ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೈಕ್ ಅಪಘಾತ: ಮಗನ ಮಡಿಲಲ್ಲೇ ನರಳಿ ಪ್ರಾಣ ಬಿಟ್ಟ ತಂದೆ!

Twitter
Facebook
LinkedIn
WhatsApp
g 1

ಬಾಗಲಕೋಟೆ (ಮೇ 20): ಬಾಗಲಕೋಟೆಯ ನಿವಾಸಿಗಳಾದ ತಂದೆ- ಮಗ ಬೈಕ್‌ನಲ್ಲಿ ಹೋಗುವಾಗ ಅಪರಿಚಿತ ವಾಹನ ಬಂದು ಡಿಕ್ಕಿ ಹೊಡೆದು ಕೆಳಗೆ ಬಿದ್ದ ತಂದೆಯ ಮೇಲೆ ಹರಿದು ಸಾವನ್ನಪ್ಪಿದ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಅಮೀನಗಡದಲ್ಲಿ ಶನಿವಾರ ನಡೆದಿದೆ.

ಬೈಕ್‌ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ರೆಹಮಾನಸಾಬ್ ಮುದಗಲ್ (50) ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ನವನಗರದ ವಾಜಪೇಯಿ ಕಾಲೋನಿ ನಿವಾಸಿಯಾಗಿದ್ದ ರೆಹಮಾನ್ ಸಾಬ್ ಮಗ ಮಗ ಕಲಂದರ ಬಾಬಾನೊಂದಿಗೆ ಅಮೀನಗಡದಲ್ಲಿ ಟೈಲ್ಸ್‌ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು.

 ಆದರೆ, ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಕೆಳಗೆ ಬಿದ್ದ ರೆಹಮಾನ್‌ ಸಾಬ್‌ ಮೇಲೆ ವಾಹನ ಹರಿದಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದಾರೆ. ಕೆಳಗೆ ಬಿದ್ದು ಗಾಯಗೊಂಡ ಮಗ ತಂದೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸೇರಿಸಬೇಕು ಅನ್ನುವಷ್ಟರಲ್ಲೇ ಮಗನ ಮಡಿಲಲ್ಲೇ ತಂದೆ ಸಾವನ್ನಪ್ಪಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ