ಮಂಗಳವಾರ, ಮೇ 14, 2024
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭದ್ರತಾ ಪಡೆ ಮೇಲೆ ದಾಳಿ: ಮೂವರನ್ನು ನೇಣುಗಂಬಕ್ಕೆ ಏರಿಸಿದ ಇರಾನ್‌ ಸರ್ಕಾರ

Twitter
Facebook
LinkedIn
WhatsApp
f 2

ಇರಾನ್:‌ ಕಳೆದ ವರ್ಷ ಮಹ್ಸಾ ಅಮಿನಿಯ ಸಾವಿನ ಘಟನೆ ನಡೆದ ನಂತರ ಪ್ರತಿಭಟನೆ ಸಂದರ್ಭದಲ್ಲಿ ಭದ್ರತಾ ಪಡೆಯ ಯೋಧರನ್ನು ಕೊಂದ ಆರೋಪದಲ್ಲಿ ಇರಾನ್‌ ಸರ್ಕಾರ ಮೂವರನ್ನು ನೇಣುಗಂಬಕ್ಕೆ ಏರಿಸಿದ್ದು, ಇದಕ್ಕೆ ಹಲವು ದೇಶಗಳು ತೀವ್ರ ಖಂಡನೆ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

2022ರ ನವೆಂಬರ್‌ 16ರಂದು ಇರಾನ್‌ ನ ಕೇಂದ್ರ ನಗರವಾದ ಇಸ್ಫಾಹಾನ್‌ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರು ಭದ್ರತಾ ಪಡೆಯ ಯೋಧರನ್ನು ಕೊಂದಿದ್ದರು. ಈ ಪ್ರಕರಣದಲ್ಲಿ ಮಜೀದ್‌ ಕಾಝೇಮಿ, ಸಲೇಹ್‌ ಮಿರ್ಹಾಶೆಮಿ ಮತ್ತು ಸಯೀದ್‌ ಯಾಗೌಬಿಯನ್ನು ದೋಷಿ ಎಂದು ಘೋಷಿಸಲಾಗಿತ್ತು ಎಂದು ಮಿಝಾನ್‌ ಆನ್‌ ಲೈನ್‌ ನ್ಯೂಸ್‌ ವೆಬ್‌ ಸೈಟ್‌ ವರದಿ ಮಾಡಿದೆ.

ಪೊಲೀಸರ ವಶದಲ್ಲಿದ್ದ 22 ವರ್ಷದ ಮೆಹ್ಸಾ ಅಮಿನಿ ಸಾವನ್ನಪ್ಪಿದ್ದ ನಂತರ ಇರಾನ್‌ ನಾದ್ಯಂತ ಪ್ರತಿಭಟನೆ ಭುಗಿಲೆದ್ದಿತ್ತು. ಇಸ್ಲಾಮಿಕ್‌ ರಿಪಬ್ಲಿಕ್‌ ನ ಕಠಿಣ ವಸ್ತ್ರ ಸಂಹಿತೆಯನ್ನು ಉಲ್ಲಂಘಿಸಿರುವ ಆರೋಪದ ಮೇಲೆ ಅಮಿನಿಯನ್ನು ಇರಾನ್‌ ಕುರ್ದ್ ಪೊಲೀಸರು ಬಂಧಿಸಿದ್ದರು.

ಪ್ರಕರಣದಲ್ಲಿ ದೋಷಿಯಾದ ಮೂವರನ್ನು ಇರಾನ್‌ ಸರ್ಕಾರ ಶುಕ್ರವಾರ ನೇಣುಗಂಬಕ್ಕೆ ಏರಿಸಿದೆ. ಈ ಬಗ್ಗೆ ಯುರೋಪಿಯನ್‌ ಯೂನಿಯನ್‌ ತೀವ್ರ ಅಸಮಧಾನ ವ್ಯಕ್ತಪಡಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ