ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು : ಮದ್ಯ ಕುಡಿಸಿ ಮಹಿಳಾ ಟೆಕ್ಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ನೈಜಿರೀಯಾ ಪ್ರಜೆಗಳನ್ನು ಬಂಧಿಸಲಾಗಿದೆ.
ಸಂತ್ರಸ್ತ ಯುವತಿ ಕಲಬುರಗಿ ಮೂಲದವರು ಎಂದು ತಿಳಿದುಬಂದಿದೆ. ಆಕೆ ನಗರದ ಸಾಫ್ಟ್ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ನೈಜಿರೀಯಾ ಮೂಲದ ಟೋನಿ (35 ವರ್ಷ), ಉಬಕಾ (35 ವರ್ಷ) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.
ಸಂತ್ರಸ್ತ ಯುವತಿಗೆ ಆರೋಪಿಯ ಪೈಕಿ ಟೋನಿ ಪರಿಚಿತನಾಗಿದ್ದ. ಟೋನಿಯ ಸ್ನೇಹಿತನಾಗಿದ್ದ ಉಬಕಾ ಕೂಡ ಯುವತಿಯನ್ನು ಪರಿಚಯ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಯುವತಿಗೆ ಇದು ಇಷ್ಟವಿರಲಿಲ್ಲ. ಯುವತಿಯ ಜೊತೆಗೆ ಸಲುಗೆಯಲ್ಲಿದ್ದ ಟೋನಿ ಪರಿಚಿತರೋರ್ವರ ಮನೆಗೆ ಹೋಗೋಣಾ ಅಂತಾ ಹೇಳಿ ಆಕೆಯನ್ನು ಉಬಕಾ ಮನೆಗೆ ಕರೆದೊಯ್ದಿದ್ದಾನೆ.
ಟೋನಿ ತನ್ನನ್ನು ಉಬಕಾ ಮನೆಗೆ ಕರೆದೊಯ್ದಿರೋದು ತಿಳಿಯುತ್ತಲೇ ಸಂತ್ರಸ್ತೆ ಆಕ್ರೋಶ ವ್ಯಕ್ತಪಡಿಸಿದ್ದಳು. ನಂತರ ಟೋನಿ ಇಬ್ಬರನ್ನೂ ಸಮಾಧನ ಪಡಿಸಿ ಸಂತ್ರಸ್ತೆಯ ಜೊತೆಗೆ ಮದ್ಯ ಸೇವನೆ ಮಾಡಿದ್ದಾರೆ. ಮದ್ಯದ ಅಮಲಿನಲ್ಲಿ ಸಂತ್ರಸ್ತೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಬಾಣಸವಾಡಿ ಠಾಣೆಯ ಪೊಲೀಸರು ವಿಚಾರಣೆ ನಡೆಸಿದ ವೇಳೆಯಲ್ಲಿ, ಯುವತಿ ಆಫ್ರಿಕಾ ಪ್ರಜೆಗಳ ಜೊತೆಗೆ ಸಂಪರ್ಕ ಹೊಂದಿದ್ದಾಳೆ ಅನ್ನೋದು ತಿಳಿದುಬಂದಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?