ಮಂಗಳೂರು: ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಮಾ.2ಕ್ಕೆ ಫಿಕ್ಸ್ ಆಗಿದೆ. ಬಿಜೆಪಿ ಬಹುಮತ ಇರುವ ಪಾಲಿಕೆ ಆಡಳಿತದಲ್ಲಿ ಮುಂದಿನ ಮೇಯರ್ ಗಾದಿ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿರುವ ಕಾರಣ ಅದೃಷ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಆಕಾಂಕ್ಷಿಗಳ ತೆರೆಮರೆ ಕಸರತ್ತು ಜೋರಾಗಿದೆ.
ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಮೊದಲ ಅವಧಿಯಲ್ಲಿ ಬಿಜೆಪಿಯ ದಿವಾಕರ್ ಪಾಂಡೇಶ್ವರ ಮೇಯರ್ ಗದ್ದುಗೆಗೇರಿದರೆ, ಎರಡನೇ ಅವಧಿಗೆ ಸಾಮಾನ್ಯ ಮೀಸಲು ನಿಗದಿಯಾದ ಕಾರಣ ಯಾವುದೇ ಜಿದ್ದಾಜಿದ್ದಿ ಇಲ್ಲದೆ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿಗೆ ಮೇಯರ್ ಹುದ್ದೆ ಒಲಿದು ಬಂದಿತ್ತು. ಇದೀಗ ಮೂರನೇ ಅವಧಿಯ ಮೀಸಲಾತಿಯೂ ಸಾಮಾನ್ಯ ಅಭ್ಯರ್ಥಿಗೆ ನಿಗದಿಯಾದ ಕಾರಣ ಬಿಜೆಪಿಯ ಕೆಲವರು ಗದ್ದುಗೆ ಏರಲು ಪ್ರಭಾವ ಬೀರುತ್ತಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸತತ ಎರಡು ಬಾರಿ ಮೇಯರ್ ಹುದ್ದೆ ಒಲಿದಿರುವುದರಿಂದ ಈ ಬಾರಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಮೇಯರ್ ಹುದ್ದೆ ಕೊಡಿಸಬೇಕು ಎಂದು ಪ್ರಬಲ ಲಾಬಿ ಶುರುವಾಗಿದೆ. ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ 22 ವಾರ್ಡ್ಗಳ ಪೈಕಿ ಬಿಜೆಪಿ 20 ವಾರ್ಡ್ಗಳಲ್ಲಿ ಜಯಭೇರಿ ಭಾರಿಸುವುದರ ಜತೆಯಲ್ಲಿ ಕ್ರಿಯಾಶೀಲ ಯುವ ಹಾಗೂ ಹಿರಿ ಸದಸ್ಯರಲ್ಲಿ ಕೆಲವರು ಪ್ರಭಾವಿ ಕಾರ್ಪೊರೇಟರ್ ಆಗಿರುವ ಕಾರಣ ಈ ಬಾರಿ ಉತ್ತರ ಕ್ಷೇತ್ರಕ್ಕೆ ಮೇಯರ್ ಹುದ್ದೆ ನೀಡಬೇಕು ಎಂಬ ಬೇಡಿಕೆ ಕೇಳಿ ಬಂದಿದೆ. ಉತ್ತರದ ಮಟ್ಟಿಗೆ 16ನೇ ಬಂಗ್ರಕೂಳೂರು ವಾರ್ಡ್ನ ಕಿರಣ್ ಕೋಡಿಕಲ್ ಹೆಸರು ಮುಂಚೂಣಿಯಲ್ಲಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?