ಜೈಪುರ: ಇತ್ತೀಚೆಗೆ ಕೇಂದ್ರ ಸರ್ಕಾರವು ‘ಹಿಂದಿ ಹೇರಿಕೆ’ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮೌನ ಮುರಿದಿದ್ದಾರೆ. ‘ಭಾಷೆಯ ಆಧಾರದಲ್ಲಿ ಇಂದು ವಿವಾದ ಹುಟ್ಟಿಸುವ ಯತ್ನಗಳು ನಡೆಯುತ್ತಿದ್ದು, ಈ ಬಗ್ಗೆ ನಾಗರಿಕರು ಎಚ್ಚರದಿಂದ ಇರಬೇಕು. ಬಿಜೆಪಿ ಎಲ್ಲ ಭಾರತೀಯ ಭಾಷೆಗಳನ್ನು ‘ಭಾರತೀಯತೆಯ ಆತ್ಮ’ ಎಂದು ಪರಿಗಣಿಸುತ್ತದೆ’ ಎಂದಿದ್ದಾರೆ.
ಈ ಮೂಲಕ ಹಿಂದಿ ಹೇರಿಕೆ ಆರೋಪ ಮಾಡುತ್ತಿರುವ ಪಕ್ಷಗಳು ಹಾಗೂ ವ್ಯಕ್ತಿಗಳಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಪದಾಧಿಕಾರಿಗಳ ಸಮ್ಮೇಳನವನ್ನು ವರ್ಚುವಲ್ ರೂಪದಲ್ಲಿ ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು, ‘ಇಡೀ ದೇಶದ ಸಾಂಸ್ಕೃತಿಕ ಹಾಗೂ ಭಾಷಾ ವೈವಿಧ್ಯತೆಯನ್ನು ರಾಷ್ಟ್ರೀಯ ಅಸ್ಮಿತೆಯೊಂದಿಗೆ ಬಿಜೆಪಿ ಒಗ್ಗೂಡಿಸಿದೆ’ ಎಂದು ಸ್ಪಷ್ಟಪಡಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಗಳಿಗೆ ಪ್ರಾಧಾನ್ಯತೆ ನೀಡಲಾಗಿದೆ. ಇದು ಸ್ಥಳೀಯ ಭಾಷೆಗಳ ಬಗ್ಗೆ ಬಿಜೆಪಿ ಹೊಂದಿರುವ ಬದ್ಧತೆಯ ದ್ಯೋತಕ. ಬಿಜೆಪಿ ಎಲ್ಲ ಭಾರತೀಯ ಭಾಷೆಗಳನ್ನೂ ಭಾರತೀಯತೆಯ ಆತ್ಮ ಎಂದು ಪರಿಗಣಿಸುತ್ತದೆ. ದೇಶದ ಉತ್ತಮ ಭವಿಷ್ಯಕ್ಕೆ ದೇಶದ ಭಾಷೆಗಳು ಕೊಂಡಿ’ ಎಂದು ಹೇಳಿದರು.
ಇತ್ತೀಚೆಗೆ ಅಧಿಕೃತ ಭಾಷಾ ಸಂಸದೀಯ ಸಮಿತಿ ಅಧ್ಯಕ್ಷರೂ ಆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ‘ಕೇಂದ್ರ ಸರ್ಕಾರ ಶೇ.70ರಷ್ಟುವ್ಯವಹಾರವನ್ನು ಹಿಂದಿಯಲ್ಲೇ ನಡೆಸುತ್ತದೆ. ಹೀಗಾಗಿ ಇಂಗ್ಲಿಷ್ ಬದಲಾಗಿ ಹಿಂದಿಯನ್ನು ಸಂಪರ್ಕ ಭಾಷೆಯಾಗಿ ಬಳಸಬಹುದು’ ಎಂದು ಹೇಳಿದ್ದರು. ಆದರೆ, ‘ಇತರ ಭಾರತೀಯ ಭಾಷೆಗಳಿಗೆ ಹಿಂದಿಯನ್ನು ಪರ್ಯಾಯವಾಗಿ ಬಳಸಬಾರದು’ ಎಂದು ಸ್ಪಷ್ಟಪಡಿಸಿದ್ದರು. ಇದರ ಬೆನ್ನಲ್ಲೇ, ನಟ ಅಜಯ್ ದೇವಗನ್ ಅವರು, ‘ಹಿಂದಿ ಭಾರತದ ರಾಷ್ಟ್ರೀಯ ಭಾಷೆ’ ಎಂದಿದ್ದರು. ಇದು ವಿವಾದ ಹುಟ್ಟುಹಾಕಿತ್ತು ಹಾಗೂ ಹಿಂದಿಯನ್ನು ಅಷ್ಟಾಗಿ ಇಷ್ಟಪಡದ ದಕ್ಷಿಣ ರಾಜ್ಯಗಳ ರಾಜಕಾರಣಿಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
‘ಹಿಂದಿ ಮಾತನಾಡುವವರು ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಾರೆ’ ಎಂದ ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್ಮುಡಿ ಹಿಂದಿ ಹೇರಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಯಮತ್ತೂರಿನ ಭಾರತೀಯಾರ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ತಮಿಳುನಾಡಿನಲ್ಲಿ ಈಗಾಗಲೇ ದ್ವಿಭಾಷಾ ಪದ್ಧತಿ ಜಾರಿಯಲ್ಲಿದೆ. ಇಂಗ್ಲೀಷ್ ಅಂತಾರಾಷ್ಟ್ರೀಯ ಭಾಷೆಯಾದರೆ ತಮಿಳು ಸ್ಥಳೀಯ ಭಾಷೆಯಾಗಿದೆ. ಇಲ್ಲಿ ಹಿಂದಿ ಕಲಿಕೆಯ ಅಗತ್ಯವೇನಿದೆ?’ ಎಂದು ಅವರು ಪ್ರಶ್ನಿಸಿದ್ದಾರೆ.
‘ಹಿಂದಿ ಕಲಿತರೆ ಹೆಚ್ಚಿನ ಉದ್ಯೋಗಾವಕಾಶಗಳು ಸಿಗುತ್ತವೆಂದು ಹೇಳುತ್ತಾರೆ. ಹೋಗಿ ಕೊಯಮತ್ತೂರಿನಲ್ಲಿ ಒಮ್ಮೆ ನೋಡಿ. ಹಿಂದಿ ಮಾತನಾಡುವವರು ಇಲ್ಲಿ ಪಾನಿಪುರಿ ಮಾರುತ್ತಾರೆ’ ಎಂದು ವ್ಯಂಗ್ಯವಾಡಿದ್ದಾರೆ. ‘ತಮಿಳುನಾಡಿನ ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲೂ ಸಿದ್ಧರಾಗಿದ್ದಾರೆ ಎಂದರು..
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?