ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ

Twitter
Facebook
LinkedIn
WhatsApp
ಬಂಟ್ವಾಳ: ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ

ಬಂಟ್ವಾಳ: ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ ಮೃತ ಬಾಲಕ ಎಂದು ಗುರುತಿಸಲಾಗಿದೆ.

ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು, ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ.

ಬಾಲಕನನ್ನು ಸಂಪರ್ಕಿಸಲು ಮನೆಮಂದಿ ಸಾಕಷ್ಟು ಪ್ರಯತ್ನಿಸಿದ್ದರೂ ಸಫಲರಾಗಿರಲಿಲ್ಲ ಎನ್ನಲಾಗಿದೆ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆಯಲ್ಲಿ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು.

ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಮೇಲ್ಭಾಗದಲ್ಲಿ ಬಾಲಕ ಧರಿಸಿದ್ದ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ತಡರಾತ್ರಿ ವೇಳೆ ಪತ್ತೆಯಾಗಿದೆ.

ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ