ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬುದು ಸುಳ್ಳು. ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬ ಆರೋಪದ ಬಗ್ಗೆ ಸಿಎಂ ಹಾಗೂ ಶಿಕ್ಷಣ ಸಚಿವರ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು. ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ಆರೋಪವನ್ನು ತಳ್ಳಿ ಹಾಕಿದ ಸಚಿವರು, ಎಸ್ಸಿ, ಎಸ್ಟಿಗಳಿಗೆ ನೀಡುವ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವಾಗಿಲ್ಲ. ಎರಡು ಗುಂಪುಗಳ ನಡುವೆ ಟೆಂಡರ್ ಸಿಕ್ಕಿರೋದೆ ಸಂಘರ್ಷಕ್ಕೆ ಕಾರಣವಾಗಿದೆ. ಕೋರ್ಟ್ನಲ್ಲಿ ದಾವೆ ಹೂಡಿದ್ರೂ, ಅವರ ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ಮೂರು ಸಾವಿರ ಕೊಳವೆ ಬಾವಿ ಕೊರೆದಿದ್ದಾರೆ. ಅನೇಕ ಕೊಳವೆಬಾವಿ ಆಗಿಲ್ಲ. ಖರ್ಗೆ ಅವರು ಸದನದಲ್ಲಿ ಕೇಳಿದಾಗ ಉತ್ತರ ನೀಡದ್ದೇನೆ. ಟೆಂಡರ್ನಲ್ಲಿ ಯಾವುದೇ ಗೋಲ್ಮಾಲ್ ಆಗಿಲ್ಲ. ಈಗಾಗಲೇ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದೇವೆ. ವರದಿ ಬಂದ ಬಳಿಕ ನನ್ನನ್ನೂ ಸೇರಿದಂತೆ ಎಲ್ಲರನ್ನೂ ತನಿಖೆಗೆ ಒಳಪಡಿಸುತ್ತೇನೆ. ಸುಖಾ ಸುಮ್ಮನೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ.
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?