ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಎಲ್ಲೂ ಹಾರಿ ಹೋಗಿಲ್ಲ.. ಮುಂಬೈಗೆ ವೈಯಕ್ತಿಕ ಕೆಲಸದ ನಿಮಿತ್ತ ಹೋಗಿದ್ದೆ – ಅನುಶ್ರೀ

Twitter
Facebook
LinkedIn
WhatsApp
ನಾನು ಎಲ್ಲೂ ಹಾರಿ ಹೋಗಿಲ್ಲ.. ಮುಂಬೈಗೆ ವೈಯಕ್ತಿಕ ಕೆಲಸದ ನಿಮಿತ್ತ ಹೋಗಿದ್ದೆ – ಅನುಶ್ರೀ

ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ ಬೆನ್ನಲ್ಲೇ ಅನುಶ್ರೀ ಹೆಸರು ಮುನ್ನೆಲೆಗೆ ಬಂದಿದೆ. ಅಲ್ಲದೆ, ಅವರು ಮುಂಬೈಗೆ ಹಾರಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ.
‘ಡ್ರಗ್ಸ್​ ಸೇವನೆ, ಖರೀದಿ ಪ್ರಕರಣದಲ್ಲಿ ನನ್ನ ವಿಚಾರಣೆ ನಡೆಸಿರಲಿಲ್ಲ. ಕಳೆದ ವರ್ಷ ವಿಚಾರಣೆಗೆ ಕರೆದಾಗ ಕಾನೂನು ರೀತಿ ಎಲ್ಲವನ್ನೂ ಹೇಳಿದ್ದೇನೆ. ನಾನು ಸೋಮವಾರ ಮುಂಬೈಗೆ ವೈಯಕ್ತಿಕ ಕೆಲಸದ ನಿಮಿತ್ತ ಹೋಗಿದ್ದೆ. ಅಂದೇ ನಾನು ರಿಟರ್ನ್​ ಟಿಕೆಟ್​ ಕೂಡ ಬುಕ್ ಮಾಡಿದ್ದೆ. ನಾನು ಎಲ್ಲೂ ಹಾರಿ ಹೋಗಿರಲಿಲ್ಲ’ ಎಂದಿದ್ದಾರೆ ಅವರು.

ಅನುಶ್ರೀ ವಿರುದ್ಧ ಬಿಗ್​ ಬಾಸ್​ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರ್ಗಿ ಸಾಕಷ್ಟು ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದರು. ಈ ವಿಚಾರದಲ್ಲೂ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ. ‘ಪ್ರಶಾಂತ್​ ಸಂಬರಗಿ ಅವರು ಕಾನೂನು ಮೂಲಕ ಹೋಗಲಿ. ನಮ್ಮ ಸಮಾಜದಲ್ಲಿ ಕಾನೂನು ಇದೆ. ಎಲ್ಲ ವಿಚಾರಗಳಿಗೆ ಆಗಲೂ ಉತ್ತರ ಕೊಟ್ಟಿದ್ದೇನೆ, ಈಗಲೂ ಉತ್ತರ ಕೊಡುತ್ತಿದ್ದೇನೆ’ ಎಂದಿದ್ದಾರೆ ಅನುಶ್ರೀ.
‘ಆರೋಪಿಗಳು ಏನು ಬೇಕಾದರೂ ಆರೋಪ ಮಾಡಲಿ. ಅದಕ್ಕೆ ತಲೆಕೆಡಸಿಕೊಳ್ಳುವುದಿಲ್ಲ. ವಿಚಾರಣೆ ವೇಳೆ ಕೇಳಿದ ಪ್ರಶ್ನೆಗಳ ಬಗ್ಗೆ ಮಾಹಿತಿ ನೀಡೋಕೆ ಸಾಧ್ಯವಿಲ್ಲ. ನನಗೆ ಯಾವುದೇ ಪ್ರಭಾವಿಗಳ ಬೆಂಬಲವೂ ಇಲ್ಲ. ನಾನು ಕಳೆದ 3 ವರ್ಷದಿಂದ ಇದೇ ಮನೆಯಲ್ಲಿ ಇದ್ದೇನೆ. ಬಾಡಿಗೆ ಬಗ್ಗೆ ನಮ್ಮ ಮನೆ ಮಾಲೀಕರ ಬಳಿ ಕೇಳಬಹುದು. ಮಂಗಳೂರಿನ ಕದ್ರಿಯಲ್ಲಿ ಒಂದು ಮನೆ ಇದೆ. ಆದರೆ ಆ ಮನೆಯ ಮೇಲೆ ಸಾಲವಿದೆ’ ಎಂದು ಅನುಶ್ರೀ ಹೇಳಿದ್ದಾರೆ.

‘ನನ್ನ ಬಗ್ಗೆ ಮಾತಾಡುವ ನೂರಾರು ಜನಕ್ಕೆ ಉತ್ತರಿಸಲು ಸಾಧ್ಯವಿಲ್ಲ. ನನ್ನ ವಿರುದ್ಧ ಮಾಡುತ್ತಿರುವ ಎಲ್ಲ ಆರೋಪಗಳು ಸುಳ್ಳು. ಯಾವಾಗ ವಿಚಾರಣೆಗೆ ಕರೆದರೂ ನಾನು ಹೋಗುತ್ತೇನೆ. ಚಾರ್ಜ್​ಶೀಟ್ ಬಗ್ಗೆ ನನಗೆ ಏನೇನೂ ಗೊತ್ತಿಲ್ಲ. ಕಿಶೋರ್ ಶೆಟ್ಟಿಯನ್ನು 12 ವರ್ಷದ ಹಿಂದೆ ನೋಡಿದ್ದೆ. 13 ವರ್ಷ ಹಿಂದೆ ಅವರು ಕೊರಿಯೋಗ್ರಾಫರ್ ಆಗಿದ್ರು. ಆ ರಿಯಾಲಿಟಿ ಶೋನಲ್ಲಿ ನಾನು ವಿನ್ನರ್ ಆಗಿದ್ದೆ. ಆಗ ಪ್ರಾಕ್ಟೀಸ್​ ಮಾಡಲು ಎಲ್ಲರೂ ಒಂದೇ ಕಡೆ ಇದ್ದೆವು’ ಎಂದು ಅನುಶ್ರೀ ಕಿಶೋರ್​ ಶೆಟ್ಟಿ ಪರಿಚಯ ಆಗಿದ್ದು ಹೇಗೆ ಎಂದು ವಿವರಿಸಿದ್ದಾರೆ.

‘ನಾನು ಸಿಂಪಲ್ ಪರ್ಸನ್. ಯಾವ ಪಬ್​, ಬಾರ್, ಪಾರ್ಟಿಗಳಿಗೆ ಹೋಗಲ್ಲ. ಈ ಎಲ್ಲ ಘಟನೆಗಳಿಂದ ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ. ಈ ಬೆಳವಣಿಗೆಯಿಂದ ನನ್ನ ತಾಯಿಗೆ ಏನಾದರೂ ಆದರೆ ಅವರು ಎಷ್ಟೇ ಪ್ರಭಾವಿ ಆಗಿದ್ದರೂ ಸುಮ್ಮನೆ ಬಿಡಲ್ಲ’ ಎಂದು ಎಚ್ಚರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು