ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಪೊಲೀಸ್ ಎಂದು ಹೇಳಿ ನಟಿಯೋರ್ವಳ ತಾಯಿಯಿಂದ ಸಾವಿರಾರು ರೂಪಾಯಿ ಪೀಕಿದ ವ್ಯಕ್ತಿ

Twitter
Facebook
LinkedIn
WhatsApp
rksingh 1

ಮಂಗಳೂರು: ಪೊಲೀಸ್ ಸೋಗಿನಲ್ಲಿ ನಟಿಯೋರ್ವಳ ತಾಯಿ ಬಳಿಯಿಂದ ಸಾವಿರಾರು ರೂಪಾಯಿ ಸುಲಿಗೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ನೀವು ವೇಶ್ಯವಾಟಿಕೆ ನಡೆಸುತ್ತಿದ್ದೀರಾ, ದಂಧೆ ನಡೆಸುತ್ತಿರುವುದು ಸಾಹೇಬರಿಗೆ ಗೊತ್ತಾಗಿದೆ. ಸಾಹೇಬ್ರ ಜೊತೆ ಸಹಕರಿಸಿದರೆ ದಂಧೆಗೆ ತೊಂದರೆ ಆಗಲ್ಲ, ಹೀಗಾಗಿ ಗೂಗಲ್ ಪೇ ಮಾಡಿದರೆ ರೈಡ್ ಮಾಡಲ್ಲ ಅಂತಾ ಬೆದರಿಕೆ ಹಾಕಿ ಹಣ ವರ್ಗಾಯಿಸಿಕೊಂಡು ಪೊಲೀಸ್ ವೇಷದಾರಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಇದೀಗ ಅಂಗಡಿ ಮುಚ್ಚಿ ಮನೆಯಲ್ಲೇ ನೆಲೆಸಿದ್ದಾರೆ. ಇವರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ತಾನು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಶಿವರಾಜ್ ದೇವಾಡಿಗ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ, ನಿಮ್ಮ ಮನೆಯಲ್ಲಿ ಚಿನ್ನಾಭರಣ, ಹಣ ಇದೆ ಎಂದು ದೂರು ಬಂದಿದೆ. ಪ್ರಕರಣ ಮುಚ್ಚಿಹಾಕಲು ಹಣ ಕೊಡಬೇಕು ಇಲ್ಲವಾದರೆ ಪೊಲೀಸರು ರೈಡ್ ಮಾಡುತ್ತಾರೆ ಎಂದು ಬೆದರಿಕೆಹಾಕಿದ್ದಾನೆ. ಇದರಿಂದ ಹೆದರಿದ ಮಹಿಳೆ ಹತ್ತಿರದ ಮೊಬೈಲ್ ಶಾಪ್​ಗೆ ಹೋಗಿ ಗೂಗಲ್ ಪೇ ಮೂಲಕ 18 ಸಾವಿರ ರೂಪಾಯಿ ವರ್ಗಾಯಿಸಿದ್ದಾರೆ.

ಮರುದಿನ ಮತ್ತೆ ಕರೆ ಮಾಡಿದ ಅದೇ ವ್ಯಕ್ತಿ, ಫೈಲ್ ಪೊಲೀಸ್ ಆಯುಕ್ತರ ಕಚೇರಿಗೂ ಹೋಗಿದೆ, ಪ್ರಕರಣವನ್ನು ಇಲ್ಲವಾಗಿಸಲು ಸಿಬ್ಬಂದಿಗೆ ಹಣ ನೀಡಬೇಕು, ಸಿಸಿಟಿವಿ ಆಫ್ ಮಾಡಿ ಫೈಲ್ ತೆಗೆದುಕೊಳ್ಳಲೂ ಸಿಬ್ಬಂದಿಗೆ ಹಣ ನೀಡಬೇಕು. ಇಲ್ಲವಾದರೆ ಆಯುಕ್ತರು ಮೀಡಿಯಾ ಸಹಿತವಾಗಿ ಮನೆಗೆ ಬರುತ್ತಾರೆ ಎಂದು ಬೆದರಿಕೆ ಹಾಕುತ್ತಾನೆ. ಹೆದರಿಕೊಂಡ ಮಹಿಳೆ ಮತ್ತದೇ ಮೊಬೈಲ್ ಶಾಪ್​ಗೆ ಹೋಗಿ 20 ಸಾವಿರ ರೂಪಾಯಿಯನ್ನು ಅದೇ ನಂಬರ್​ಗೆ ಗೂಗಲ್ ಪೇ ಮಾಡಿದ್ದಾರೆ. ಹೀಗೆ ಒಟ್ಟು 38 ಸಾವಿರ ರೂಪಾಯಿ ಹಣವನ್ನು ಕಳುಹಿಸಿದ್ದಾರೆ.

ನನಗೊಂದು ಕುಟುಂಬ ಇದೆ. ನಾನೇನು ತಪ್ಪು ಮಾಡದಿದ್ದರೂ ಬೆದರಿಕೆ ಹಾಕಿದಾಗ ಏನೂ ಮಾಡಲಾಗಲಿಲ್ಲ. ಎರಡು ಪೊಲೀಸ್ ಠಾಣೆಯಲ್ಲಿನ ಪರಿಚಯಸ್ಥರಿಗೆ ಕರೆ ಮಾಡಿದಾಗ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪೊಲೀಸ್ ಸಮವಸ್ತ್ರದಲ್ಲಿ ಗೇಟ್ ಮುಂದೆ ಬಂದ ವ್ಯಕ್ತಿ ಅರ್ಧ ಗಂಟೆಯೊಳಗೆ ಹಣ ಹಾಕಬೇಕು, ಇಲ್ಲದಿದ್ದರೆ ಸಾಹೇಬ್ರು ಇಲ್ಲೇ ಹತ್ತಿರದಲ್ಲಿದ್ದಾರೆ, ಈಗಲೇ ಕರೆ ಮಾಡುತ್ತೇನೆ ಎಂದೆಲ್ಲಾ ಹೇಳಿ ಬೆದರಿಸಿದ್ದಾನೆ. ಇದರಿಂದ ಹೆದರಿದ ನಾನು ಹಣ ವರ್ಗಾಯಿಸಿದ್ದೇನೆ ಎಂದು ಟಿವಿ9 ಜೊತೆ ಮಹಿಳೆ ಮಾಹಿತಿ ಹಂಚಿಕೊಂಡಿದ್ದಾರೆ. ಬಂದವನು ಪೊಲೀಸ್ ಹೌದಾ ಅಲ್ಲವೊ ಅನ್ನೋದು ಇನ್ನು ಗೊತ್ತಾಗಿಲ್ಲ. ಆದರೆ ಬಂದವನು ಪೊಲೀಸ್ ಹಾಗೆ ಇದ್ದ. ಖಾಕಿ ಪ್ಯಾಂಟ್, ಡ್ರೆಸ್ ಹಾಗೂ ವಾಕಿಟಾಕಿ ಇತ್ತು, ವಾಕಿಟಾಕಿಯಲ್ಲಿ ಮಾತನಾಡುವುದು ಕೂಡ ಕೇಳಿಸುತ್ತಿತ್ತು ಎಂದು ಮಹಿಳೆ ಹೇಳಿದ್ದಾರೆ.

ಪಾಂಡೇಶ್ವರ ಠಾಣೆಯಲ್ಲಿದ್ದಾರೆ ಶಿವಾರಾಜ್ ಹೆಸರಿನ ಸಿಬ್ಬಂದಿ!

ಶಿವರಾಜ್ ಎಂಬ ಹೆಸರಿನ ಸಿಬ್ಬಂದಿ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲೂ ಇದ್ದಾರೆ. ಆದರೆ ಈತ ಅಲ್ಲಿಗೆ ಹೋಗಿಲ್ಲ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮಹಿಳೆ ಈವರೆಗೆ ಪೊಲೀಸ್ ಠಾಣೆಗೆ ದೂರು ನೀಡಿಲ್ಲ, ಆದರೆ ಮಾಹಿತಿ ತಿಳಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ