ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ವೀರ ಯೋಧ ಮುರಳೀಧರ ರೈ ಪಾರ್ಥಿವ‌ ಶರೀರ ಕುಟುಂಬಿಕರಿಗೆ ಹಸ್ತಾಂತರ

Twitter
Facebook
LinkedIn
WhatsApp
ಮಂಗಳೂರು: ವೀರ ಯೋಧ ಮುರಳೀಧರ ರೈ ಪಾರ್ಥಿವ‌ ಶರೀರ ಕುಟುಂಬಿಕರಿಗೆ ಹಸ್ತಾಂತರ

ಮಂಗಳೂರು, ಜ 25: ಭಾರತೀಯ ಸೇನೆಯಲ್ಲಿ ಶಸಸ್ತ್ರ ಸೀಮಾ ಬಲ್ ಯೋಧರಾಗಿ ಮಧ್ಯಪ್ರದೇಶದ ಭೋಪಾಲದಲ್ಲಿ ಸೇವಾ ನಿರತರಾಗಿದ್ದಾಗಲೇ ಹೃದಯಾಘಾತದಿಂದ ನಿಧನರಾದ ಶಕ್ತಿನಗರದ ವೀರ ಯೋಧ ಹವಲ್ದಾರ್ ಮುರಳೀಧರ ರೈ ಅವರ ಪಾರ್ಥಿವ‌ ಶರೀರವನ್ನು ಸಕಲ ಸರಕಾರಿ ಗೌರವ ಸಲ್ಲಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಶಾಸಕ ವೇದವ್ಯಾಸ್ ಕಾಮತ್ ಅವರು ವೀರ ಯೋಧ ಮುರಳೀಧರ ರೈ ಅವರ ಪಾರ್ಥಿವ ಶರೀರಕ್ಕೆ ಗೌರವ‌ ಸಲ್ಲಿಸಿದರು.

ಮುರಳೀಧರ ರೈ ಅವರು ಫೆಬ್ರವರಿ 5ರಂದು ನಡೆಯಲಿದ್ದ ತಮ್ಮ ತಾಯಿಯ ಒಂದು ವರ್ಷದ ಪುಣ್ಯತಿಥಿ ಪ್ರಯುಕ್ತ ಮಂಗಳವಾರ ಮಂಗಳೂರಿಗೆ ಆಗಮಿಸುವುದಲ್ಲಿದ್ದರು. ಅಲ್ಲದೆ ತಮ್ಮ ಏಳು ತಿಂಗಳ ಮಗುವನ್ನು ಮೊದಲ ಬಾರಿಗೆ ನೋಡಲೆಂದು ಊರಿನತ್ತ ಹೊರಡುವವರಿದ್ದರು. ರವಿವಾರ ತಮ್ಮ ಪತ್ನಿಯೊಂದಿಗೆ ವೀಡಿಯೋ ಕಾಲ್‌ನಲ್ಲಿ ಮಾತನಾಡಿದ್ದರು.

ಆದರೆ ವಿಧಿ ಅವರ ಈ ಖುಷಿಯನ್ನು ಕಸಿದುಕೊಂಡಿತ್ತು. ಮಧ್ಯಪ್ರದೇಶದ ಭೋಪಾಲದಲ್ಲಿ ಕರ್ತವ್ಯದಲ್ಲಿದ್ದ ಮುರಲೀಧರ ರೈ (37) ಅವರು ರವಿವಾರ ಮಲಗಿದ್ದಲ್ಲೇ ಹೃದಯಾಘಾತಕ್ಕೊಳಗಾಗಿದ್ದು, ಸೋಮವಾರ ಬೆಳಗ್ಗೆ ಜೊತೆಗಿದ್ದವರಿಗೆ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ವೈದ್ಯರನ್ನು ಕರೆಸಿ ಪರೀಕ್ಷಿಸಿದಾಗ ಹೃದಯಾಘಾತದಿಂದ ಅವರು ಮೃತಪಟ್ಟಿರುವುದು ಗೊತ್ತಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ