ಮಂಗಳೂರಿನಲ್ಲಿ ಬೈಕ್ ಅಪಘಾತ ಮಾಣಿಲದ ಯುವಕ ಮೃತ್ಯು
Twitter
Facebook
LinkedIn
WhatsApp
ವಿಟ್ಲ, ಫೆ 11: ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತವೊಂದರಲ್ಲಿ ಮಾಣಿಲ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ ಮಣಿಯಾನಿ (24) ಮೃತ ದುರ್ದೈವಿ.
ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ ಎನ್ನಲಾಗಿದೆ.
ಮೃತರು ತಾಯಿ ಸುಧಾಮಣಿ ಹಾಗೂ ಓರ್ವ ಸಹೋದರ ನನ್ನು ಅಗಲಿದ್ದಾರೆ.