ಬೆಂಗಳೂರು: ಇಡೀ ರಾಷ್ಟ್ರದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಯಷ್ಟು ಬೇರೆ ಯಾರ ಪುತ್ಥಳಿಯೂ ಇಲ್ಲ. ಸಂವಿಧಾನದಲ್ಲಿ ನಮ್ಮ ಎಲ್ಲಾ ಧರ್ಮ, ಜಾತಿ, ಪದ್ಧತಿ, ಸಂಸ್ಕೃತಿಗೆ ಸಮಾನ ಹಕ್ಕು ಕೊಡಲಾಗಿದೆ. ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರ ನೇತತ್ವದ ಸಂವಿಧಾನ ಕರಡು ಸಮಿತಿ ರಚಿಸಿ, ಸಂವಿಧಾನ ರಚನೆ ಜವಾಬ್ದಾರಿ ವಹಿಸಿತ್ತು.ಕಳೆದ ಹಲವು ವರ್ಷಗಳಿಂದ ನಾವು ಈ ಸಂವಿಧಾನ ಒಪ್ಪಿ ಬದುಕುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 6 ನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿದ್ದ ಚನ್ನಣ್ಣ ವಾಲೀಕಾರ ಅವರು ಬರೆದಿದ್ದ ‘ನೀ ಹೋದ ಮರುದಿನ’ ಎಂಬ ಅಂಬೇಡ್ಕರರ ಬಗೆಗಿನ ಕವಿತೆಯನ್ನು ತೆಗೆದು ಹಾಕಲಾಗಿದೆ. 7 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಸಮಾಜ ಸುಧಾರಕರ ಬಗ್ಗೆ ಹೇಳಲಾಗಿದೆ. ಅಲ್ಲಿ ಅಂಬೇಡ್ಕರರ ಬಗ್ಗೆಯೂ ಮಾಹಿತಿ ಇದೆ. ಆದರೆ ಈ ಹಿಂದಿನ ಪಠ್ಯಪುಸ್ತಕದಲ್ಲಿ ಅಂಬೇಡ್ಕರ್ ಅವರ ತಂದೆ, ತಾಯಿಯವರ ಹೆಸರುಗಳಿದ್ದವು. ಅಂಬೇಡ್ಕರ್ ಹುಟ್ಟಿದ ಸ್ಥಳ ಮತ್ತು ದಿನಾಂಕವಿತ್ತು. ಅದನ್ನೂ ಸಹ ತೆಗೆದುಹಾಕಲಾಗಿದೆ. ಅದೇ ಭಾಗದಲ್ಲಿ ಅಂಬೇಡ್ಕರರ ಬೃಹತ್ ಹೋರಾಟಗಳಾಗಿದ್ದ ಮಹಾಡ್ ಸತ್ಯಾಗ್ರಹ ಹಾಗೂ ಕಾಲಾರಾಂ ದೇಗುಲ ಪ್ರವೇಶ ಹೋರಾಟಗಳ ಪ್ರಸ್ತಾಪವನ್ನೂ ತೆಗೆದು ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
9 ನೇ ತರಗತಿಯ ಸಮಾಜ ವಿಜ್ಞಾನದ ನಮ್ಮ ಸಂವಿಧಾನ ಪಾಠದಲ್ಲಿ ಅಂಬೇಡ್ಕರ್ ಅವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನ ಶಿಲ್ಪಿ’ ಎಂದು ಕರೆಯಲಾಗಿದೆ ಎಂದಿತ್ತು. ಈ ವಾಕ್ಯವನ್ನೂ ಈಗ ತೆಗೆದು ಹಾಕಲಾಗಿದೆ. ಇದಲ್ಲದೇ ಅಂಬೇಡ್ಕರ್ ಅವರ ಬಗ್ಗೆ ಇನ್ನೂ ಅನೇಕ ಅಂಶಗಳನ್ನು ತೆಗೆದು ಹಾಕಲಾಗಿದೆ. ರಾಜ್ಯ ಸರ್ಕಾರ ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದನ್ನು ಹಿಂದೆಂದೂ ನಾನು ನೋಡಿಲ್ಲ ಎಂದು ಕಿಡಿಕಾರಿದರು.
ಪಠ್ಯದಲ್ಲಿ ಆಗಿರುವ ಪ್ರಮಾದಗಳಿಗೆ ಬಿಜೆಪಿ ಸರ್ಕಾರವೇ ಕಾರಣ. ಬಸವಣ್ಣ, ಕುವೆಂಪು, ಬುದ್ಧ, ನಾರಾಯಣ ಗುರುಗಳು, ಮಹಾವೀರ ಜೈನ್, ಭಗತ್ ಸಿಂಗ್ ಸೇರಿದಂತೆ ಹಲವು ನಾಯಕರ ವಿಚಾರಗಳನ್ನು ಸರ್ಕಾರ ಕೈಬಿಟ್ಟಿದೆ ಇಲ್ಲವೇ ತಿರುಚಿದೆ. ಇದರಿಂದ ಸರ್ಕಾರದ ಮನಸ್ಥಿತಿ, ಮುಖವಾಡ ಬಯಲಾಗಿದೆ ಈ ಮಹನೀಯರನ್ನು ನಾವು ಇಷ್ಟು ದಿನಗಳ ಕಾಲ ಗೌರವದಿಂದ ಕಾಣುತ್ತಿದ್ದೆವು. ಆದರೆ ಈಗ ಪಠ್ಯ ಪುಸ್ತಕದಲ್ಲಿ ಅವರನ್ನು ಸಾಮಾನ್ಯರಂತೆ ಬಿಂಬಿಸಲಾಗಿದೆ ಎಂದರು.
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?