![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಅಸನಿ ಚಂಡಮಾರುತದ (Cyclone Asani) ಪ್ರಭಾವದಿಂದಾಗಿ ಇಂದು ಅಂಡಮಾನ್-ನಿಕೋಬಾರ್ ದ್ವೀಪ ಸಮೂಹದಲ್ಲಿ ಭರ್ಜರಿ ಗಾಳಿ-ಮಳೆಯಾಗುತ್ತಿದ್ದು, ಅಲ್ಲಿರುವ ಜನರನ್ನು ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರ ಮಾಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಅಸನಿ ಚಂಡಮಾರುತ ಏಳುವ ಎಚ್ಚರಿಕೆಯನ್ನು ಕಳೆದ ಕೆಲವು ದಿನಗಳ ಹಿಂದೆಯೇ ಭಾರತೀಯ ಹವಾಮಾನ ಇಲಾಖೆ ನೀಡಿತ್ತು. ಈ ಚಂಡಮಾರುತ ಬಾಂಗ್ಲಾದೇಶ, ಮಯನ್ಮಾರ್ ಕರಾವಳಿ ಮತ್ತು ಭಾರತದ ಅಂಡಮಾನ್-ನಿಕೋಬಾರ್ ದ್ವೀಪ ಸಮೂಹಕ್ಕೆ ಅಪ್ಪಳಿಸಲಿದ್ದು, ನಮ್ಮ ದೇಶದ ಇತರ ಪ್ರದೇಶಗಳ ಮೇಲೆ ಹೆಚ್ಚಿನ ಪ್ರಭಾವ ಬೀರುವುದಿಲ್ಲ ಎಂದೂ ಹೇಳಲಾಗಿದೆ. ಅದರಂತೆ ಅಂಡಮಾನ್-ನಿಕೋಬಾರ್ನಲ್ಲಿ ಈಗಾಗಲೇ ಗಾಳಿಯ ತೀವ್ರತೆ ಹೆಚ್ಚಾಗಿದ್ದು, ಮಳೆ ಸುರಿಯುತ್ತಿದೆ. ಚಂಡಮಾರುತ ಎದ್ದ ಸಂದರ್ಭದಲ್ಲಿ ಸಂಬಂಧಪಟ್ಟ ಸಮುದ್ರ ತೀರಗಳಲ್ಲಿ ಅಲೆಗಳ ಅಬ್ಬರ ಜೋರಾಗಿರುವ ಕಾರಣ ಚೆನ್ನೈ ಮತ್ತು ವಿಶಾಖಪಟ್ಟಣಂ ಕರಾವಳಿ ತೀರಗಳಲ್ಲೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist