ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಲಿವುಡ್ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ನಿಧನ

Twitter
Facebook
LinkedIn
WhatsApp
ಬಾಲಿವುಡ್ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ನಿಧನ

ಮುಂಬೈ: ಬಾಲಿವುಡ್‍ನಲ್ಲಿ ಹಲವಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕ ಭೂಪಿಂದರ್ ಸಿಂಗ್(82) ಅವರು ನಿಧನರಾಗಿದ್ದಾರೆ.

ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಭೂಪಿಂದರ್ ಸಿಂಗ್ ಅವರಿಗೆ ಒಂದು ವಾರದ ಹಿಂದೆಯಷ್ಟೇ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ 7.45ರ ಸುಮಾರಿಗೆ ಭೂಪಿಂದರ್ ಸಿಂಗ್ ಸಾವನ್ನಪ್ಪಿದ್ದಾರೆ. ಮಂಗಳವಾರ ಅವರ ಅಂತ್ಯಕ್ರಿಯೆಯನ್ನು ನಡೆಸುವುದಾಗಿ ಪತ್ನಿ ಮಿತಾಲಿ ಸಿಂಗ್ ತಿಳಿಸಿದ್ದಾರೆ.

ಪತ್ನಿ ಹಾಗೂ ಮಗನನ್ನು ಅಗಲಿರುವ ಭೂಪಿಂದರ್ ಸಿಂಗ್ ಅವರು ಮೂಲತಃ ಪಂಜಾಬ್‍ನ ಅಮೃತಸಾರದವರಾಗಿದ್ದು, ಆಲ್ ಇಂಡಿಯಾ ರೇಡಿಯೋ ಮೂಲಕ ವೃತ್ತಿ ಜೀವನ ಆರಂಭಿಸಿದರು. ಆಲ್ ಇಂಡಿಯಾ ರೇಡಿಯೊ ಪಾರ್ಟಿಯೊಂದರಲ್ಲಿ ಸಂಯೋಜಕ ಮದನ್ ಮೋಹನ್ ಅವರು ಭೂಪಿಂದರ್ ಸಿಂಗ್ ಅವರು ಗಿಟಾರ್ ಬಾರಿಸುತ್ತಿರುವುದನ್ನು ಕೇಳಿ ಮುಂಬೈಗೆ ಬರುವಂತೆ ತಿಳಿಸಿದ್ದರು. ಗುರುತಿಸಿದ ನಂತರ, ಅವರನ್ನು ಮುಂಬೈಗೆ ಕರೆಸಲಾಯಿತು. 1964ರಲ್ಲಿ ಚೇತನ್ ಆನಂದ್ ನಿರ್ದೇಶಿಸಿದ್ದ “ಹಕೀಕತ್” ಸಿನಿಮಾದಲ್ಲಿ ಹೊಕೆ ಮಜ್ಬೂರ್ ಹಾಡನ್ನು ಹಾಡುವಂತೆ ಭೂಪಿಂದರ್ ಸಿಂಗ್ ಅವರಿಗೆ ಮದನ್ ಮೋಹನ್ ಅವರು ಆಫರ್ ನೀಡಿದ್ದರು.

ನಾಮ್ ಗಮ್ ಜಾಯೆಗಾ.., ಹೋತಾ ಪೆ ಐಸಿ ಬಾತ್.., ಕಭಿ ಕಿಸಿ ಕೋ ಮುಕಮ್ಮಲ್ ಜಹಾ ನಹಿ ಮಿಲ್ತಾ.. ಸೇರಿ ಇನ್ನೂ ಹಲವು ಸೂಪರ್ ಹಿಟ್ ಗೀತೆಗಳು ಭೂಪಿಂದರ್ ಸಿಂಗ್ ಅವರ ಕಂಠದಲ್ಲಿ ಮೂಡಿ ಬಂದಿದೆ. ಗಾಯನವನ್ನು ಹೊರತುಪಡಿಸಿ ಭೂಪಿಂದರ್ ಸಿಂಗ್ ಅವರು “ದಮ್ ಮಾರೋ ದಮ್”, “ಚುರಾ ಲಿಯಾ ಹೈ”, “ಚಿಂಗಾರಿ ಕೋಯಿ ಭಡ್ಕೆ” ಮತ್ತು “ಮೆಹಬೂಬಾ ಓ ಮೆಹಬೂಬಾ” ಸೇರಿದಂತೆ ಹಲವಾರು ಜನಪ್ರಿಯ ಹಾಡುಗಳಿಗೆ ಗಿಟಾರ್ ನುಡಿಸಿದ್ದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ