ಹಾಸನ: ರಾಜ್ಯಸಭೆಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮೂರು ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಇಬ್ಬರು ಅಧಿಕೃತ ಅಭ್ಯರ್ಥಿಗಳು ಗೆದ್ದ ನಂತರವೂ ನಮ್ಮ ಬಳಿ 32 ಮತಗಳು ಉಳಿಯುತ್ತದೆ. ಕಾಂಗ್ರೆಸ್ನಲ್ಲಿ 19ರಿಂದ 20 ಮತಗಳು ಉಳಿಯುತ್ತದೆ. ಜನತಾದಳದಿಂದ ಎಲ್ಲರೂ ವೋಟ್ ಹಾಕಿದರೆ 32 ವೋಟ್ ಉಳಿಯುತ್ತದೆ. ರಾಜಕಾರಣದಲ್ಲಿ ಕೆಲವೊಮ್ಮೆ ಅಧಿಕೃತ ಅಭ್ಯರ್ಥಿಗಳು ಸೋತಿರುವುದು, ಬಂಡಾಯ ಅಭ್ಯರ್ಥಿಗಳು ಗೆದ್ದಿರುವುದು ಎಲ್ಲಾ ನೋಡಿದ್ದೇವೆ. ರಣನೀತಿಯನ್ನು ಹೇಳಲು ಆಗುವುದಿಲ್ಲ. ನಮ್ಮ ಪಕ್ಷದ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಹೇಗೆ ಏನು ಅಂತ ಕೇಳಬೇಡಿ ಎಂದು ಮಾರ್ಮಿಕಾಗಿ ನುಡಿದರು.
ರಾಜ್ಯಸಭೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ. ನಮಗೆ ಯಾರ ಮತವೂ ಬೇಡ. ನಮ್ಮ ಮತ ಒಂದೇ ಸಾಕು. ನಾವು ಚುನಾವಣೆ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?