ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯಲ್ಲಿ ವೈಲೆಂಟ್ ಸೃಷ್ಟಿಸಿದ ಸೈಲೆಂಟ್ ಸುನೀಲ್

Twitter
Facebook
LinkedIn
WhatsApp
ಬಿಜೆಪಿಯಲ್ಲಿ ವೈಲೆಂಟ್ ಸೃಷ್ಟಿಸಿದ ಸೈಲೆಂಟ್ ಸುನೀಲ್

ಬೆಂಗಳೂರು: ಬಿಜೆಪಿ ಸಂಸದರು ಹಾಗೂ ಶಾಸಕರ ಜತೆಗೆ ರೌಡಿ ಸೈಲೆಂಟ್ ಸುನೀಲ್ ವೇದಿಕೆ ಹಂಚಿಕೊಂಡಿರುವ ವಿಚಾರ ಈಗ ಬೇರೆ ಬೇರೆ ಚರ್ಚೆಗೆ ಕಾರಣವಾಗಿದ್ದು, ಸಂಘ- ಪರಿವಾರದ ಹಿನ್ನೆಲೆಯ ವ್ಯಕ್ತಿಯೊಬ್ಬರ ಸಹಕಾರದಿಂದ ಈ ರಕ್ತದಾನ ಶಿಬಿರ ಆಯೋಜಿಸಲಾಗಿತ್ತೆಂಬ ಸಂಗತಿ ಬೆಳಕಿಗೆ ಬಂದಿದೆ. ಅದೆಲ್ಲದಕ್ಕಿಂತ ಹೆಚ್ಚಾಗಿ ಬಿಜೆಪಿ ಸಂಸದರು ಹಾಗೂ ಶಾಸಕರು ಸುನೀಲ್ ಸಮರ್ಥನೆಗೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದಕ್ಕೆ ಪೂರಕವಾಗಿ ದಿಲ್ಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸುನೀಲ್ ಜತೆ ತಮ್ಮ ಪಕ್ಷದ ಸಂಸದರು ಹಾಗೂ ಶಾಸಕರು ವೇದಿಕೆ ಹಂಚಿಕೊಂಡಿರುವುದನ್ನು ಸಮರ್ಥಿಸಿಕೊಳ್ಳುವ ರೀತಿ ಮಾತನಾಡಿದ್ದಾರೆ. ಕಾಂಗ್ರೆಸ್ ಗೆ ತಿರುಗೇಟು ಕೊಡುವ ಭರದಲ್ಲಿ ಕಾಂಗ್ರೆಸ್ ನಲ್ಲಿ ಎಷ್ಟು ರೌಡಿ ಶೀಟರ್ ಗಳು ಇದ್ದಾರೆ ಎಂಬುದನ್ನು ಲೆಕ್ಕ ಹಾಕಿಕೊಳ್ಳಲಿ ಎಂದು ಹೇಳಿದ್ದಾರೆ. ತಮ್ಮ ಈ ಹೇಳಿಕೆ ಸಮಾಜದಲ್ಲಿ ಎಂಥ ಸಂದೇಶ ನೀಡುತ್ತದೆ ಎಂಬ ಅರಿವಿದೆಯೇ? ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ