ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಡಿಕೇರಿ : ಆಸ್ತಿ ವಿಚಾರಕ್ಕೆ ಯುವಕನ ಮೇಲೆ ಗುಂಡೇಟು – ಕ್ಷಣಮಾತ್ರದಲ್ಲಿ ತಪ್ಪಿದ ಅನಾಹುತ

Twitter
Facebook
LinkedIn
WhatsApp
Tirumala 090615 5

ಮಡಿಕೇರಿ: ಆಸ್ತಿ (Property) ವಿಚಾರವಾಗಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದು, ಬಳಿಕ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಯತ್ನಕ್ಕೂ ಮುಂದಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ.

ಕಳೆದ ಎರಡು-ಮೂರು ತಿಂಗಳಿನಿಂದ ಆಸ್ತಿ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆಯುತ್ತಿದ್ದು‌, ನಿನ್ನೆ ಇದು ತಾರಕಕ್ಕೆ ಏರಿ ಯುವಕನ ಮೇಲೆ ಗುಂಡು ಹಾರಿಸಿದ್ದ ಆರೋಪ ಕೇಳಿಬಂದಿದೆ. ಅಲ್ಲದೇ ಗುಂಡು ಹಾರಿಸಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಹೊಡೆದಾಟದಲ್ಲಿ ನಿಶ್ಚಲ್ ಎಂಬ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ನಿಶ್ಚಲ್‌ ಎಂಬ ವ್ಯಕ್ತಿಯ ಕೈಮುರಿದಿದ್ದು, ತಲೆಗೂ ಗಂಭೀರ ಪೆಟ್ಟುಯಾಗಿದೆ. ಇದಕ್ಕೂ ಮೊದಲು ನಿಶ್ಚಲ್, ತೀರ್ಥ ಎಂಬಾತನ ಮೇಲೆ ಗನ್‌ನಿಂದ ಶೂಟ್ ಮಾಡಿದ ಆರೋಪವು ಕೇಳಿ ಬಂದಿದ್ದು, ಈ ವೇಳೆ ತೀರ್ಥನ ಕೈಗೆ ಸಣ್ಣ ಗಾಯವಾಗಿದೆ. ಆದರೆ ತೀರ್ಥ ಚಲಾಯಿಸುತ್ತಿದ್ದ ಜೀಪಿಗೆ ಗುಂಡೇಟು ಬಿದ್ದಿದೆ. ಜೀಪಿನ ಸೀಟನ್ನು ಸೀಳಿದೆ. ಆದರೆ ತೀಥ ಗುಂಡೇಟಿನಿಂದ ತಪ್ಪಿಸಿಕೊಂಡಿದ್ದಾರೆ.

ಘಟನೆಯೇನು?: ಬಿಳಿಗೇರಿ ಗ್ರಾಮದಲ್ಲಿ ಇರುವ ಸುಮಾರು 7 ಎಕರೆ ಕಾಫಿ ತೋಟವನ್ನು ನಿಶ್ಚಲ್ ಇತ್ತೀಚಿಗೆ ಖರೀದಿ ಮಾಡಿದ್ದ. ಆದರೆ ಈ ಕಾಫಿ ತೋಟವನ್ನು ಕಳೆದ 30 ವರ್ಷಗಳಿಂದ ತೀರ್ಥ ಅವರ ತಂದೆ ನೋಡಿಕೊಳ್ಳುತ್ತಿದ್ದರು. ಅಲ್ಲದೇ ತೋಟದ ಜಾಗಕ್ಕೆ ದಾಖಲೆಗಳನ್ನು ಮಾಡಲು ಮುಂದಾಗಿದ್ದರು. ಆದರೆ ತೋಟವನ್ನು ಬೇರೆ ಅವರ ಕೈಯಿಂದ ನಿಶ್ಚಲ್ ಖರೀದಿ ಮಾಡಿರುವುದರಿಂದ ಈ ಪ್ರಕರಣ ಕಳೆದ 6 ತಿಂಗಳ ಹಿಂದೆಯೇ ಕೋರ್ಟ್‌ ಮೆಟ್ಟಿಲು ಏರಿತ್ತು. ಆದರೆ ತೀರ್ಥ ಕಾಫಿ ತೋಟವನ್ನು ಬೇರೆ ಅವರಿಗೆ ಕಾಫಿಗೆ ಲೀಜ್ ನೀಡಿದ್ದರು. ಇದನ್ನು ಪ್ರಶ್ನಿಸಲು ನಿಶ್ಚಲ್ ಸ್ಥಳಕ್ಕೆ ಹೋಗಿರುವಾಗ 2 ಕುಟುಂಬಗಳ ನಡುವೆ ‌ಮಾತಿಗೆ ಮಾತು ಬೆಳೆದು ಗುಂಡು ಹೊಡೆಯುವ ಹಂತಕ್ಕೆ ತಲುಪಿದೆ ಎನ್ನಲಾಗಿದೆ. 

ಘಟನಾ ಸ್ಥಳಕ್ಕೆ ಮಡಿಕೇರಿ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಭೇಟಿ ಪರಿಶೀಲನೆ ನಡೆಸಿದರು. ಸದ್ಯ ಇಬ್ಬರು ಯುವಕರಿಗೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist