ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಬೈಕ್​ ಸವಾರ ಸ್ಥಳದಲ್ಲೇ ಸಾವು: ಮತ್ತಿಬ್ಬರಿಗೆ ಗಾಯ

Twitter
Facebook
LinkedIn
WhatsApp
vbn 1

ಬೆಂಗಳೂರು (ಫೆ.06): ಸಿಲಿಕಾನ್ ಸಿಟಿಯಲ್ಲಿ ಹಿಟ್ ಅಂಡ್ ರನ್ ಗೆ ವ್ಯಕ್ತಿ ಬಲಿಯಾಗಿದ್ದಾನೆ. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಸಾಗದ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಅವರ ಸ್ಟಿಕ್ಕರ್‌ ಹೊಂದಿದ್ದ ಕಾರು ಬೈಕ್‌ ಸವಾರನಿಗೆ ಡಿಕ್ಕಿಯಾಗಿದ್ದು, ಕೆಳಗೆ ಬಿದ್ದ ಬೈಕ್‌ ಸವಾರನ ತಲೆಯ ಮೇಲೆ ಕಾರು ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೈಕ್‌ ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ.ಬೆಂಗಳೂರು ನಗರದಲ್ಲಿ ಟ್ರಾಫಿಕ್‌ ಇದ್ದೇ ಇರುತ್ತದೆ. ಆದರೂ, ಟ್ರಾಫಿಕ್‌ ಇರುವ ಸಾರ್ವಜನಿಕರು ಹೆಚ್ಚಾಗಿ ಓಡಾಡುವ ರಸ್ತೆಯಲ್ಲಿ ಅತಿವೇಗವಾಗಿ ಬಂದ ಶಾಸಕರ ಕಾರು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿದೆ. ಬಳಿಕ ದ್ವಿಚಕ್ರ ವಾಹನ ಸವಾರನ ತಲೆ ಮೇಲೆ ಹರಿದಿದೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆದರೆ, ಈ ದುರ್ಘಟನೆಯಿಂದ ನೃಪತುಂಗ ರಸ್ತೆಯಲ್ಲಿ ಭಾರಿ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದೆ. 

ಅತಿವೇಗವಾಗಿ ಬಂದು ಡಿಕ್ಕಿ: ಈ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಮಾಜಿದ್ ಖಾನ್ (39) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ತಲೆ ಮೇಲೆ ಕಾರ್ ಹರಿದಿತ್ತು. ಎಚ್ ಬಿ ಆರ್  ಲೇಔಟ್ ನಿವಾಸಿಯಾಗಿದ್ದ ಮಾಜಿದ್ ಖಾನ್ ಆಟೊ ಮೊಬೈಲ್ಸ್ ಅಂಗಡಿ ಇಟ್ಕೊಂಡಿದ್ದರು. ಮತ್ತೊಬ್ಬ ಗಾಯಾಳು ರಿಯಾಜ್ ಕಾಲು ಮುರಿದಿದ್ದು ತಲೆಗೆ ಗಾಯವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಎಂ ಎಲ್ ಎ ಹರತಾಳು ಹಾಲಪ್ಪ ಪಾಸ್ ಹೊಂದಿದ್ದ ಕಾರ್ ನಿಂದ ಅಪಘಾತವಾಗಿದೆ. ಅಪಘಾತದ ನಂತರ ಕೂಡಲೇ ಕಾರ್‌ಗೆ ಅಂಟಿಸಿದ್ದ  ಎಂಎಲ್‌ಎ ಹರತಾಳು ಹಾಲಪ್ಪ ಎಂಬ ಕಾರ್ ಸ್ಟಿಕ್ಕರ್ ಅನ್ನು ಬೆಂಬಲಿಗರು ತೆಗೆದಿದ್ದಾರೆ. ಹಲಸೂರು ಗೇಟ್‌ ಪೊಲೀಸ್‌ ಸ್ಟೇಷನ್ ಬಳಿ ಕಾರ್ ಸ್ಟಿಕ್ಕರ್ ತೆಗೆದಿಟ್ಟಿದ್ದಾರೆ. 

ಘಟನೆಯ ಪೂರ್ಣ ವಿವರ: ನೃಪತುಂಗ ರಸ್ತೆಯಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಬಳಿ ಬೈಕ್ ನಲ್ಲಿ ಇಬ್ಬರು ಸವಾರರು ಹೋಗುತ್ತಿದ್ದರು. ಈ ವೇಳೆ ಇನ್ನೋವಾ ಕಾರ್ ನಿಂದ ಡಿಕ್ಕಿಯಾಗಿದೆ. ಒಬ್ಬರ ತಲೆ ಮೇಲೆ ಕಾರ್ ಹರಿದಿದೆ. ಮತ್ತೊಬ್ಬರ ಕಾಲಿನ ಮೇಲೆ ಕಾರ್ ಹರಿದಿದೆ. ಒಬ್ಬ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ನಂತರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಳಿದಂತೆ ಘಟನೆಯಲ್ಲಿ ಮೂರ್ನಾಲ್ಕು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. KA 50 MA 6600 ನಂಬರಿನ ಇನ್ನೊವ ಕಾರ್  ಆಗಿದೆ. ಕಾರ್ ನಲ್ಲಿ ಡ್ರೈವರ್ ಮಾತ್ರ ಚಾಲನೆ ಮಾಡುತ್ತಿದ್ದರು. ರಾಮು ಸುರೇಶ್ ಎಂಬುವರ ಹೆಸರಿನಲ್ಲಿರೊ ಕಾರು ಆಗಿದೆ. ಯಲಹಂಕ ರಿಜಿಸ್ಟ್ರೇಷನ್ ನಲ್ಲಿರೊ ಕಾರ್‌ ಆಗಿದ್ದು, ಅಜಾಗರೂಕ ಚಾಲನೆಯಿಂದ ಅಪಘಾತಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ