರ್ ಪ್ರೇಂ ನಾಯಕನಾಗಿ ನಟಿಸಿರುವ ಪ್ರೇಮಂ ಪೂಜ್ಯಂ ಚಿತ್ರ ನವೆಂಬರ್ 12 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಡಾ.ಬಿ.ಎಸ್.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೃತ್ತಿಯಲ್ಲಿ ವೈದ್ಯನಾಗಿ ತಮಗೆ ತೃಪ್ತಿ ಇದ್ದರೂ ಚಲನ ಚಿತ್ರ ನಿರ್ಮಾಣ, ಚಿತ್ರಕಥೆ, ಸಂಬಾಷಣೆ ಬರೆಯುವ ಬಗ್ಗೆ ಮೊದಲಿನಿಂದಲೂ ಒಲವಿತ್ತು. ಮಾಸ್ಟರ್ ಆನಂದ್ ಅವರು ಬೆಂಬಲಕ್ಕೆ ನಿಂತು ಹುರಿದುಂಬಿಸಿದ ಪರಿಣಾಮ ಮೊದಲ ಚಿತ್ರ ಪ್ರೇಮಂ ಪೂಜ್ಯಂ ನಿರ್ದೇಶಿಸಿದ್ದೇನೆ ಎಂದರು.

ಈ ಚಿತ್ರ ಪ್ರೇಂ ಅವರ ೨೫ ನೇ ಚಿತ್ರವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಚಿತ್ರೀಕರಣ ನಡೆದಿದೆ. ಉತ್ತಮ ಹಾಡುಗಳನ್ನು ಒಳಗೊಂಡಿದೆ. ಅದಕ್ಕೆ ಜನಮನ್ನಣೆಯೂ ಸಿಕ್ಕಿದೆ. ಬೃಂದಾ ಆಚಾರ್ಯ, ಸಾಧು ಕೋಕಿಲ ಇನ್ನಿತರೆ ನಟರು ಇದ್ದಾರೆ ಎಂದರು.
ಉತ್ತಮ ಸಾಹಿತ್ಯ, ಸಂಗೀತ, ತಾರಾ ಬಳಗವನ್ನು ಚಿತ್ರ ಒಳಗೊಂಡಿದೆ. ರಾಷ್ಟ್ರ, ರಾಜ್ಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕರು ಚಿತ್ರೀಕರಣ ಮಾಡಿದ್ದಾರೆ. ಚಿತ್ರೀಕರಣದ ಸಂದರ್ಭ ಖರ್ಚಿನ ವಿಚಾರದಲ್ಲಿ ಯಾವುದೇ ವಿಭಾಗದಲ್ಲೂ ರಾಜಿ ಮಾಡಿಕೊಂಡಿಲ್ಲ. ಊಟಿ, ಪೂನಾ, ಚಿಕ್ಕಮಗಳೂರು, ಮಳವಳ್ಳಿ, ಮಂಡ್ಯ, ಧರ್ಮಶಾಲಾ, ವಿಯೆಟ್ನಾಂ ಇತರೆ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ ಎಂದರು.

ನಟ ಪ್ರೇಂ ಮಾತನಾಡಿ, ಪ್ರೇಮವನ್ನು ಪೂಜನೀಯ ಭಾವನೆಯಿಂದ ನೋಡುವುದೇ ಪ್ರೇಮಂ ಪೂಜ್ಯಂ. ಪ್ರೇಮಿಗಳ ನಡುವಿನ ಪ್ರೀತಿ ಜೊತೆಗೆ ತಂದೆ ತಾಯಿ, ಸ್ನೇಹಿತರು, ಸಮಾಜ ಜೊತೆಗೆ ನಮ್ಮ ವೃತ್ತಿ ಧರ್ಮವನ್ನು ಯಾವ ರೀತಿ ಪ್ರೀತಿಸುತ್ತೇವೆ ಎನ್ನುವ ಕಥಾ ವಸ್ತು ಇದಾಗಿದ್ದು ಇಡೀ ಕುಟುಂಬ ಕುಳಿತು ವೀಕ್ಷಿಸಬಹುದಾದ ಅದ್ಭುತವಾದ ಸಾಂಸಾರಿಕ ಚಿತ್ರ ವಾಗಿದ್ದು, ಎಲ್ಲಾ ವಯೋಮಾನದವರನ್ನೂ ಇದು ತಲುಪುತ್ತದೆ ಎಂದರು.
ಕೋವಿಡ್‌ನಿಂದ ಇಡೀ ಚಿತ್ರೋದ್ಯಮ ಭಾರೀ ನಷ್ಟ ಅನುಭವಿಸಿದೆ. ಇಂತಹ ಸಂದರ್ಭದಲ್ಲಿ ಎಲ್ಲಾ ಕಲಾವಿದರು ಸೇರಿದಂತೆ, ಚಿತ್ರಮಂದಿರಗಳು, ನೌಕರರು ಎಲ್ಲರಿಗೂ ಮತ್ತೆ ಒಳ್ಳೆಯ ಚಿತ್ರಗಳ ಮೂಲಕ ಒಳಿತಾಗಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.
ನಟ ಮಾಸ್ಟರ್ ಆನಂದ್ ಮಾತನಾಡಿ ಚಿತ್ರದಲ್ಲಿ ಉತ್ತಮ ಸ್ನೇಹಿತನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರ ಎಲ್ಲರನ್ನೂ ರಂಜಿಸಲಿದೆ. ಎಲ್ಲರೂ ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವ ಮೂಲಕ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು