ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಬಂಧನ.

Twitter
Facebook
LinkedIn
WhatsApp
ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಬಂಧನ.

ಮುಂಬೈ : ಅಶ್ಲೀಲ ಚಿತ್ರಗಳ ನಿರ್ಮಾಣ ಮಾಡಿದ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್‌ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ 2021 ರಲ್ಲಿ ಕ್ರೈಂ ಬ್ರ್ಯಾಂಚ್‌ ಮುಂಬೈನಲ್ಲಿ ಅಶ್ಲೀಲ ಚಿತ್ರಗಳ ನಿರ್ಮಾಣ ಹಾಗೂ ಹಲವು ಅಪ್ಲಿಕೇಶನ್‌ಗಳ ಮೂಲಕ ಅವುಗಳನ್ನು ಪ್ರದರ್ಶಿಸುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಉದ್ಯಮಿ ರಾಜ್‌ ಕುಂದ್ರಾ ಬಾಗಿಯಾಗಿದ್ದಾರೆ. ಈ ಕುರಿತು ಸಾಕಷ್ಟು ಸಾಕ್ಷಾಧಾರಗಳು ಸಿಕ್ಕಿವೆ. ಹೀಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗರೇಲ್ ತಿಳಿಸಿದ್ದಾರೆ.

ವಂಚನೆ, ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ಕೃತ್ಯದಲ್ಲಿ ಭಾಗಿ, ಅಶ್ಲೀಲ ಪುಸ್ತಕ ಅಥವಾ ಸಾಹಿತ್ಯ ಪ್ರಸಾರ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ರಾಜ್‌ ಕುಂದ್ರಾ ವಿರುದ್ದ ಐಪಿಸಿ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂಬೈನ ಕ್ರೈಂ ಬ್ರಾಂಚ್‌ ವಶದಲ್ಲಿರುವ ರಾಜ್‌ ಕುಂದ್ರಾ ಅವರನ್ನು, ಆಸ್ತಿ ಸೆಲ್‌ ಕಚೇರಿಯಲ್ಲಿ ಇರಿಸಲಾಗಿದೆ.

ರಾಜ್‌ ಕುಂದ್ರಾ, ಅಶ್ಲೀಲ ಚಿತ್ರಗಳಿಗಾಗಿ ನಗ್ನ ದೃಶ್ಯಗಳನ್ನು ಚಿತ್ರೀಕರಿಸಲು ನಟರನ್ನು ಒತ್ತಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಸುಮಾರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ತಂಡ ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡಿ ಈಗಾಗಲೇ ಆಪ್‌ ಗಳ ಮೂಲಕ ಪ್ರದರ್ಶನವನ್ನು ಮಾಡಿದೆ ಅನ್ನೋ ಆರೋಪವಿದೆ. ಈ ಕುರಿತು ಕ್ರೈಂ ಬ್ರ್ಯಾಂಚ್‌ ಪೊಲೀಸರು ಸಾಕಷ್ಟು ಸಾಕ್ಷಾಧಾರಗಳನ್ನು ಕಲೆಹಾಕಿದ್ದಾರೆ.

ರಾಜ್‌ ಕುಂದ್ರಾ ಮತ್ತು ಅವರ ಸಹಚರರ ವಿರುದ್ಧ ಬಾಲಿವುಡ್‌ ನಟಿ ಪೂನಂ ಪಾಂಡೆ ಬಾಂಬೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾಡೆಲ್ ಮತ್ತು ನಟಿಯಾಗಿರುವ ಪೂನಂ ಪಾಂಡೆ ಅವರು ರಾಜ್‌ ಕುಂದ್ರಾ ಮತ್ತು ಅವರ ಸಹಚರರು ತಮ್ಮ ವಿಷಯವನ್ನು ಅಕ್ರಮವಾಗಿ ಬಳಸುತ್ತಿದ್ದಾರೆಂದು ಎಂದು ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು