ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೋಟೋ ಸ್ಟುಡಿಯೋ ಮಾಲೀಕನ ಹತ್ಯೆಗೈದು ದುಷ್ಕರ್ಮಿಗಳು ಪರಾರಿ..!

Twitter
Facebook
LinkedIn
WhatsApp
WhatsApp Image 2023 01 15 at 9.55.10 AM

ಚಿತ್ರದುರ್ಗ(ಜ.15):  ಆತ ಜೀವನೋಪಾಯಕ್ಕಾಗಿ ಫೋಟೋ ಸ್ಟುಡಿಯೋ ಇಟ್ಟುಕೊಂಡು ಕೆಲಸ ಮಾಡ್ತಿದ್ದ ವ್ಯಕ್ತಿ. ತಡರಾತ್ರಿ ಮನೆಗೆ ನುಗ್ಗಿರೋ‌ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿ ಕೊಚ್ಚಿ ಕೊಲೆಗೈದು ಪರಾರಿ ಆಗಿರುವ ಘಟನೆ ನಡೆದಿದೆ. ಈ ಕೊಲೆಯಿಂದಾಗಿ ಇಡೀ ಆ ಗ್ರಾಮವೇ ಬೆಚ್ಚಿ ಬಿದ್ದಿದ್ದು ಕೊಲೆಗೆ ನಿಖರವಾದ ಕಾರಣ ಏನು ಎಂಬುದೇ ಪ್ರಶ್ನೆಯಾಗಿದೆ? ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮಂಚದ ಮೇಲೆ ರಕ್ತದ ಮಡುವಿನಲ್ಲಿ ಹೆಣವಾಗಿ ಬಿದ್ದಿರೋ ಮೃತ ವ್ಯಕ್ತಿ ಬಸವರಾಜನ್ (33). ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ನಿವಾಸಿ. ಹೊಟ್ಟೆ ಪಾಡಿಗಾಗಿ ತನ್ನದೇ ಸ್ವಂತ ಸ್ಟುಡಿಯೋ & ವಿಡಿಯೋ ಶಾಪ್ ಇಟ್ಟುಕೊಂಡು ಕೆಲಸ ಮಾಡ್ತಿದ್ದ. ಸುಮಾರು 10 ವರ್ಷಗಳಿಂದ ತನ್ನ ಸ್ವಂತ ಗ್ರಾಮ ಶಿವಗಂಗಾದಲ್ಲೇ ವಾಸವಾಗಿದ್ದ, ಇತ್ತೀಚೆಗೆ ಕಳೆದ ಎರಡು ವರ್ಷಗಳ ಹಿಂದೆ ಮದುವೆ ಆಗಿದ್ದು ಯಾವುದೇ ಅನ್ಯ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿಲ್ಲ. ಸ್ಟುಡಿಯೋ ಹಿಂದೆಯೇ ತನ್ನ ‌ಮನೆ ಇದಿದ್ದರಿಂದ ಎಂದಿನಂತೆ ಮನೆಗೆ ತೆರಳಿದ್ದಾನೆ. ಇತ್ತೀಚೆಗಷ್ಟೆ ತನ್ನ ಪತ್ನಿ ಮಗುವಿಗೆ ಜನ್ಮ ನೀಡಿರುವ ಪರಿಣಾಮ ಹೆರಿಗೆಗಾಗಿ ತನ್ನ ತವರು ಮನೆಗೆ ತೆರಳಿದ್ದಾಳೆ. ಕಾಯಕ ಬಿಟ್ಟು ಹೋಗದ ಬಸವರಾಜ್ ಮನೆಯಲ್ಲಿ ಒಬ್ಬನೇ ಇದ್ದದ್ದನ್ನು ಕಂಡಿರೋ ದುಷ್ಕರ್ಮಿಗಳು ತಡರಾತ್ರಿ ಮನೆಗೆ ನುಗ್ಗಿ ಮಚ್ವಿನಿಂದ ಮನಸೋ ಇಚ್ಚೆ ಕೊಲೆಗೈದು ಪರಾರಿ ಆಗಿದ್ದು ಇಡೀ ಶಿವಗಂಗಾ ಗ್ರಾಮವನ್ನೇ ಬೆಚ್ಚಿ ಬೀಳಿಸಿದೆ. ಇನ್ನೂ ಕೊಲೆಗೆ ಏನು ಕಾರಣ ಎಂಬುದು ತಿಳಿಯದೇ ಸಂಬಂಧಿಕರು ಕೂಡ ದಿಗ್ಭ್ರಮೆಗೊಂಡಿದ್ದು, ಕೊಲೆ ಮಾಡಿರೋ ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆ ನೀಡಿ ಎಂದು ಮೃತನ ಸಹೋದರ ಸಿದ್ದೇಶ್ ಆಗ್ರಹಿಸಿದ್ದಾರೆ.

ಇನ್ನೂ ಭೀಕರ ಹತ್ಯೆ ಮಾಹಿತಿ‌‌ ತಿಳಿದ ಕೂಡಲೇ ಎಸ್ಪಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಗಂಗಾ ಗ್ರಾಮದ ಬಸವರಾಜ್ ರನ್ನು ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಕೊಚ್ಚಿ ಕೊಲೆಗೈದು ಪರಾರಿ ಆಗಿದ್ದಾರೆ.‌ ಕೊಲೆಗೆ ನಿಖರವಾದ ಕಾರಣ ಏನೆಂದು ತಿಳಿದು ಬಂದಿಲ್ಲ. ಆದ್ರೆ ಕೊಲೆಗೈದಿರೋ ಆಸಾಮಿಗಳು ಕೆಲ ಕುರುಹುಗಳನ್ನು ಬಿಟ್ಟು ಹೋಗಿರುವ ಮಾಹಿತಿ ಸಿಕ್ಕದೆ. ತನಿಖೆ ಹಂತದಲ್ಲಿದೆ ಶೀಘ್ರದಲ್ಲಿಯೇ ಅವರನ್ನು ಬಂಧಿಸಿ ಎಡೆಮುರಿಕಟ್ಟಲಾಗುವುದು ಅಂತ ಚಿತ್ರದುರ್ಗ ಎಸ್ಪಿ ಕೆ.ಪರಶುರಾಮ ತಿಳಿಸಿದ್ದಾರೆ. 

ಒಟ್ನಲ್ಲಿ ತನ್ನ ಪಾಡಿಗೆ ತಾನು ಸ್ಟುಡಿಯೋ ಇಟ್ಕೊಂಡ್ ಕೆಲಸ ಮಾಡ್ತಿದ್ದ ಬಸವರಾಜನ ಭೀಕರ ಕೊಲೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಆದಷ್ಟು ಬೇಗ ಖಾಕಿ ಪಡೆ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕೊಲೆಗೆ ಕಾರಣ ಏನು ಎಂಬುದು ಬಹಿರಂಗ ಪಡಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಲಿ ಎಂಬುದು ನಮ್ಮೆಲ್ಲರ ಆಗ್ರಹ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ