ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿ ಮಂಗಳೂರಿಗೆ ಬರುವ ಕಾರ್ಯಕ್ರಮ ಫಿಕ್ಸ್. ಅಧಿಕೃತ ಘೋಷಣೆಯಷ್ಟೆ ಬಾಕಿ!

Twitter
Facebook
LinkedIn
WhatsApp
ಮೋದಿ ಮಂಗಳೂರಿಗೆ ಬರುವ ಕಾರ್ಯಕ್ರಮ ಫಿಕ್ಸ್. ಅಧಿಕೃತ ಘೋಷಣೆಯಷ್ಟೆ ಬಾಕಿ!

ಮಂಗಳೂರು: ಚುನಾವಣಾ ಪ್ರಚಾರಕ್ಕೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಬರುವ ಕಾರ್ಯಕ್ರಮ ಬಹುತೇಕ ಫಿಕ್ಸ್ ಆಗಿದ್ದು, ಆದರೆ ಯಾವಾಗ ಬರುತ್ತಾರೆ ಎಂಬುದು ಮಾಹಿತಿ ಇನ್ನು ಲಭ್ಯವಾಗಿಲ್ಲ.

ಈ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ ದಿನಾಂಕದ ಬಗ್ಗೆ ಯಾವುದೇ ಮಾಹಿತಿಯನ್ನು ಹೊರಗೆ ಹಾಕಿಲ್ಲ.

ಈ ನಡುವೆ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿಗೆ ಮೋದಿ ಬರುವ ಕಾರ್ಯಕ್ರಮದ ಅಧಿಕೃತ ಮಾಹಿತಿ ಹೊರ ಬಂದಿದೆ.

‘ಮೋದಿ ಅವರ ಸತ್ಯದ ಹಾದಿ- ಸಿದ್ದರಾಮಯ್ಯರ ಮುಳ್ಳಿನ ದಾರಿ;-ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು:ದೇಶದ ಪ್ರಧಾನಿ ನರೇಂದ್ರ ಮೋದಿ ಜೀ ಅವರು ನುಡಿದಂತೆ ನಡೆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳಿನ ಭರವಸೆಗಳನ್ನು ನೀಡುವ ಮೂಲಕ ಜನರನ್ನು ಮುಳ್ಳಿನ ಹಾದಿಯಲ್ಲಿ ನಡೆಸುತ್ತಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.

ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಸಂವಾದದಲ್ಲಿ ಅವರು ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನುಡಿದಂತೆ ನಡೆದಿದೆ. ಜಿ 20, ಉಜ್ವಲ, ಎಲ್‍ಪಿಜಿ, ಜನೌಷಧ, ಸುಕನ್ಯ ಸಮೃದ್ಧ್ಧಿ, ಮುದ್ರಾ ಯೋಜನೆಗಳಂತಹ ಇನ್ನೂ ಅನೇಕ ಪ್ರಮುಖ ಯೋಜನೆಗಳು ಇದಕ್ಕೆ ಸಾಕ್ಷಿಯಾಗಿವೆ ಎಂದು ನುಡಿದರು.

2014 ರಲ್ಲಿ ಭಾರತದ ಪ್ರಧಾನಿಯಾಗಿ ಮೋದಿಯವರು ಪ್ರಮಾಣವಚನ ಸ್ವೀಕರಿಸಿದರು. ಅವರ ಹತ್ತು ವರ್ಷಗಳ ಆಡಳಿತದಲ್ಲಿ ಮಾಡಿದಂತಹ ಸಾಧನೆಗಳು ಜನಸಾಮಾನ್ಯರನ್ನು ತಲುಪಿದೆ. ಮಹಾತ್ಮ ಗಾಂಧೀಜಿ ಅವರ ಅಂತ್ಯೋದಯ ಅನ್ನ ಯೋಜನೆಯ ಕನಸನ್ನು ಬಿಜೆಪಿ ಸರ್ಕಾರ ನನಸು ಮಾಡಿದೆ. ಆದರೆ ಕಾಂಗ್ರೆಸ್‍ನವರು ಗಾಂಧೀಜಿ ಅವರನ್ನು ಹೀಯಾಳಿಸುವಂಥ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ತಿಳಿಸಿದರು.

ರಾಜ್ಯದ 28ಕ್ಕೆ 28 ಮತ ಕ್ಷೇತ್ರಗಳು ಬಿಜೆಪಿಗೆ ಸುರಕ್ಷಿತ ಕ್ಷೇತ್ರಗಳು, 400ಕ್ಕೂ ಮೀರಿ ಕ್ಷೇತ್ರಗಳನ್ನು ಗೆದ್ದು ಮೋದಿ ಜೀ ಅವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ, ಪ್ರಕಾಶ್ ಶೇಷರಾಘವಾಚಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ