ಮಡಂತ್ಯಾರ್ ಇಲ್ಲಿನ ಬಳ್ಳಮಂಜ ಬಳಿ ಇವತ್ತು ಸಂಜೆ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸವಾರನಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಸೇಕ್ರೆಡ್ ಹಾರ್ಟ್ ಕಾಲೇಜ್ ವಿದ್ಯಾರ್ಥಿ ಹರ್ಷಿತ್ ಎಂದು ಗುರುತಿಸಲಾಗಿದೆ. ಸಂಜೆ ಹೊತ್ತಿಗೆ ತರಗತಿ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಎರಡು ದಿನದಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ದಾರುಣ ಅಂತ್ಯ: ಮಡಂತ್ಯಾರ್ ಬಳಿಯ ಪರೆಂಕಿ ನಿವಾಸಿ ಶ್ರೀ ವಸಂತ ನಾಯಕ್ ರವರ ಪುತ್ರ ಶಿವಪ್ರಸಾದ್ (19 ವ) ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಡುಬೆಟ್ಟು ಬಳಿ ಮೊನ್ನೆ ರಾತ್ರಿ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಸಾವನಪ್ಪಿದ್ದ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?