ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಟ್ಟ ಹುಡುಗಿಯ ಬ್ಯಾಟಿಂಗ್ ಕೌಶಲ್ಯ; ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ! ವಿಡಿಯೋ ವೈರಲ್

Twitter
Facebook
LinkedIn
WhatsApp
ಪುಟ್ಟ ಹುಡುಗಿಯ ಬ್ಯಾಟಿಂಗ್ ಕೌಶಲ್ಯ; ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ!

ಜೈಪುರ: ರಾಜಸ್ಥಾನದ ರೈತರೊಬ್ಬರ ಮಗಳು ಅದ್ಭುತವಾಗಿ ಬ್ಯಾಟಿಂಗ್ ಮಾಡುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಗಮನ ಸೆಳೆದಿದ್ದು, ಬಾಲಕಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳಾ ಪ್ರೀಮಿಯರ್ ಲೀಗ್ ಹರಾಜು ನಡೆದ ದಿನದಂದೇ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಕನಾಸರ್ ಗ್ರಾಮದ ಬಡ ರೈತನ ಮಗಳು, 14 ವರ್ಷದ ಮುಮಲ್ ಮೆಹರ್ ಅವರು ಹುಡುಗರೊಂದಿಗೆ ಕ್ರಿಕೆಟ್ ಆಡುತ್ತಿರುವ ವೇಳೆ ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಬಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಈ ವೀಡಿಯೋ ಸಚಿನ್ ತೆಂಡೂಲ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಗಮನ ಸೆಳೆದಿದ್ದು, ಅವರು ವೀಡಿಯೋವನ್ನು ಟ್ವಿಟರ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.  “”ಹರಾಜು ನಿನ್ನೆಯಷ್ಟೇ ನಡೆಯಿತು ಮತ್ತು ಇಂದು ಪಂದ್ಯವೂ ಪ್ರಾರಂಭವಾಗಿದೆ? ಏನು ವಿಷಯ, ನಿಜವಾಗಿಯೂ ನಿಮ್ಮ ಬ್ಯಾಟಿಂಗ್ ಅನ್ನು ಆನಂದಿಸಿದೆ” ಎಂದು ಸಚಿನ್ ತೆಂಡೂಲ್ಕರ್ ಬರೆದಿದ್ದಾರೆ.

ಇನ್ನು “ಚಿಕ್ಕ ಹುಡುಗಿಯ ಕ್ರಿಕೆಟ್ ಕೌಶಲ್ಯ ಮತ್ತು ಆಟದ ಮೇಲಿನ ಉತ್ಸಾಹ ನೋಡುಗರನ್ನು ಆಶ್ಚರ್ಯ ಮೂಡಿಸಿದೆ. ಮಹಿಳಾ ಕ್ರಿಕೆಟ್‌ನ ಭವಿಷ್ಯ ಉತ್ತಮ ಕೈಯಲ್ಲಿದೆ ಎಂದು ನೋಡಲು ನನಗೆ ಸಂತೋಷವಾಗಿದೆ. ನಮ್ಮ ಯುವ ಅಥ್ಲೀಟ್‌ಗಳನ್ನು ಸಬಲೀಕರಣಗೊಳಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ, ಇದರಿಂದ ಅವರ ಭವಿಷ್ಯದ ಬದಲಾಯಿಸಬಹುದು” ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನ ಬಿಜೆಪಿ ಅಧ್ಯಕ್ಷ ಪಿಎಲ್ ಪೂನಿಯಾ ಅವರು ಸಹ ಬಾಲಕಿಯ ಬ್ಯಾಟಿಂಗ್ ಅನ್ನು ಶ್ಲಾಘಿಸಿದ್ದು, ಬಾಲಕಿ ಸಂಪೂರ್ಣ ಕ್ರಿಕೆಟ್ ನಲ್ಲಿ ತೊಡಗಿಕೊಳ್ಳಲು ಕ್ರಿಕೆಟ್ ಕಿಟ್ ಕಾಣಿಕೆಯಾಗಿ ನೀಡಿದ್ದಾರೆ. ಮರುಭೂಮಿ ಜಿಲ್ಲೆಯ ಮರಳಿನ ದಿಬ್ಬಗಳಲ್ಲಿ ಬೂಟುಗಳಿಲ್ಲದೆ ಕ್ರಿಕೆಟ್ ಆಡುತ್ತಿದ್ದ ಬಾಲಕಿಗೆ ಇದು ಗಮನಾರ್ಹ ತಿರುವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ