ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿಯ ರಚನೆ ತೆರವು: ಧನ್ಯವಾದ ಹೇಳಿದ ಸಂಸದ ಪ್ರತಾಪ್ ಸಿಂಹ..!

Twitter
Facebook
LinkedIn
WhatsApp
ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿಯ ರಚನೆ ತೆರವು: ಧನ್ಯವಾದ ಹೇಳಿದ ಸಂಸದ ಪ್ರತಾಪ್ ಸಿಂಹ..!

ಮೈಸೂರು: ಮೈಸೂರಿನಲ್ಲಿ ರಾಜಕಾರಣಿಗಳ ಮಧ್ಯೆ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಗುಂಬಜ್ ಮಾದರಿಯ ಬಸ್ ನಿಲ್ದಾಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಶಾಸಕ ರಾಮದಾಸ್ ನಿಲ್ದಾಣದ ಮೇಲಿದ್ದ ಮೂರು ಗುಂಬಜ್​ಗಳ ಪೈಕಿ ಅಕ್ಕಪಕ್ಕದ ಎರಡು ಚಿಕ್ಕ  ಗುಂಬಜ್ ನ್ನು ತೆರವುಗೊಳಿಸಿದ್ದಾರೆ.

ಬಸ್ ನಿಲ್ದಾಣದ ಮೇಲಿನ ಗುಂಬಜ್ ನಿರ್ಮಾಣ ವಿಷಯ ರಾಮದಾಸ್ ಮತ್ತು ಸಂಸದ ಪ್ರತಾಪ್ ಸಿಂಹ ಅವರ ನಡುವೆ ಶೀತಲ ಸಮರಕ್ಕೆ ಕಾರಣವಾಗಿತ್ತು. ಇದೀಗ ಗುಂಬಜ್ ತೆರವು ಬಳಿಕ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಎರಡು ಗುಂಬಜ್ ತೆರವುಗೊಳಿಸಿದ ಬಳಿಕ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದ ಶಾಸಕ ರಾಮದಾಸ್, ಹಲವು ವಿಷಯಗಳನ್ನು ಹಂಚಿಕೊಂಡಿದ್ದರು. ತಮ್ಮ ಮೂವತ್ತು ವರ್ಷದ ರಾಜಕಾರಣದಲ್ಲಿ ಈ ರೀತಿಯ ವಿವಾದ ಎಂದೂ ಸಹ ನಡೆದಿರಲಿಲ್ಲ. ಅನಾವಶ್ಯಕವಾಗಿ ಧರ್ಮದ ಲೇಪನ ಮಾಡುವ ಯತ್ನಗಳು ನಡೆದಿದ್ದವೂ ಎಂಬ ಆರೋಪವನ್ನು ತಮ್ಮ ಪ್ರಕಟಣೆಯಲ್ಲಿ ಮಾಡಿದ್ದರು. 

ಟ್ವಿಟ್ಟರ್​ನಲ್ಲಿ ಫೋಟೋ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ, ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದೀನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ  ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗು ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೂ ಧನ್ಯವಾದಗಳು ಎಂದು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿಯ ರಚನೆ ತೆರವು: ಧನ್ಯವಾದ ಹೇಳಿದ ಸಂಸದ ಪ್ರತಾಪ್ ಸಿಂಹ..!

ಅವರು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಪ್ರತಾಪ್ ಸಿಂಹ ಒಟ್ಟು ಮೂರು ಫೋಟೋಗಳನ್ನು ಹಂಚಿಕೊಂಡಿದ್ದು, ಒಂದು ಮಸೀದಿಯ ಮಾದರಿ ನಕ್ಷೆ. ಮತ್ತೊಂದು ಬಸ್ ನಿಲ್ದಾಣದ ಮೇಲೆ ನಿರ್ಮಾಣ ಮಾಡಲಾಗಿದ್ದ ಮೂರು ಗುಂಬಜ್ ಇರುವ ಫೋಟೋ, ಕೊನೆಯದ್ದು ಒಂದೇ ಗುಂಬಜ್ ಇರುವ ಚಿತ್ರವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ