ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಿಯಕರನೊಂದಿಗೆ 6 ವರ್ಷವಿದ್ದು ಮಗು ಮಾಡಿಕೊಂಡಿದ್ದ ಮಹಿಳೆ – ವಿಷಯ ತಿಳಿಯುತ್ತಲೇ ಪತಿಯಿಂದ ಪತ್ನಿ ಕೊಲೆ

Twitter
Facebook
LinkedIn
WhatsApp
Online fraud 4 6

ಬೆಂಗಳೂರು: ಆಕೆಗೆ ಗಂಡನಿದ್ದರೂ ಮತ್ತೊಬ್ಬನ ಸಹವಾಸ ಮಾಡಿದ್ದಳು. ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಇದ್ದ ಮಹಿಳೆ (woman) ಒಂದು ಮಗುವನ್ನೂ ಮಾಡಿಕೊಂಡು ಸಂಸಾರ ಮಾಡಿಕೊಂಡಿದ್ದಳು. ಆದರೆ ಈ ವಿಚಾರ ತಿಳಿಯುತ್ತಲೇ ಮಹಿಳೆಯ ಪತಿ (Husband) ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಪತಿಯೇ ತನ್ನ ಪತ್ನಿಯ (Wife) ಕತ್ತು ಕುಯ್ದು ಕೊಲೆ (Murder) ಮಾಡಿರುವ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯ ಸರೈಪಾಳ್ಯದಲ್ಲಿ ನಡೆದಿದೆ. 32 ವರ್ಷದ ತಬ್ಸಂಬಿಯ ಕತ್ತು ಕೊಯ್ದು ಆರೋಪಿ ಶೇಕ್ ಸುಹೇಲ್ ಕೊಲೆ ಮಾಡಿದ್ದಾನೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಪ್ರಿಯಕರನ ಮನೆಯಲ್ಲಿದ್ದ ಪತ್ನಿಯ ಜೊತೆ ಜಗಳ ತೆಗೆದಿದ್ದ ಆರೋಪಿ ಚಾಕುವಿನಿಂದ ಆಕೆಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ.

ಆರೋಪಿ ಶೇಕ್ ಸುಹೇಲ್ ಮತ್ತು ತಬ್ಸಂಬಿ ಇಬ್ಬರೂ ಕೂಡ ಕೋಲ್ಕತ್ತಾ ಮೂಲದವರು. 14 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿ 2013ರಲ್ಲಿ ಬೆಂಗಳೂರಿಗೆ ಕೆಲಸಕ್ಕೆ ಎಂದು ಬಂದಿದ್ದರು. ಈ ವೇಳೆ ಬೆಂಗಳೂರಿನಲ್ಲಿದ್ದ ನದೀಮ್ ಜೊತೆ ತಬ್ಸಂಬಿಗೆ ಪರಿಚಯ ಆಗಿದ್ದು, ಇಬ್ಬರೂ ಸಂಬಂಧವನ್ನು ಶುರು ಮಾಡಿದ್ದರು. ಈ ವಿಚಾರ ತಿಳಿದಿದ್ದ ಸುಹೇಲ್ ಪತ್ನಿಯನ್ನು ಮತ್ತೆ ಕೋಲ್ಕತ್ತಾಗೆ ಕರೆದೊಯ್ದಿದ್ದ. 

ಆದರೆ ಗಂಡನ ಜೊತೆ ಇರಲಾರದೇ ಪ್ರಿಯಕರ ನದೀಮ್ ಮೇಲೆಯೇ ಮನಸ್ಸಿಟ್ಟಿದ್ದ ತಬ್ಸಂಬಿ 6 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಪ್ರಿಯಕರನೊಂದಿಗೆ ವಾಸವಿದ್ದಳು. ಇಬ್ಬರಿಗೂ ಬಳಿಕ ಮಗುವಾಗಿದ್ದು, ಸರೈಪಾಳ್ಯದಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಮಗುವಿನ ವಿಚಾರ ಗೊತ್ತಾಗಿದ್ದೇ ತಡ ಬೆಂಗಳೂರಿಗೆ ಬಂದಿದ್ದ ಸುಹೇಲ್ ನದೀಮ್ ಇಲ್ಲದ ವೇಳೆ ಮನೆಗೆ ಬಂದು ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ.

ಸುಹೇಲ್ ಮನೆಯ ಕೋಣೆಯೊಳಗೆ ತಬ್ಸಂಬಿಯನ್ನು ಕೂಡಿ ಹಾಕಿ, ಜಗಳ ಶುರು ಮಾಡಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಅಲ್ಲೇ ಇದ್ದ ಚಾಕುವಿನಿಂದ ಸುಹೇಲ್ ತಬ್ಸಂಬಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ. ಮಾತ್ರವಲ್ಲದೇ ಅಲ್ಲೇ ಇದ್ದ 2 ವರ್ಷದ ಮಗುವಿಗೂ ಚಾಕುವಿನಿಂದ ಇರಿದು ಗಾಯ ಮಾಡಿದ್ದಾನೆ. 

ಈ ಬಗ್ಗೆ ಮಾಹಿತಿ ಬಂದಿದ್ದೇ ತಡ ಘಟನಾ ಸ್ಥಳಕ್ಕೆ ಹೋಗಿದ್ದ ಹೆಣ್ಣೂರು ಪೊಲೀಸರು ಆರೋಪಿ ಸುಹೇಲ್‌ನನ್ನು ಬಂಧಿಸಿದ್ದಾರೆ. ಸದ್ಯ ಗಾಯಗೊಂಡಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ