ಬೆಂಗಳೂರು: ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪ್ಯಾಸೆಂಜರ್ ಆಟೋ ಚಾಲಕ ಗಿರಿಸಾಗರ್ (34) ಮೃತಪಟ್ಟವರಾಗಿದ್ದು, ಅಪಘಾತದಲ್ಲಿ ಟೆಂಪೋ, ಆಟೋ, ಬಿಎಂಟಿಸಿ ಬಸ್ ಜಖಂಗೊಂಡಿವೆ ಎಂದು ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಮೈಸೂರು ಮುಖ್ಯರಸ್ತೆಯಲ್ಲಿ ಹೊಸಗುಡ್ಡದಳ್ಳಿ ಜಂಕ್ಷನ್ ಕಡೆಯಿಂದ ಚಾಲಕ ಬಾಪೂಜಿನಗರ ಕಡೆಗೆ ಹೋಗಲು ಕ್ಯಾಂಟರ್ ನ್ನು ಬೆಳಿಗ್ಗೆ 6.30ರ ವೇಳೆಯಲ್ಲಿ ಅತಿವೇಗದಿಂದ ಚಲಾಯಿಸಿಕೊಂಡು ಬಂದು ಸ್ಯಾಟಲೈಟ್ ಬಸ್ ನಿಲ್ದಾಣದ ಹೊರ ದ್ವಾರದ ಬಳಿ ಮುಂದೆ ಹೋಗುತ್ತಿದ್ದ ಮಹೇಂದ್ರ ಗೂಡ್ಸ್ ಗಾಡಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಮಹೇಂದ್ರ ಗೂಡ್ಸ್ ವಾಹನವು ಮುಂದೆ ಹೋಗುತ್ತಿದ್ದ ಪ್ಯಾಸೆಂಜರ್ ಆಟೋ ಹಾಗೂ ಬಿಎಂಟಿಸಿ ವೋಲ್ವೋ ಬಸ್ ಗೆ ಡಿಕ್ಕಿಯಾಗಿ ಪ್ಯಾಸೆಂಜರ್ ಆಟೋ ಒಲ್ವೋ ಬಸ್ ಮತ್ತು ಗೂಡ್ಸ್ ವಾಹನದ ಮದ್ಯ ಸಿಲುಕಿಕೊಂಡು ನಜ್ಜುಗುಜ್ಜಾಗಿದೆ.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?