ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಅಪಘಾತ: ಬಸ್ಸು ಲಾರಿಗಳ ನಡುವೆ ಸಿಲುಕಿಕೊಂಡ ಬೈಕ್!

Twitter
Facebook
LinkedIn
WhatsApp
Accident In Bengaluru

ಬೆಂಗಳೂರು: ನಗರದ ನಾಯಂಡಹಳ್ಳಿ ಬಳಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅದೃಷ್ಟವಶಾತ್ ಮಗು ಹಾಗೂ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಮೆಂಟ್ ತುಂಬಿದ್ದ ಲಾರಿ ಬೈಕ್​​ ಮೇಲೆ ಹರಿದು ಬಳಿಕ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದೆ. ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಅನುಷಾ ತಲೆ ಛಿದ್ರವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಅಪಘಾತದಲ್ಲಿ ಮೃತ ಅನುಷಾ ತಾಯಿ ವೃದ್ಧೆ ವನಜಾಕ್ಷಿ ಹಾಗೂ ಮಗ ಆರ್ಯಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರಿನ ನಾಯಂಡಹಳ್ಳಿ ಬಳಿ ಇಂದು ಈ ಭೀಕರ ಅಪಘಾತ ಸಂಭವಿಸಿದ್ದು, ಮಂಡ್ಯ ಮೂಲದ ಅನುಷಾ ಸಾವಿಗೀಡಾದ ಮಹಿಳೆ. ಈಕೆ ತನ್ನ ತಾಯಿ ಮತ್ತು 7 ವರ್ಷದ ಮಗುವನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ದೀಪಾಂಜಲಿನಗರ ಕಡೆಯಿಂದ ಬರುತ್ತಿದ್ದರು. ಈ ಸಂದರ್ಭದಲ್ಲಿ ಸಿಮೆಂಟ್ ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಬೈಕ್​ ಮೇಲೆ ಹರಿದು ಬಳಿಕ ಕೆಎಸ್​ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಅನುಷಾ ತಲೆ ಮೇಲೆ ಹರಿದಿದೆ. ಇನ್ನು ಅಜ್ಜಿ ವನಜಾಕ್ಷಿಯ ಎರಡು ಕಾಲುಗಳ ಕಟ್ ಆಗಿದ್ದು, ಮಗುವಿಗೂ ಸಹ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನು ನೋಡಿದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಪ್ರತಿಭಟನೆ ನಡೆಸಿದರು. ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದ್ದರಿಂದ ಲಾರಿ ನಿಂತಿದೆ. ಇಲ್ಲದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎನ್ನಲಾಗಿದೆ. ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಲಾರಿಗೆ ಕಲ್ಲು ತೂರಿದ್ದು, ಮುಂಭಾಗದ ಗಾಜುಗಳು ಒಡೆದುಹೋಗಿವೆ.

ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಆಗಮಿಸಿ ಪ್ರತಿಭಟನೆಕಾರರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ಇನ್ನು ಘಟನೆ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್​ ಆಗಿದ್ದು, ಆ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಚಾಲಕನ್ನು ಹಿಡಿಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ