ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟ, 27 ಕುರಿಗಾಹಿಗಳ ಸಾವು

Twitter
Facebook
LinkedIn
WhatsApp
ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟ, 27 ಕುರಿಗಾಹಿಗಳ ಸಾವು

ನೈಜೀರಿಯಾ: ಜನಾಂಗೀಯ ಮತ್ತು ಧಾರ್ಮಿಕ ಉದ್ವಿಗ್ನತೆಗಳಿಗೆ ಕುಖ್ಯಾತ ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟಗೊಂಡು ಜಾನುವಾರು ಸೇರಿದಂತೆ 27 ಜನ ಕುರಿಗಾಹಿಗಳು ಮೃತಪಟ್ಟ ದುರ್ಘಟನೆ ನಡೆದಿದೆ. ನಸರವಾ, ಬೆನ್ಯೂ ರಾಜ್ಯಗಳ ಗಡಿ ಭಾಗ ರುಕುಬಿ ಬಳಿ ಕುರಿಗಾಹಿಗಳು ತಮ್ಮ ಜಾನುವಾರುಗಳನ್ನು ಮೇಯಿಸಲು ಬಂದಾಗ ಘಟನೆ ನಡೆದಿದೆ. ಬಾಬ್ ಸ್ಫೋಟದಲ್ಲಿ 27 ಜನ ಮೃತಪಟ್ಟಿದ್ದು ಹಲವರಿಗೆ ಗಾಯಗಳಾಗಿವೆ. ಈ ಬಗ್ಗೆ ನಸರವಾ ಪೊಲೀಸ್ ಕಮಿಷನರ್ ಮೈಯಾಕಿ ಮಹಮ್ಮದ್ ಬಾಬಾ ಮಾಹಿತಿ ನೀಡಿದ್ದಾರೆ.

ಇನ್ನು ಘಟನೆ ನಡೆದ ಸ್ಥಳದಲ್ಲಿ ಮತ್ತಷ್ಟು ಜನರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ. ಪೊಲೀಸ್ ಬಾಂಬ್ ತಜ್ಞರು ಸ್ಫೋಟದ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮಹಮ್ಮದ್ ಬಾಬಾ ತಿಳಿಸಿದರು.

ಮಿಲಿಟರಿ ಸ್ಟ್ರೈಕ್​ನಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ದನಗಾಹಿಗಳನ್ನು ಪ್ರತಿನಿಧಿಸುವ ಗುಂಪಿನ ಸದಸ್ಯರೊಬ್ಬರು ಮಾಹಿತಿ ನೀಡಿದ್ದರೆ. ಘಟನೆ ಸಂಬಂಧ ನೈಜೀರಿಯಾದ ವಾಯುಪಡೆಯ ವಕ್ತಾರರಿಗೆ ಮಾಹಿತಿ ಕೇಳಲಾಗಿದ್ದು ಅವರ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.

ಮಧ್ಯ ನೈಜೀರಿಯಾದಲ್ಲಿ ದನಗಾಹಿಗಳು ಮತ್ತು ರೈತರು ತಮ್ಮ ಜಾನುವಾರುಗಳಿಗೆ ಮೇವು ಮತ್ತು ನೀರಿನ ಸಮಸ್ಯೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ದಶಕಗಳ ಕಾಲದ ಈ ಸಂಘರ್ಷವು ಇತ್ತೀಚಿನ ವರ್ಷಗಳಲ್ಲಿ ಜನಾಂಗೀಯ ಮತ್ತು ಧಾರ್ಮಿಕ ಆಯಾಮವನ್ನು ಪಡೆದುಕೊಂಡಿದೆ, ಹೆಚ್ಚಿನ ಕುರುಬರು ಮುಸ್ಲಿಮರು ಮತ್ತು ರೈತರು ಹೆಚ್ಚಾಗಿ ಕ್ರಿಶ್ಚಿಯನ್ನರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ