ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿ ನ ಮಗು ಅದಲು ಬದಲು ಪ್ರಕರಣ - ಡಿಎನ್ಎ ವರದಿ ಬರುವ ಮೊದಲೇ ಹಸುಳೆ ಸಾವು

Twitter
Facebook
LinkedIn
WhatsApp
ಮಂಗಳೂರಿ ನ ಮಗು ಅದಲು ಬದಲು ಪ್ರಕರಣ – ಡಿಎನ್ಎ ವರದಿ ಬರುವ ಮೊದಲೇ ಹಸುಳೆ ಸಾವು

ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ ಒಂದು ತಿಂಗಳ ಹಿಂದೆ ನಡೆದ ಮಗು ಅದಲು ಬದಲು ಪ್ರಕರಣದಲ್ಲಿ ಸುದ್ದಿಯಾಗಿದ್ದ ಮಗುವೊಂದು ಡಿಎನ್ಎ ಪರೀಕ್ಷೆಯ ವರದಿ ಬರುವ ಮೊದಲೇ ನ.೧೫ ರ ಸೋಮವಾರ ಮೃತಪಟ್ಟಿದೆ.

ಲೇಡಿಗೋಶನ್ ಆಸ್ಪತ್ರೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಕಳೆದ ಅ.15ರಂದು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು ಹೆಣ್ಣು ಮಗು ಎಂದು ಹೇಳಿದ್ದರು.ಮಗುವಿಗೆ ಉಸಿರಾಟ ತೊಂದರೆ ಕಾರಣ ಐಸಿಯುನಲ್ಲಿಡಲಾಗಿತ್ತು. ಬಳಿಕ ಪೋಷಕರ ಕೈಗೆ ಮಗುವನ್ನು ನೀಡಲಾಗಿದೆ. ಈ ವೇಳೆ ಪರಿಶೀಲಿಸಿದಾಗ ಗಂಡು ಮಗುವನ್ನು ನೀಡಲಾಗಿತ್ತು. ಮಗು ಬದಲಾದ ಬಗ್ಗೆ ವೈದ್ಯರ ಗಮನಕ್ಕೆ ತಂದಾಗ, ಗಂಡು ಮಗುವೇ ಜನಿಸಿದೆ. ದಾಖಲೆಯಲ್ಲಿ ಹೆಣ್ಣು ಎಂದು ತಪ್ಪಾಗಿ ನಮೂದಿಸಲಾಗಿದೆ ಎಂದು ತಿಳಿಸಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪೋಷಕರು ಹೆಣ್ಣು ಮಗುವನ್ನೇ ನೀಡಲು ಆಗ್ರಹಿಸಿದ್ದರು. ಅಲ್ಲದೇ, ಈ ಬಗ್ಗೆ ಮಂಗಳೂರಿನ ಬಂದರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಮಗುವಿನ ಪೋಷಕರ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ಮಗುವಿನ ಡಿಎನ್‌ಎ ಮಾದರಿಯನ್ನು ಪರೀಕ್ಷೆಗಾಗಿ ಹೈದರಾಬಾದ್​ಗೆ ಕಳುಹಿಸಿಕೊಡಲಾಗಿತ್ತು. ಆದರೆ, ಡಿಎನ್ಎ ಪರೀಕ್ಷೆಯ ವರದಿ ಬರುವ ಮುನ್ನವೇ ಮಗು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದೆ.
“ಮಗು ಪ್ರೀ ಮೆಚ್ಯೂರ್ಡ್ ಆಗಿ ಜನಿಸಿದ್ದು ಆರಂಭದಿಂದಲೇ ಉಸಿರಾಟದ ಸಮಸ್ಯೆ, ಕಡಿಮೆ ತೂಕ ಸೇರಿದಂತೆ ವಿವಿಧ ಗಂಭೀರ ಸಮಸ್ಯೆಗಳಿದ್ದವು. ಎಲ್ಲ ಅಗತ್ಯ ಚಿಕಿತ್ಸೆ ನೀಡಿಯೂ ಮಗು ಮಗು ಚಿಕಿತ್ಸೆ ಫಲಕಾರಿಯಗದೇ ಮೃತಪಟ್ಟಿದೆ ಎಂದು ಮಗುವಿನ ಆರೋಗ್ಯ ಸ್ಥಿತಿ ಬಗ್ಗೆ ಹೆತ್ತವರಿಗೆ ಹಲವು ಬಾರಿ ಮಾಹಿತಿ ನೀಡುತ್ತಾ ಬಂದಿದ್ದೆವು” ಎಂದುಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಆಧೀಕ್ಷಕ ಡಾ. ದುರ್ಗಾಪ್ರಸಾದ್ ತಿಳಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಮಗುವಿನ ಪೋಷಕರು, ” ಆಸ್ಪತ್ರೆಯವರು ಮಗುವಿನ ಆರೋಗ್ಯದ ಸಮಸ್ಯೆ ಬಗ್ಗೆ ಆರಂಭದಲ್ಲಿ ಹೇಳಿರಲಿಲ್ಲ, ಹೆಣ್ಣು ಮಗುವಿನ ಬದಲು ಗಂಡು ಮಗುವನ್ನು ನೀಡಿದ್ದರು. ಈಗ ಗಂಡು ಮಗುವನ್ನು ಕಳೆದುಕೊಂಡಿದ್ದೇವೆ ನಮಗೆ ನ್ಯಾಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು