ಭಟ್ಕಳ(ಮೇ.25): ಇಲ್ಲಿನ ಮುಠ್ಠಳ್ಳಿ ಗ್ರಾಪಂ ವ್ಯಾಪ್ತಿಯ ತಲಾನ್ದಲ್ಲಿ ಮಾಲಕಿ ಜಾಗದ ಗುಡ್ಡದ ನಿರ್ಜನ ಪ್ರದೇಶದಲ್ಲಿ ಸುಮಾರು 35-40 ವರ್ಷದ ಮಹಿಳೆಯೋರ್ವಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎನ್ನುವ ಬಲವಾದ ಸಂಶಯ ವ್ಯಕ್ತವಾಗಿದೆ.
ಮಂಗಳವಾರ ಬೆಳಗ್ಗೆ ಮಹಿಳೆಯೋರ್ವಳು ಬೆಟ್ಟಕ್ಕೆ ಸೊಪ್ಪು ತರಲು ಅದೇ ಸ್ಥಳದ ಹತ್ತಿರದಿಂದಲೇ ಹೋಗುತ್ತಿರುವಾಗ ಆಕೆಗೆ ವಾಸನೆ ಬಂದಿದ್ದು, ಅಕ್ಕಪಕ್ಕದಲ್ಲಿ ನೋಡುವಾಗ ಮಹಿಳೆಯ ಶವ ಕಂಡು ಬಂದಿತ್ತು. ತಕ್ಷಣ ಆಕೆಯು ಗ್ರಾಪಂ ಅಧಿಕಾರಿಯೋರ್ವರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ತಿಳಿಸಿದ್ದರಿಂದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತ ದೇಹವನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಶವಾಗಾರಕ್ಕೆ ರವಾನಿಸಿದರು.
ಮಹಿಳೆಯು ಚೂಡಿದಾರ ಧರಿಸಿದ್ದು ಅಸ್ತವ್ಯವಸ್ಥವಾಗಿರುವುದು ಕಂಡು ಬಂದಿದೆ. ಮೃತ ಮಹಿಳೆಯ ಮುಖ ಭಾಗ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಪೊಲೀಸರು ಈಕೆಯ ಪತ್ತೆಗಾಗಿ ಎಲ್ಲ ಪೊಲೀಸ್ ಠಾಣೆಗೂ ಮಾಹಿತಿ ರವಾನಿಸಿದ್ದಾರೆ. ಶನಿವಾರ ಮಹಿಳೆಯು ಬೈಕ್ನಲ್ಲಿ ಬಂದು ಇಳಿದು ನಂತರ ಅಟೋವೊಂದರಲ್ಲಿ ಹೋಗಿದ್ದಾಳೆನ್ನುವ ಮಾಹಿತಿ ಹರಿದಾಡುತ್ತಿದ್ದು ಇದರ ಸತ್ಯಾಸತ್ಯತೆಯನ್ನು ಪೊಲೀಸರು ಪರಿಶೀಲಿಸಬೇಕಿದೆ. ಮಹಿಳೆಯ ಕೊಲೆಯ ಹಿಂದೆ ಸ್ಥಳೀಯರು ಇದ್ದಾರೆಯೇ? ಎನ್ನುವುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?