ಬುಧವಾರ, ಮೇ 15, 2024
Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ.

Twitter
Facebook
LinkedIn
WhatsApp
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ.

ಜೈಪುರ : ಸೂರ್ಯ ಕುಮಾರ್‌ ಯಾದವ್‌ ಹಾಗೂ ನಾಯಕ ರೋಹಿತ್‌ ಶರ್ಮಾ ಉತ್ತಮ ಜೊತೆಯಾಟದ ನೆರವಿನಿಂದ ನ್ಯೂಜಿಲೆಂಡ್‌ ವಿರುದ್ದ ಟಿ20 ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಕೋಚ್‌ ರಾಹುಲ್‌ ದ್ರಾವಿಡ್‌ ಮೊದಲ ಪಂದ್ಯದಲ್ಲಿ ಜಯ ಕಂಡಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಕಾಯ್ದುಕೊಂಡಿದೆ.

ಇಂದೋರ್‌ನ ಸ್ವಾಮಿ ಮಾನಸಿಂಗ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲೆಂಡ್‌ ತಂಡಕ್ಕೆ ಭುವನೇಶ್ವರ್‌ ಕುಮಾರ್‌ ಆರಂಭಿಕ ಆಘಾತ ನೀಡಿದ್ರು, ಡಿ ಮಿಚೆಲ್‌ ಶೂನ್ಯಕ್ಕೆ ಔಟಾಗಿ ಫೆವಿಲಿಯನ್‌ ಹಾದಿ ಹಿಡಿಯುತ್ತಲೇ ಮಾರ್ಟಿನ್‌ ಗುಫ್ಟಿಲ್‌ಗೆ ಜೊತೆಯಾದ ಮಾರ್ಕ್‌ ಚಾಂಪ್‌ ಮನ್‌ ಉತ್ತಮ ಜೊತೆಯಾಟ ನೀಡಿದ್ರು. ಮಾರ್ಟಿನ್‌ ಗುಫ್ಟಿಲ್‌ 42 ಎಸೆತಗಳಲ್ಲಿ 70 ರನ್‌ ಬಾರಿಸಿದ್ರೆ, ಮಾರ್ಕ್‌ ಚಾಂಪ್‌ಮನ್‌ 50 ಎಸೆತಗಳಲ್ಲಿ 63 ರನ್‌ ಸಿಡಿಸಿದ್ದಾರೆ. ಸೈಫರ್ಟ್‌ ಹೊರತು ಪಡಿಸಿ ಉಳಿದ ಆಟಗಾರರು ಎರಡಂಕಿ ರನ್‌ ದಾಟುವಲ್ಲಿ ಎಡವಿದ್ದಾರೆ. ಅಂತಿಮವಾಗಿ ನ್ಯೂಜಿಲೆಂಡ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 164 ರನ್‌ ಬಾರಿಸಿದೆ. ಭಾರತ ಪರ ಆರ್.ಅಶ್ವಿನ್‌ ಹಾಗೂ ಭುವನೇಶ್ವರ್‌ ಕುಮಾರ್‌ ತಲಾ 2 ವಿಕೆಟ್‌ ಪಡೆದ್ರೆ ದೀಪಕ್‌ ಚಹರ್‌ ಹಾಗೂ ಸಿರಾಜ್‌ ತಲಾ 1 ವಿಕೆಟ್‌ ಪಡೆದುಕೊಂಡಿದ್ದಾರೆ.

ನ್ಯೂಜಿಲೆಂಡ್‌ ನೀಡಿದ್ದ 165 ರನ್‌ ಗುರಿಯನ್ನು ಬೆನ್ನತ್ತಲು ಹೊರಟ ಭಾರತಕ್ಕೆ ರೋಹಿತ್‌ ಶರ್ಮಾ ಹಾಗೂ ರಾಹುಲ್‌ ಉತ್ತಮ ಜೊತೆಯಾಟದ ಭರವಸೆಯನ್ನು ನೀಡಿದ್ರು. ಆದರೆ ರಾಹುಲ್‌ 14 ಎಸೆತಗಳಲ್ಲಿ 15 ರನ್‌ ಗಳಿಸಿದ್ದಾಗ ಸ್ಟನ್ನರ್‌ಗೆ ವಿಕೆಟ್‌ ಒಪ್ಪಿಸಿದ್ರು. ನಂತರ ರೋಹಿತ್‌ ಶರ್ಮಾ ಜೊತೆಯಾದ ಸೂರ್ಯಕುಮಾರ್‌ ಯಾದವ್‌ ಉತ್ತಮ ಜೊತೆಯಾಟ ನೀಡಿದ್ರು. 40 ಎಸೆತಗಳಲ್ಲಿ 62 ರನ್‌ ಗಳಿಸಿದ್ರೆ, ರೋಹಿತ್‌ ಶರ್ಮಾ 36 ಎಸೆತಗಳಲ್ಲಿ 48 ರನ್‌ ಗಳಿಸಿದ್ದಾರೆ. ನಂತರದಲ್ಲಿ ರಿಷಬ್‌ ಪಂತ್‌ 17 ರನ್‌ ಸಿಡಿಸಿದ್ರು. ಶ್ರೇಯಸ್‌ ಅಯ್ಯರ್‌ ಹಾಗೂ ವೆಂಕಟೇಶ್‌ ಅಯ್ಯರ್‌ ಕೆಟ್ಟ ಹೊಡೆತಕ್ಕೆ ವಿಕೆಟ್‌ ಒಪ್ಪಿಸಿದ್ರೆ, ಅಕ್ಷರ್‌ ಪಟೇಲ್‌ 1 ರನ್‌ ಬಾರಿಸಿದ್ದಾರೆ. ಈ ಮೂಲಕ ಭಾರತ 19.3 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 166 ರನ್‌ ಗಳಿಸುವ ಮೂಲಕ ಗೆಲುವು ಕಂಡಿದೆ. ನ್ಯೂಜಿಲೆಂಡ್‌ ಪರ ಬೌಲ್ಟ್‌ 2 ಹಾಗೂ ಸೌಥಿ ಹಾಗೂ ಸಂತನರ್‌ 1 ಒಂದೊಂದು ವಿಕೆಟ್‌ ಪಡೆದುಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು