ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರು ರಸ್ತೆಗಳಲ್ಲಿ ಸಂಚಾರ ಮಾಡಿದ್ರೆ ಹೆಚ್ಚಿನ ಅಪಾಯ: ಸಿಎಜಿ ವರದಿಯಲ್ಲಿ ಬಹಿರಂಗ

Twitter
Facebook
LinkedIn
WhatsApp
ಬೆಂಗಳೂರು ರಸ್ತೆಗಳಲ್ಲಿ ಸಂಚಾರ ಮಾಡಿದ್ರೆ ಹೆಚ್ಚಿನ ಅಪಾಯ: ಸಿಎಜಿ ವರದಿಯಲ್ಲಿ ಬಹಿರಂಗ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ರಸ್ತೆಗಳು ಸಂಚಾರ ಮಾಡಲು ಯೋಗ್ಯ ಅಲ್ಲ ಎಂದು ಮಹಾಲೇಖಪಾಲರ(ಸಿಎಜಿ) ವರದಿ ತಿಳಿಸಿದೆ.
ವಿಧಾನಸಭೆಯಲ್ಲಿ ಇವತ್ತು ರಸ್ತೆ ಸುರಕ್ಷತಾ ವಿಚಾರಗಳಿಗೆ ಸಂಬಂಧಿಸಿದ ಸಿಎಜಿ ವರದಿ ಮಂಡನೆ ಮಾಡಲಾಯಿತು. ಕೆಟ್ಟ ದುರಸ್ಥಿಗಳು ಮತ್ತು ರಸ್ತೆಯಲ್ಲಿನ ಅಪಾಯದ ಗುಂಡಿಗಳು ರಸ್ತೆ ಅಪಘಾತಗಳಿಗೆ ಕಾರಣವಾಗಿವೆ ಎಂದು ಸಿಎಜಿ ತನ್ನ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ.

 

ವರದಿಯಲ್ಲಿ ಏನಿದೆ?
ರಸ್ತೆ ವಿಸ್ತರಣೆಗಳ ಅತಿಕ್ರಮಣವೂ ಸೇರಿದಂತೆ ವಿವಿಧ ರೀತಿಯ ರಸ್ತೆ ಅಪಾಯಗಳಲ್ಲಿ ಇವೆ. ಅದರಲ್ಲೂ ಬಿಬಿಎಂಪಿ ರಸ್ತೆಗಳಲ್ಲಿ ಹೆಚ್ಚಿನ ಅಪಾಯಗಳು ಎದುರಾಗುತ್ತಿವೆ. ಅಂದರೆ ಪ್ರತಿ ಕಿಲೋಮೀಟರ್‍ಗೆ 19 ರಿಂದ 20 ಅಪಾಯಗಳು ಎದುರಾಗುತ್ತಿವೆ.
ರಾಜ್ಯದೆಲ್ಲೆಡೆ ಹೆಚ್ಚಿನ ಸಂಖ್ಯೆಯ ವಾಹನಗಳು ತಮ್ಮ ನೋಂದಣಿ ಪ್ರಮಾಣಪತ್ರ ಅಥವಾ ಅರ್ಹತಾ ಪ್ರಮಾಣಪತ್ರಗಳನ್ನು ನವೀಕರಿಸದೇ ರಸ್ತೆಗಳಲ್ಲಿ ಸಂಚರಿಸುತ್ತಿವೆ. 22 ಜಿಲ್ಲೆಗಳಲ್ಲಿ ಆಘಾತ ಆರೈಕೆ ಕೇಂದ್ರಗಳನ್ನು (ಟಿಸಿಸಿ) ಸ್ಥಾಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿಲ್ಲ.

 

ಅಂಬುಲೆನ್ಸ್‍ಗಳ ಮೂಲ ಸ್ಥಳವು ದೂರದಲ್ಲಿದ್ದುದರಿಂದ ಅಥವಾ ಪ್ರೀ-ಟ್ರಿಪ್ ವಿಳಂಬ 30 ನಿಮಿಷಗಳಿಗಿಂತ ಹೆಚ್ಚಾಗಿದ್ದರಿಂದ ಅಪಘಾತಗೊಂಡವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಸುಮಾರು 90,000 ಪ್ರಕರಣಗಳಲ್ಲಿ ಸಮಯೋಚಿತ ವೈದ್ಯಕೀಯ ಆರೈಕೆಯನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅಪಘಾತಗಳನ್ನ, ಸಾವುಗಳನ್ನ ಕಡಿಮೆ ಮಾಡುವ ರಸ್ತೆ ಸುರಕ್ಷತಾ ಕ್ರಮಗಳು ಸಾಕಾರವಾಗಿಲ್ಲ.

 

ಶಿಫಾರಸು ಏನು?
– ಯಾವುದೇ ವಿಳಂಬವಿಲ್ಲದೆ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕಾಯ್ದೆ-2017 ರ ಅಡಿಯಲ್ಲಿ ನಿಯಮಗಳನ್ನು ಅಂತಿಮಗೊಳಿಸಬೇಕು
– ಎಲ್ಲಾ ರಸ್ತೆ ಬಳಕೆದಾರರಿಗಾಗಿ ವಿವಿಧ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸಬಹುದು.
– ಅಪಘಾತಕ್ಕೊಳಗಾದವರು ಗೋಲ್ಡನ್ ಅವರ್‍ನಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಜಿಲ್ಲೆಗಳಲ್ಲಿ ವೈದ್ಯಕೀಯ ತಜ್ಞರನ್ನೊಳಗೊಂಡಂತೆ ಅಪಘಾತ ಆರೈಕೆ ಕೇಂದ್ರಗಳನ್ನು ಸ್ಥಾಪಿಸಬೇಕು.

– ರಸ್ತೆ ಬಳಕೆದಾರರ ಅಗತ್ಯತೆಗಳನ್ನು ಪೂರೈಸಲು ಹೆದ್ದಾರಿ ಗಸ್ತು ವ್ಯವಸ್ಥೆಯನ್ನು ಬಲಪಡಿಸಬೇಕು.
– ಆರ್‍ಟಿಒಗಳನ್ನು ಬಲಪಡಿಸಲು ಕ್ರಮ ತೆಗೆದುಕೊಳ್ಳಬೇಕು, ವೈಜ್ಞಾನಿಕ ಪರೀಕ್ಷಾ ಟ್ರ್ಯಾಕ್‍ಗಳನ್ನು ಒದಗಿಸಬೇಕು.

– ವಿಳಂಬವನ್ನ ತಪ್ಪಿಸಲು ಅಂಬುಲೆನ್ಸ್‍ಗಳ ಮೂಲ ಸ್ಥಳಗಳನ್ನು ಸಮರ್ಪಕವಾಗಿ ಗುರುತಿಸಬೇಕು. ಅಂಬುಲೆನ್ಸ್ ಸಂಖ್ಯೆ ಹೆಚ್ಚಿಸಬೇಕು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist